AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೆಲ್ಫಿ ತಂದ ಆಪತ್ತು; ಚಲಿಸುತ್ತಿರುವ ರೈಲಿನ ಬಳಿ ಸೆಲ್ಫಿ ತೆಗೆಯಲು ಹೋಗಿ ಆಸ್ಪತ್ರೆ ಸೇರಿದ ಯುವತಿ 

ಅಪಾಯಕಾರಿ ಜಾಗಗಳಲ್ಲಿ ಸೆಲ್ಫಿ ಕಿಕ್ಕಿಸಿಕೊಳ್ಳಲು ಹೋಗಿ ಅಪಾಯಕ್ಕೆ ಸಿಲುಕಿದಂತವರ ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಚಲಿಸುತ್ತಿರುವ ರೈಲಿನ ಬಳಿ ಸೆಲ್ಫಿ ಸ್ನೇಹಿತೆಯರೊದಿಗೆ ಸೆಲ್ಫಿ ತೆಗೆಯುತ್ತಿದ್ದ ವೇಳೆ ಯುವತಿಯೊಬ್ಬಳಿಗೆ ಟ್ರೈನ್‌ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಕುರಿತ ಆಘಾತಕಾರಿ ವಿಡಿಯೋವೊಂದು ಇದೀಗ ವೈರಲ್‌ ಆಗಿದೆ.  

Viral Video: ಸೆಲ್ಫಿ ತಂದ ಆಪತ್ತು; ಚಲಿಸುತ್ತಿರುವ ರೈಲಿನ ಬಳಿ ಸೆಲ್ಫಿ ತೆಗೆಯಲು ಹೋಗಿ ಆಸ್ಪತ್ರೆ ಸೇರಿದ ಯುವತಿ 
ಮಾಲಾಶ್ರೀ ಅಂಚನ್​
| Edited By: |

Updated on:Jun 06, 2024 | 5:04 PM

Share

ಈ ಕೆಲವೊಬ್ಬರಿಗೆ ವಿಪರೀತ ಸೆಲ್ಫಿ ಕ್ರೇಜ್.‌  ತಾವು ಹೋದಲ್ಲೆಲ್ಲಾ ಸೆಲ್ಫಿ ಕ್ಲಿಕ್ಕಿಸಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅದರಲ್ಲೂ ಕೆಲವೊಬ್ಬರಿಗೆ  ಅಪಾಯಕಾರಿ ಜಾಗಗಳಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಹುಚ್ಚು. ಹೀಗೆ ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಂಡ, ಅಪಾಯಕ್ಕೆ ಸಿಲುಕಿದಂತಹ ಅದೆಷ್ಟೋ ಜನರಿದ್ದಾರೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಚಲಿಸುತ್ತಿರುವ ರೈಲಿನ ಪಕ್ಕ ಸೆಲ್ಫಿಗೆ ಪೋಸ್‌ ನೀಡಲು ಹೋಗಿ ಯುವತಿಯೊಬ್ಬಳು ಅಪಾಯಕ್ಕೆ ಸಿಲುಕಿದ್ದಾರೆ. ಈ ಕುರಿತ ಆಘಾತಕಾರಿ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ಘಟನೆ ಬ್ರೆಜಿಲ್‌ ದೇಶದ ಉಬೆರಾಬಾ ಎಂಬಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ನಡೆದಿದ್ದು, ರೈಲು ಸಮೀಪಿಸುತ್ತಿದ್ದಂತೆ ಸೈಕ್ಲಿಸ್ಟ್‌ ಒಬ್ಬಳು ತನ್ನ ಸ್ನೇಹಿತೆಯರೊಂದಿಗೆ ಸೆಲ್ಫಿಗೆ ಪೋಸ್‌ ನೀಡುತ್ತಿರುವ ವೇಳೆ ವೇಗವಾಗಿ ಬಂದ ಗೂಡ್ಸ್‌ ಟ್ರೈನ್‌ ಆ ಯುವತಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಆಕೆ ತಲೆಗೆ ಹೆಲ್ಮೆಟ್‌ ಧರಿಸಿದ್ದ ಕಾರಣ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು  ನ್ಯೂಯಾರ್ಕ್‌ ಪೋಸ್ಟ್‌ ವರದಿ ತಿಳಿಸಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವೊಂದನ್ನು CollinRugg ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಸೈಕ್ಲಿಸ್ಟ್‌ಗಳ ತಂಡವೊಂದು ಚಲಿಸುತ್ತಿರುವ ರೈಲಿನ ಬಳಿ ಸೆಲ್ಫಿಗೆ ಪೋಸ್‌ ನೀಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಆ ಸಂದರ್ಭದಲ್ಲಿ ಅಲ್ಲೇ ರೈಲ್ವೆ ಹಳಿಯ ಪಕ್ಕದಲ್ಲಿ ನಿಂತಿದ್ದ ಯುವತಿಯೊಬ್ಬಳಿಗೆ ಗೂಡ್ಸ್‌ ಟ್ರೈನ್‌ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಬೆಂಗಳೂರಿನ ಅಪಾರ್ಟ್‌ಮೆಂಟ್​​ನಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ, ಹೇಗಿದೆ ನೊಡಿ?

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 3.7 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಜನರು ಅಪಾಯಕಾರಿ ಸ್ಥಳಗಳಲ್ಲಿ ಏಕೆ ಈ ರೀತಿ ಹುಚ್ಚಾಟಗಳನ್ನು ಮೆರೆಯುತ್ತಾರೆ ಎಂದು ನೆಟ್ಟಿಗರು ಗರಂ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Thu, 6 June 24

CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!