AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: “ಎ ಆರ್‌ ರೆಹಮಾನ್ ನನಗೆ ತಂದೆ ಸಮಾನ”; ಮೌನ ಮುರಿದ ಮೋಹಿನಿ ಡೇ

ಮೋಹಿನಿ ಡೇ ಅವರು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿರುವ ಎ.ಆರ್. ರೆಹಮಾನ್ ಅವರ ವಿಚ್ಛೇದನದ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಅವರು ರೆಹಮಾನ್ ಅವರೊಂದಿಗಿನ ತಮ್ಮ ಸಂಬಂಧವನ್ನು ವಿವರಿಸಿದ್ದಾರೆ ಮತ್ತು ಸುಳ್ಳು ಸುದ್ದಿಗಳನ್ನು ಹರಡದಂತೆ ಮನವಿ ಮಾಡಿದ್ದಾರೆ.

Viral Video: ಎ ಆರ್‌ ರೆಹಮಾನ್ ನನಗೆ ತಂದೆ ಸಮಾನ; ಮೌನ ಮುರಿದ ಮೋಹಿನಿ ಡೇ
Mohini Dey and A.R. Rahman
ಅಕ್ಷತಾ ವರ್ಕಾಡಿ
|

Updated on: Nov 26, 2024 | 11:37 AM

Share

ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರು ತಮ್ಮ ಪತ್ನಿ ಸೈರಾ ಬಾನು ಜೊತೆಗಿನ 29 ವರ್ಷಗಳ ದಾಂಪತ್ಯ ಜೀವನಕ್ಕೆ ಕೊನೆ ಹಾಡಿದ್ದಾರೆ. ಇತ್ತೀಚಿಗಷ್ಟೇ ವಿಚ್ಛೇದನ ಪಡೆದಿದ್ದು,ಇದರ ಬೆನ್ನಲ್ಲೇ ರೆಹಮಾನ್ ಬ್ಯಾಂಡ್​ನಲ್ಲಿ ಇದ್ದ ಮೋಹಿನಿ ಡೇ ಅವರು ಪತಿ ಮಾರ್ಕ್​ ಜೊತೆ ವಿಚ್ಛೇದನ ಪಡೆದಿದ್ದರು. ಈ ಎರಡೂ ವಿಚ್ಛೇದನವನ್ನು ಲಿಂಕ್ ಮಾಡಿ ರೆಹಮಾನ್ ವಿಚ್ಛೇದನಕ್ಕೆ ಮೋಹಿನಿ ಕಾರಣ ಎಂದು ಸಾಕಷ್ಟು ಸುದ್ದಿ ಸೋಶಿಯಲ್​ ಮೀಡಿಯಾಗಳ್ಲಿ ಹಬ್ಬಿತ್ತು. ಇದೀಗ ಈ ಊಹಾಪೋಹಗಳಿಗೆ ಮೋಹಿನಿ ತೆರೆ ಎಳೆದಿದ್ದಾರೆ.

ಹೌದು ಮೋಹಿನಿ ಡೇ ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ ಎ ಆರ್‌ ರೆಹಮಾನ್ ಅವರ ಜೊತೆಗಿನ ತನ್ನ ಸಂಬಂಧದ ಬಗ್ಗೆ ಹೇಳಿಕೊಂಡಿದ್ದಾರೆ. “ನಾನು ರೆಹಮಾನ್‌ ಅವರ ಜೊತೆ ಬಾಲ್ಯದಿಂದ ಎಂಟೂವರೆ ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಅವರನ್ನು ನಾನು ತುಂಬಾ ಗೌರವಿಸುತ್ತೇನೆ. ಅಷ್ಟೇ ಅಲ್ಲದೇ ಅವರು ನನ್ನ ತಂದೆಯ ಸಮಾನ. ರೆಹಮಾನ್​ ಅವರಿಗೆ ನನ್ನ ವಯಸ್ಸಿನ ಹೆಣ್ಣು ಮಕ್ಕಳಿದ್ದಾರೆ. ವಿನಾ ಕಾರಣ ಸುಳ್ಳು ಸುದ್ದಿ ಹರಡಬೇಡಿ, ನಮ್ಮ ಗೌಪ್ಯತೆಯನ್ನು ಗೌರವಿಸಿ” ಎಂದು ಹೇಳಿಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Mohini Dey (@dey_bass)

ಇದನ್ನೂ ಓದಿ: ರೆಸ್ಟೋರೆಂಟ್‌ನ ಬಿರಿಯಾನಿಯಲ್ಲಿ ಸಿಗರೇಟ್ ಪತ್ತೆ; ವಿಡಿಯೋ ವೈರಲ್​​

dey_bass ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 17 ಗಂಟೆಗಳಲ್ಲಿ ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ