AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿಯೊಂದಿಗೆ ಮೈಂಡ್​ ಗೇಮ್ ಆಡಿ ಪ್ರಾಣ ಉಳಿಸಿಕೊಂಡ ಜಾಣಕೋತಿ!

Viral Video : ತನ್ನನ್ನು ಬೇಟೆಯಾಡಲು ಬಂದಿರುವ ಹುಲಿಯನ್ನು ಹೇಗೆ ಮರದಿಂದ ಉಪಾಯವಾಗಿ ನೆಲಕ್ಕೆ ಬೀಳಿಸುತ್ತದೆ ನೋಡಿ ಈ ಬುದ್ಧಿವಂತ ಕೋತಿ.

ಹುಲಿಯೊಂದಿಗೆ ಮೈಂಡ್​ ಗೇಮ್ ಆಡಿ ಪ್ರಾಣ ಉಳಿಸಿಕೊಂಡ ಜಾಣಕೋತಿ!
ಮರದಿಂದ ಹುಲಿಯನ್ನು ಕೆಡವಿದ ಕೋತಿ
ಶ್ರೀದೇವಿ ಕಳಸದ
|

Updated on:Oct 01, 2022 | 11:59 AM

Share

Viral Video : ಹುಲಿ! ಈ ಹುಲಿ ಕೋತಿಯಿಂದ ಸೋಲನ್ನಪ್ಪುವುದೆ? ಸಾಧ್ಯವೇ ಇಲ್ಲ ಎಂದು ಸಲೀಸಾಲಿ ಹೇಳಿಬಿಡುತ್ತೀರಿ. ಆದರೆ ಇದು ಸಾಧ್ಯ ಎಂದಿದೆ ಇದೀಗ ವೈರಲ್ ಆಗಿರುವ ಹಳೆಯ ವಿಡಿಯೋ. ಹುಲಿಯೊಂದು ಕೋತಿಯನ್ನು ಬೇಟೆಯಾಡಲು ಬೆನ್ನಟ್ಟಿಕೊಂಡು ಬರುತ್ತದೆ. ಕೋತಿಯು ಸರಸರನೆ ಅಲ್ಲಿದ್ದ ಸಾಧಾರಣ ಎತ್ತರದ ಮರವೊಂದನ್ನು ಏರಿ ಕುಳಿತುಕೊಳ್ಳುತ್ತದೆ. ಹುಲಿಯೂ ಮರವನ್ನೇರುತ್ತದೆ. ಹೇಗೆ ತಪ್ಪಿಸಿಕೊಳ್ಳುವುದು ಎಂದು ಉಪಾಯ ಮಾಡುತ್ತಲೇ ಕೋತಿ ಎದುರಿನ ಟೊಂಗೆಗೆ ಹಾರುತ್ತದೆ. ಮುಂದೇನಾಗುತ್ತದೆ ಎಂದು ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

ಹುಲಿ ಎಷ್ಟೇ ಬಲಶಾಲಿಯಾದರೂ ಕೋತಿ ಧೈರ್ಯಗೆಡದೆ, ತನ್ನ ಬುದ್ಧಿಶಕ್ತಿಯಿಂದ ತನ್ನನ್ನು ತಾ ಪಾರುಮಾಡಿಕೊಳ್ಳುವುದರ ಬಗ್ಗೆ ಯೋಚಿಸುತ್ತದೆ. ತಕ್ಷಣವೇ ಕೋತಿ ಎದುರಿನ ಕೊಂಬೆಗೆ ಹಾರಿ ಜೋತುಬೀಳುತ್ತದೆ. ಇನ್ನೇನು ತಾನು ಕೆಳಗೆ ಬಿದ್ದೇ ಹೋಗುತ್ತೇನೆ ಎಂಬಂತೆ ನಟಿಸುತ್ತದೆ. ಇದೇ ಸರಿಯಾದ ಸಮಯ ಎಂದು ಹುಲಿ ಕೋತಿಯ ಮೇಲೆ ಆಕ್ರಮಣ ಮಾಡಬೇಕೆನ್ನುವ ಹೊತ್ತಿಗೆ ಕೋತಿ ಪಕ್ಕದ ಕೊಂಬೆಗೆ ಹಾರಿಬಿಡುತ್ತದೆ. ಬೇಟೆ ತಪ್ಪಿಸಿಕೊಂಡ ಹುಲಿ ಮರದಿಂದ ಧೊಪ್ಪನೆ ನೆಲಕ್ಕೆ ಬೀಳುತ್ತದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಾಲತ್ ಕಾ ‘ಶಿಕಾರ್’ ಎಂಬ ಶೀರ್ಷಿಕೆ ಇದಕ್ಕಿದೆ. ಸುಮಾರು ಒಂದೂ ಮುಕ್ಕಾಲು ಲಕ್ಷದಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. 8,300 ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:57 am, Sat, 1 October 22

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು