Viral Video: ಆಧುನಿಕ ಶ್ರವಣಕುಮಾರ; ತಾಯಿ ಮತ್ತು ಗಂಗಾಜಲ ಹೊತ್ತೊಯ್ದ ಯುವಕ

Kanwar Yatra : ಈ ಶ್ರದ್ಧಾವಂತನಿಗೆ ಶಕ್ತಿಯನ್ನು ದಯಪಾಲಿಸು ಎಂದು ಕೆಲವರು. ಇಲ್ಲಿ ಇಬ್ಬರೂ ಹೈರಾಣಾಗುತ್ತಿದ್ದಾರೆ, ಇದರಿಂದ ಏನು ಪ್ರಯೋಜನ ಎಂದು ಕೆಲವರು. ಇದೆಲ್ಲವೂ ನಾಟಕ ಎಂದು ಒಂದಿಷ್ಟು ಜನ. ನೀವೇನಂತೀರಿ?

Viral Video: ಆಧುನಿಕ ಶ್ರವಣಕುಮಾರ; ತಾಯಿ ಮತ್ತು ಗಂಗಾಜಲ ಹೊತ್ತೊಯ್ದ ಯುವಕ
ಹರಿದ್ವಾರದ ಕನ್ವರ್ ಯಾತ್ರಾದಲ್ಲಿ ತಾಯಿ ಮತ್ತು ಗಂಗಾಜಲವನ್ನು ಹೊತ್ತೊಯ್ಯುತ್ತಿರುವ ಯುವಕ.
Follow us
|

Updated on:Jul 05, 2023 | 2:42 PM

Haridwar : ಶ್ರಾವಣ ಬಂತೆಂದರೆ ಎಲ್ಲೆಡೆ ಯಾತ್ರೆ ಜಾತ್ರೆಗಳ ಸಂಭ್ರಮ. ಹರಿದ್ವಾರದ ಕನ್ವರ್​ ಯಾತ್ರೆ (Kanwar Yatra) ಜುಲೈ 15ರವರೆಗೆ ನಡೆಯಲಿದೆ. ಈ ವರ್ಷ ಸುಮಾರು 2 ಮಿಲಿಯನ್​ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂಬ ಅಂದಾಜಿದೆ. ಈಗಾಗಲೇ ಈ ಯಾತ್ರೆಯಲ್ಲಿ ಭಾಗಿಯಾಗಿರುವ ಅನೇಕ ಭಕ್ತರ ವಿಡಿಯೋಗಳು ವೈರಲ್ ಆಗುತ್ತಿವೆ. ಈ ಪೈಕಿ ಯುವಕನೊಬ್ಬ ತನ್ನ ತಾಯಿ ಮತ್ತು ಗಂಗಾಜಲವನ್ನು ಶ್ರವಣಕುಮಾರನಂತೆ ಹೆಗಲ ಮೇಲೆ ಹೊತ್ತು ನಡೆಯುತ್ತಿರುವ ವಿಡಿಯೋ ಗಮನ ಸೆಳೆದಿದೆ. ಟ್ವೀಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ಎಂದಿನಂತೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ಅನ್ನು ಜು. 4ರಂದು ಎಎನ್​ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಈತನಕ ಸುಮಾರು 62,000 ಜನರು ಈ ವಿಡಿಯೋ ನೋಡಿದ್ದಾರೆ. 2,300ಕ್ಕೂ ಹೆಚ್ಚು ಜನರು ಇದನ್ನು ಇಷ್ಟಪಟ್ಟಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ತನ್ನ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಜನರು ಹರ್​ ಹರ್ ಮಹಾದೇವ, ಜೈ ಹೋ ಎಂದು ಜೈಕಾರ ಹೇಳಿದ್ದಾರೆ.

ಇದನ್ನೂ ಓದಿ : Viral Video: ಸ್ಪೈಡರ್​ಮ್ಯಾನ್​ನ ಮೂಗು ಮುರಿದ ಹುಡುಗಿಯ ಬಂಧನ

ಈ ಯಾತ್ರೆಯು ಉತ್ತರಾಖಂಡದ ಹರಿದ್ವಾರದಲ್ಲಿ ಶುರುವಾಗುತ್ತದೆ, ಗಂಗಾಜಲವನ್ನು ಸಂಗ್ರಹಿಸಿ ತಮ್ಮ ಊರಿನ ಶಿವದೇವಾಲಯಗಳಿಗೆ ಅರ್ಪಿಸುತ್ತಾರೆ. ಈ ಯಾತ್ರೆಗೆ ಬರುವವರು ಕಾಲ್ನಡಿಗೆಯಲ್ಲಿಯೇ ಸಾಗುತ್ತಾರೆ. ವಾಪಾಸು ತಮ್ಮ ಊರು, ರಾಜ್ಯಗಳಿಗೆ ಮರಳುವಾಗ ಗೌಮುಖ, ಗಂಗೋತ್ರಿ ಮತ್ತು ಬಿಹಾರದಲ್ಲಿರುವ ಸುಲ್ತಾನ್​ಗಂಜ್​ನಂಥ ಪ್ರಮುಖ ಸ್ಥಳಗಳನ್ನ ಇವರು ಸಂದರ್ಶಿಸುತ್ತಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:41 pm, Wed, 5 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ