AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಮದುವೆಯಲ್ಲಿ ವಧು-ವರರ ಮೇಲೆ ಹಣದ ಮಳೆ; ನೋಟಿನ ಬಂಡಲ್ ಎಸೆದ ಅತಿಥಿಗಳು!

ಪಂಜಾಬ್​ನ ವಿವಾಹದ ಸಂದರ್ಭದಲ್ಲಿ ದಂಪತಿಯ ಮೇಲೆ ನೋಟುಗಳ ಬಂಡಲ್‌ಗಳನ್ನು ಸುರಿಸಿದ ಅನಿವಾಸಿ ಭಾರತೀಯ ಅತಿಥಿಗಳ ವಿಡಿಯೋ ವೈರಲ್ ಆಗಿದೆ. ವಧು-ವರರ ಮೇಲೆ ನೋಟಿನ ಬಂಡಲ್​ಗಳನ್ನೇ ಎಸೆಯುತ್ತಾ ಹಣದ ಮಳೆ ಸುರಿಸಿರುವ ಅತಿಥಿಗಳ ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ನಡೆದ ವಿವಾಹ ದೇಶದ ಗಮನ ಸೆಳೆದಿದೆ.

ಪಂಜಾಬ್ ಮದುವೆಯಲ್ಲಿ ವಧು-ವರರ ಮೇಲೆ ಹಣದ ಮಳೆ; ನೋಟಿನ ಬಂಡಲ್ ಎಸೆದ ಅತಿಥಿಗಳು!
Money Rain In Punjab Wedding
ಸುಷ್ಮಾ ಚಕ್ರೆ
|

Updated on: Feb 18, 2026 | 5:50 PM

Share

ತರಣ್ ತರಣ್, ಫೆಬ್ರವರಿ 18: ಪಂಜಾಬ್​ನ ತರಣ್ ತರಣ್ ಜಿಲ್ಲೆಯಲ್ಲಿ ನಡೆದ ಮದುವೆ (Wedding Video) ಸಮಾರಂಭದಲ್ಲಿ ವಧು-ವರರು ಅಲಂಕೃತ ವೇದಿಕೆಯ ಮೇಲೆ ನಿಂತಾಗ ಆ ಮದುವೆಗೆ ಬಂದಿದ್ದ ಅತಿಥಿಗಳು ನೋಟುಗಳ ಬಂಡಲ್‌ಗಳನ್ನು ಅವರತ್ತ ಎಸೆಯುವ ದೃಶ್ಯಗಳು ಕಂಡುಬಂದವು. ವೇದಿಕೆ ಮತ್ತು ಸುತ್ತಮುತ್ತಲಿನ ನೆಲ ಪೂರ್ತಿ ನೋಟುಗಳ ರಾಶಿಯಿಂದ ತುಂಬಿತ್ತು.

ಈ ಮದುವೆಗೆ ಹಾಜರಾಗಲು ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳಿಂದ ಅನಿವಾಸಿ ಭಾರತೀಯ (ಎನ್‌ಆರ್‌ಐ) ಅತಿಥಿಗಳು ಆಗಮಿಸಿದ್ದರು. ಮ್ಯೂಸಿಕ್ ಹಾಕುತ್ತಿದ್ದಂತೆ ಅವರು ನವವಿವಾಹಿತರ ಮೇಲೆ ಭಾರತೀಯ ರೂಪಾಯಿ ಮತ್ತು ಯುಎಸ್ ಡಾಲರ್‌ಗಳನ್ನು ಎಸೆದರು. ಈ ವೇಳೆ ಅತಿಥಿಗಳು ವೇದಿಕೆಯ ಸುತ್ತಲೂ ಡ್ಯಾನ್ಸ್ ಮಾಡುತ್ತಿದ್ದರು.

ಇದನ್ನೂ ಓದಿ: ಈ ಗ್ರಾಮದ ಸೊಸೆಯಂದಿರು ಸ್ಮಾರ್ಟ್​​ಫೋನ್ ಬಳಸುವಂತಿಲ್ಲ; ಕಾರಣ ಕೇಳಿದ್ರೆ ಆಶ್ಚರ್ಯ ಪಡುತ್ತೀರ!

ಕುಟುಂಬದ ಸದಸ್ಯರು ಮತ್ತು ಸಂಬಂಧಿಕರು ಕೂಡ ಅತಿಥಿಗಳ ಈ ಸಂಭ್ರಮಾಚರಣೆಯಲ್ಲಿ ಸೇರಿಕೊಂಡರು. ಹಣ ತುಂಬಿದ ಚೀಲಗಳಿಂದ ನೋಟುಗಳನ್ನು ತೆಗೆದು ದಂಪತಿಯತ್ತ ಎಸೆಯಲಾರಂಭಿಸಿದರು. ನೆಲದಲ್ಲಿ ಚದುರಿದ ನೋಟುಗಳನ್ನು ಸಂಗ್ರಹಿಸಿ ವಿಂಗಡಿಸುವುದನ್ನು ಕೂಡ ವಿಡಿಯೋದಲ್ಲಿ ಕಾಣಬಹುದು. ಈ ಮದುವೆಯ ಸಂದರ್ಭದಲ್ಲಿ ಸುಮಾರು 5 ಲಕ್ಷ ರೂ.ಗಳನ್ನು ವೇದಿಕೆಯ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ.

ಈ ವೈರಲ್ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕೆಲವು ಬಳಕೆದಾರರು ಈ ದೃಶ್ಯವನ್ನು ಪಂಜಾಬಿ ವಿವಾಹದ ವೈಭವ ಎಂದು ಬಣ್ಣಿಸಿದರೆ, ಇನ್ನು ಕೆಲವರು ಇಂತಹ ಅದ್ದೂರಿ ಸಂಪತ್ತಿನ ಪ್ರದರ್ಶನದ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ