AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಧುನಿಕ ಶ್ರವಣಕುಮಾರ; ತಾಯಿ ಮತ್ತು ಗಂಗಾಜಲ ಹೊತ್ತೊಯ್ದ ಯುವಕ

Kanwar Yatra : ಈ ಶ್ರದ್ಧಾವಂತನಿಗೆ ಶಕ್ತಿಯನ್ನು ದಯಪಾಲಿಸು ಎಂದು ಕೆಲವರು. ಇಲ್ಲಿ ಇಬ್ಬರೂ ಹೈರಾಣಾಗುತ್ತಿದ್ದಾರೆ, ಇದರಿಂದ ಏನು ಪ್ರಯೋಜನ ಎಂದು ಕೆಲವರು. ಇದೆಲ್ಲವೂ ನಾಟಕ ಎಂದು ಒಂದಿಷ್ಟು ಜನ. ನೀವೇನಂತೀರಿ?

Viral Video: ಆಧುನಿಕ ಶ್ರವಣಕುಮಾರ; ತಾಯಿ ಮತ್ತು ಗಂಗಾಜಲ ಹೊತ್ತೊಯ್ದ ಯುವಕ
ಹರಿದ್ವಾರದ ಕನ್ವರ್ ಯಾತ್ರಾದಲ್ಲಿ ತಾಯಿ ಮತ್ತು ಗಂಗಾಜಲವನ್ನು ಹೊತ್ತೊಯ್ಯುತ್ತಿರುವ ಯುವಕ.
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 05, 2023 | 2:42 PM

Share

Haridwar : ಶ್ರಾವಣ ಬಂತೆಂದರೆ ಎಲ್ಲೆಡೆ ಯಾತ್ರೆ ಜಾತ್ರೆಗಳ ಸಂಭ್ರಮ. ಹರಿದ್ವಾರದ ಕನ್ವರ್​ ಯಾತ್ರೆ (Kanwar Yatra) ಜುಲೈ 15ರವರೆಗೆ ನಡೆಯಲಿದೆ. ಈ ವರ್ಷ ಸುಮಾರು 2 ಮಿಲಿಯನ್​ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂಬ ಅಂದಾಜಿದೆ. ಈಗಾಗಲೇ ಈ ಯಾತ್ರೆಯಲ್ಲಿ ಭಾಗಿಯಾಗಿರುವ ಅನೇಕ ಭಕ್ತರ ವಿಡಿಯೋಗಳು ವೈರಲ್ ಆಗುತ್ತಿವೆ. ಈ ಪೈಕಿ ಯುವಕನೊಬ್ಬ ತನ್ನ ತಾಯಿ ಮತ್ತು ಗಂಗಾಜಲವನ್ನು ಶ್ರವಣಕುಮಾರನಂತೆ ಹೆಗಲ ಮೇಲೆ ಹೊತ್ತು ನಡೆಯುತ್ತಿರುವ ವಿಡಿಯೋ ಗಮನ ಸೆಳೆದಿದೆ. ಟ್ವೀಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ಎಂದಿನಂತೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ಅನ್ನು ಜು. 4ರಂದು ಎಎನ್​ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಈತನಕ ಸುಮಾರು 62,000 ಜನರು ಈ ವಿಡಿಯೋ ನೋಡಿದ್ದಾರೆ. 2,300ಕ್ಕೂ ಹೆಚ್ಚು ಜನರು ಇದನ್ನು ಇಷ್ಟಪಟ್ಟಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ತನ್ನ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಜನರು ಹರ್​ ಹರ್ ಮಹಾದೇವ, ಜೈ ಹೋ ಎಂದು ಜೈಕಾರ ಹೇಳಿದ್ದಾರೆ.

ಇದನ್ನೂ ಓದಿ : Viral Video: ಸ್ಪೈಡರ್​ಮ್ಯಾನ್​ನ ಮೂಗು ಮುರಿದ ಹುಡುಗಿಯ ಬಂಧನ

ಈ ಯಾತ್ರೆಯು ಉತ್ತರಾಖಂಡದ ಹರಿದ್ವಾರದಲ್ಲಿ ಶುರುವಾಗುತ್ತದೆ, ಗಂಗಾಜಲವನ್ನು ಸಂಗ್ರಹಿಸಿ ತಮ್ಮ ಊರಿನ ಶಿವದೇವಾಲಯಗಳಿಗೆ ಅರ್ಪಿಸುತ್ತಾರೆ. ಈ ಯಾತ್ರೆಗೆ ಬರುವವರು ಕಾಲ್ನಡಿಗೆಯಲ್ಲಿಯೇ ಸಾಗುತ್ತಾರೆ. ವಾಪಾಸು ತಮ್ಮ ಊರು, ರಾಜ್ಯಗಳಿಗೆ ಮರಳುವಾಗ ಗೌಮುಖ, ಗಂಗೋತ್ರಿ ಮತ್ತು ಬಿಹಾರದಲ್ಲಿರುವ ಸುಲ್ತಾನ್​ಗಂಜ್​ನಂಥ ಪ್ರಮುಖ ಸ್ಥಳಗಳನ್ನ ಇವರು ಸಂದರ್ಶಿಸುತ್ತಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:41 pm, Wed, 5 July 23

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!