AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನುಷ್ಯರಂತೆಯೇ ತಾಯಿ ಮಂಗ ಮರಿಗೆ ಸ್ನಾನ ಮಾಡಿಸುತ್ತಿದೆ! ಮರಿ ಮಂಗನ ರಗಳೆಯ ವಿಡಿಯೋ ವೈರಲ್

ತಾಯಿ ಮಂಗ ಕೊಳದಲ್ಲಿ ಸ್ನಾನ ಮಾಡಿಸಲು ಮರಿಯನನ್ನು ಕೊಳದೊಳಗೆ ಬಿಡುತ್ತಿದೆ. ಆದರೆ ಮರಿ ತಾಯಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದೆ.

Viral Video: ಮನುಷ್ಯರಂತೆಯೇ ತಾಯಿ ಮಂಗ ಮರಿಗೆ ಸ್ನಾನ ಮಾಡಿಸುತ್ತಿದೆ! ಮರಿ ಮಂಗನ ರಗಳೆಯ ವಿಡಿಯೋ ವೈರಲ್
ಮನುಷ್ಯರಂತೆಯೇ ತಾಯಿ ಮಂಗ ಮರಿಗೆ ಸ್ನಾನ ಮಾಡಿಸುತ್ತಿದೆ!
TV9 Web
| Edited By: |

Updated on:Jul 28, 2021 | 2:03 PM

Share

ಸೋಷಿಯಲ್ ಮೀಡಿಯಾಗಳಲ್ಲಿ(Social Media) ಪ್ರಾಣಿಗಳ ತಮಾಷೆಗಳ ವಿಡಿಯೋ ಹರಿದಾಡುತ್ತಲೇ ಇರುತ್ತವೆ. ಅದರಲ್ಲಿಯೂ ಮಂಗಗಳ ಚೇಷ್ಟೆಯ ವಿಡಿಯೋ ಮನಸ್ಸು ಗೆಲ್ಲುವುದಂತೂ ನಿಜ. ಇದೀಗ ವೈರಲ್ ಆಗುತ್ತಿರುವ ವಿಡಿಯೋ ಕೂಡಾ ಅಂಥದ್ದೇ. ತಾಯಿ ಮಂಗ(Monkey) ತನ್ನ ಮರಿರನ್ನು ಕೊಳದೊಳಗೆ ಇಳಿಯಲು ಹೇಳುತ್ತಿದೆ. ಆದರೆ ಮರಿ ಮಾತ್ರ ತಾಯಿಯನ್ನು ಬಿಟ್ಟು ಕೆಳಗಿಳಿಯುತ್ತಲೇ ಇಲ್ಲ. ತಾಯಿ ಮಂಗ, ಮರಿಗೆ ಸ್ನಾನ ಮಾಡಿಸಲು ಪ್ರಯತ್ನಿಸುತ್ತಿದ್ದರೂ ಮರಿ ತಪ್ಪಿಸಿಕೊಳ್ಳುತ್ತಿದೆ. ಈ ತಮಾಷೆಯ ವಿಡಿಯೋ ಇದೀಗ ಫುಲ್ ವೈರಲ್(Viral Video) ಆಗಿದೆ.

ಕೊಳದಲ್ಲಿ ಸ್ನಾನ ಮಾಡಿಸಲು ಮರಿಯನನ್ನು ಕೊಳದೊಳಗೆ ಬಿಡುತ್ತಿದೆ. ಆದರೆ ಮರಿ ತಾಯಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದೆ. ನೀರಿನಲ್ಲಿ ಇಳಿಸಿದ ಹಾಗೆಯೂ ಮೇಲೆದ್ದು ಆಚೆ_ಈಚೆಗೆ ತಿರುಗಾಡುತ್ತಿದೆ. ತಾಯಿ ಮಕ್ಕಳ ನಡುವಿನ ಈ ತಮಾಷೆಯ ವಿಡಿಯೋ ಎಲ್ಲರಿಗೂ ಇಷ್ಟವಾಗುವಂತಿದೆ.

ತಾಯಿ, ಮಗುವಿಗೆ ಸ್ನಾನ ಮಾಡುವುದನ್ನು ಹೇಳಿಕೊಡುತ್ತಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ಐಎಫ್ಎಸ್ ಅಧಿಕಾರಿ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ತಮಾಷೆಯ ವಿಡಿಯೋ ನೋಡಿದ ನೆಟ್ಟಿಗರು ನಗುವ ಎಮೋಜಿಗಳನ್ನು ಕಳುಹಿಸುತ್ತಿದ್ದಾರೆ.

ಅದ್ಭುತ ಸರ್… ಪ್ರಕೃತಿಯ ಮೇಲಿನ ನಿಮ್ಮ ಪ್ರೀತಿ ನಮಗೂ ಸ್ಪೂರ್ತಿ ತುಂಬುತ್ತದೆ. ವನ್ಯಜೀವಿ ಸಂರಕ್ಷಕನಾಗಲು ನಾನು ನಿಮ್ಮ ಹಾದಿಯಲ್ಲೆಯೇ ನಡೆಯುತ್ತೇನೆ ಎಂದು ಓರ್ವ ಟ್ವಿಟರ್ ಬಳಕೆದಾರರು ಅಧಿಕಾರಿಗೆ ಹೇಳಿದ್ದಾರೆ. ಭಾರತೀಯರು ಮಗುವನ್ನು ಕಾಲುಗಳಲ್ಲಿ ಮಲಗಿಸಿಕೊಂಡು ಸ್ನಾನ ಮಾಡಿಸುತ್ತಾರೆ ಎಂದು ಇನ್ನೋರ್ವರು ಹೇಳಿದ್ದಾರೆ. ಒಟ್ಟಿನಲ್ಲಿ ತಾಯಿ ಮಂಗ ಮತ್ತು ಮರಿಯ ವಿಡಿಯೋ ಇದೀಗ ನೆಟ್ಟಿಗರಿಗೆ ಖುಷಿ ನೀಡಿದೆ.

ಇದನ್ನೂ ಓದಿ:

Viral Video: ಟೋಲ್ ಸಿಬ್ಬಂದಿಯ ಕೆನ್ನೆಗೆ ಬಾರಿಸಿದ ಬಿಜೆಪಿ ಶಾಸಕ; ವಿಡಿಯೋ ವೈರಲ್

Viral Video: ಕೆಸರಲ್ಲಿ ತುಂಟಾಟವಾಡುತ್ತಿರುವ ಈ ಆನೆಮರಿಯನ್ನು ನೋಡಿದರೆ ಮುದ್ದಾಡಬೇಕೆನಿಸೋದು ಗ್ಯಾರಂಟಿ!

Published On - 1:59 pm, Wed, 28 July 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು