AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿಯೊಂದಿಗೆ ಮೈಂಡ್​ ಗೇಮ್ ಆಡಿ ಪ್ರಾಣ ಉಳಿಸಿಕೊಂಡ ಜಾಣಕೋತಿ!

Viral Video : ತನ್ನನ್ನು ಬೇಟೆಯಾಡಲು ಬಂದಿರುವ ಹುಲಿಯನ್ನು ಹೇಗೆ ಮರದಿಂದ ಉಪಾಯವಾಗಿ ನೆಲಕ್ಕೆ ಬೀಳಿಸುತ್ತದೆ ನೋಡಿ ಈ ಬುದ್ಧಿವಂತ ಕೋತಿ.

ಹುಲಿಯೊಂದಿಗೆ ಮೈಂಡ್​ ಗೇಮ್ ಆಡಿ ಪ್ರಾಣ ಉಳಿಸಿಕೊಂಡ ಜಾಣಕೋತಿ!
ಮರದಿಂದ ಹುಲಿಯನ್ನು ಕೆಡವಿದ ಕೋತಿ
ಶ್ರೀದೇವಿ ಕಳಸದ
|

Updated on:Oct 01, 2022 | 11:59 AM

Share

Viral Video : ಹುಲಿ! ಈ ಹುಲಿ ಕೋತಿಯಿಂದ ಸೋಲನ್ನಪ್ಪುವುದೆ? ಸಾಧ್ಯವೇ ಇಲ್ಲ ಎಂದು ಸಲೀಸಾಲಿ ಹೇಳಿಬಿಡುತ್ತೀರಿ. ಆದರೆ ಇದು ಸಾಧ್ಯ ಎಂದಿದೆ ಇದೀಗ ವೈರಲ್ ಆಗಿರುವ ಹಳೆಯ ವಿಡಿಯೋ. ಹುಲಿಯೊಂದು ಕೋತಿಯನ್ನು ಬೇಟೆಯಾಡಲು ಬೆನ್ನಟ್ಟಿಕೊಂಡು ಬರುತ್ತದೆ. ಕೋತಿಯು ಸರಸರನೆ ಅಲ್ಲಿದ್ದ ಸಾಧಾರಣ ಎತ್ತರದ ಮರವೊಂದನ್ನು ಏರಿ ಕುಳಿತುಕೊಳ್ಳುತ್ತದೆ. ಹುಲಿಯೂ ಮರವನ್ನೇರುತ್ತದೆ. ಹೇಗೆ ತಪ್ಪಿಸಿಕೊಳ್ಳುವುದು ಎಂದು ಉಪಾಯ ಮಾಡುತ್ತಲೇ ಕೋತಿ ಎದುರಿನ ಟೊಂಗೆಗೆ ಹಾರುತ್ತದೆ. ಮುಂದೇನಾಗುತ್ತದೆ ಎಂದು ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

ಹುಲಿ ಎಷ್ಟೇ ಬಲಶಾಲಿಯಾದರೂ ಕೋತಿ ಧೈರ್ಯಗೆಡದೆ, ತನ್ನ ಬುದ್ಧಿಶಕ್ತಿಯಿಂದ ತನ್ನನ್ನು ತಾ ಪಾರುಮಾಡಿಕೊಳ್ಳುವುದರ ಬಗ್ಗೆ ಯೋಚಿಸುತ್ತದೆ. ತಕ್ಷಣವೇ ಕೋತಿ ಎದುರಿನ ಕೊಂಬೆಗೆ ಹಾರಿ ಜೋತುಬೀಳುತ್ತದೆ. ಇನ್ನೇನು ತಾನು ಕೆಳಗೆ ಬಿದ್ದೇ ಹೋಗುತ್ತೇನೆ ಎಂಬಂತೆ ನಟಿಸುತ್ತದೆ. ಇದೇ ಸರಿಯಾದ ಸಮಯ ಎಂದು ಹುಲಿ ಕೋತಿಯ ಮೇಲೆ ಆಕ್ರಮಣ ಮಾಡಬೇಕೆನ್ನುವ ಹೊತ್ತಿಗೆ ಕೋತಿ ಪಕ್ಕದ ಕೊಂಬೆಗೆ ಹಾರಿಬಿಡುತ್ತದೆ. ಬೇಟೆ ತಪ್ಪಿಸಿಕೊಂಡ ಹುಲಿ ಮರದಿಂದ ಧೊಪ್ಪನೆ ನೆಲಕ್ಕೆ ಬೀಳುತ್ತದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಾಲತ್ ಕಾ ‘ಶಿಕಾರ್’ ಎಂಬ ಶೀರ್ಷಿಕೆ ಇದಕ್ಕಿದೆ. ಸುಮಾರು ಒಂದೂ ಮುಕ್ಕಾಲು ಲಕ್ಷದಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. 8,300 ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:57 am, Sat, 1 October 22

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ