AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿಯೊಂದಿಗೆ ಮೈಂಡ್​ ಗೇಮ್ ಆಡಿ ಪ್ರಾಣ ಉಳಿಸಿಕೊಂಡ ಜಾಣಕೋತಿ!

Viral Video : ತನ್ನನ್ನು ಬೇಟೆಯಾಡಲು ಬಂದಿರುವ ಹುಲಿಯನ್ನು ಹೇಗೆ ಮರದಿಂದ ಉಪಾಯವಾಗಿ ನೆಲಕ್ಕೆ ಬೀಳಿಸುತ್ತದೆ ನೋಡಿ ಈ ಬುದ್ಧಿವಂತ ಕೋತಿ.

ಹುಲಿಯೊಂದಿಗೆ ಮೈಂಡ್​ ಗೇಮ್ ಆಡಿ ಪ್ರಾಣ ಉಳಿಸಿಕೊಂಡ ಜಾಣಕೋತಿ!
ಮರದಿಂದ ಹುಲಿಯನ್ನು ಕೆಡವಿದ ಕೋತಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Oct 01, 2022 | 11:59 AM

Share

Viral Video : ಹುಲಿ! ಈ ಹುಲಿ ಕೋತಿಯಿಂದ ಸೋಲನ್ನಪ್ಪುವುದೆ? ಸಾಧ್ಯವೇ ಇಲ್ಲ ಎಂದು ಸಲೀಸಾಲಿ ಹೇಳಿಬಿಡುತ್ತೀರಿ. ಆದರೆ ಇದು ಸಾಧ್ಯ ಎಂದಿದೆ ಇದೀಗ ವೈರಲ್ ಆಗಿರುವ ಹಳೆಯ ವಿಡಿಯೋ. ಹುಲಿಯೊಂದು ಕೋತಿಯನ್ನು ಬೇಟೆಯಾಡಲು ಬೆನ್ನಟ್ಟಿಕೊಂಡು ಬರುತ್ತದೆ. ಕೋತಿಯು ಸರಸರನೆ ಅಲ್ಲಿದ್ದ ಸಾಧಾರಣ ಎತ್ತರದ ಮರವೊಂದನ್ನು ಏರಿ ಕುಳಿತುಕೊಳ್ಳುತ್ತದೆ. ಹುಲಿಯೂ ಮರವನ್ನೇರುತ್ತದೆ. ಹೇಗೆ ತಪ್ಪಿಸಿಕೊಳ್ಳುವುದು ಎಂದು ಉಪಾಯ ಮಾಡುತ್ತಲೇ ಕೋತಿ ಎದುರಿನ ಟೊಂಗೆಗೆ ಹಾರುತ್ತದೆ. ಮುಂದೇನಾಗುತ್ತದೆ ಎಂದು ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

ಹುಲಿ ಎಷ್ಟೇ ಬಲಶಾಲಿಯಾದರೂ ಕೋತಿ ಧೈರ್ಯಗೆಡದೆ, ತನ್ನ ಬುದ್ಧಿಶಕ್ತಿಯಿಂದ ತನ್ನನ್ನು ತಾ ಪಾರುಮಾಡಿಕೊಳ್ಳುವುದರ ಬಗ್ಗೆ ಯೋಚಿಸುತ್ತದೆ. ತಕ್ಷಣವೇ ಕೋತಿ ಎದುರಿನ ಕೊಂಬೆಗೆ ಹಾರಿ ಜೋತುಬೀಳುತ್ತದೆ. ಇನ್ನೇನು ತಾನು ಕೆಳಗೆ ಬಿದ್ದೇ ಹೋಗುತ್ತೇನೆ ಎಂಬಂತೆ ನಟಿಸುತ್ತದೆ. ಇದೇ ಸರಿಯಾದ ಸಮಯ ಎಂದು ಹುಲಿ ಕೋತಿಯ ಮೇಲೆ ಆಕ್ರಮಣ ಮಾಡಬೇಕೆನ್ನುವ ಹೊತ್ತಿಗೆ ಕೋತಿ ಪಕ್ಕದ ಕೊಂಬೆಗೆ ಹಾರಿಬಿಡುತ್ತದೆ. ಬೇಟೆ ತಪ್ಪಿಸಿಕೊಂಡ ಹುಲಿ ಮರದಿಂದ ಧೊಪ್ಪನೆ ನೆಲಕ್ಕೆ ಬೀಳುತ್ತದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಾಲತ್ ಕಾ ‘ಶಿಕಾರ್’ ಎಂಬ ಶೀರ್ಷಿಕೆ ಇದಕ್ಕಿದೆ. ಸುಮಾರು ಒಂದೂ ಮುಕ್ಕಾಲು ಲಕ್ಷದಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. 8,300 ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:57 am, Sat, 1 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ