AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkey: ಈ ಗ್ರಾಮದಲ್ಲಿರುವ 32 ಎಕರೆ ಜಮೀನು ಪೂರ್ವಜರಿಗೇ ಮೀಸಲು!

ಅಧಿಕೃತ ದಾಖಲೆಗಳ ಪ್ರಕಾರ ಮಂಗಗಳು ಗ್ರಾಮದಲ್ಲಿ 32 ಎಕರೆ ಭೂಮಿಯನ್ನು ಹೊಂದಿವೆ ಎಂದು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಮಹಾನಿರ್ದೇಶಕ ಎಂವಿ ರಾವ್ ಅವರು ಟ್ವೀಟ್‌ ಮಾಡಿ ಖಚಿತಪಡಿಸಿದ್ದಾರೆ.

Monkey: ಈ ಗ್ರಾಮದಲ್ಲಿರುವ 32 ಎಕರೆ ಜಮೀನು ಪೂರ್ವಜರಿಗೇ ಮೀಸಲು!
ಈ ಗ್ರಾಮದಲ್ಲಿರುವ 32 ಎಕರೆ ಜಮೀನು ನಮ್ಮ ಪೂರ್ವಜರಿಗೇ ಮೀಸಲು!
TV9 Web
| Updated By: ಸಾಧು ಶ್ರೀನಾಥ್​|

Updated on: Oct 24, 2022 | 3:47 PM

Share

ಮುಂಬಯಿ: ಜಮೀನು ಅಂದ್ರೆ ಹೆಣಾನೂ ಬಾಯ್ಬಿಡುವ ಇಂದಿನ ದಿನ ಮಾನದಲ್ಲಿ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಮ್ಮ ಪೂರ್ವಜರಿಗೇ 32 ಎಕರೆ ಜಮೀನನ್ನು ಮೀಸಲು ಇಡಲಾಗಿದೆ! ನಮ್ಮ ಪೂರ್ವಜರು ಅಂದ್ರೆ ಮಂಗನಿಂದ ಮಾನವ ಎಂಬಂತೆ ಮಂಗಗಳು! ಹೌದು ಈ ಹಳ್ಳಿಯಲ್ಲಿ ಮಂಗಗಳ ಹೆಸರಿಗೆ ಗುಂಟೆ ಅಲ್ಲ, ಒಂದೆಕರೆ ಅಲ್ಲ; ಬರೋಬ್ಬರಿ 32 ಎಕ್ರೆ ಜಮೀನು ಬಿಟ್ಟುಕೊಡಲಾಗಿದೆ! ಒಸ್ಮಾನಾಬಾದ್ (Osmanabad) ಜಿಲ್ಲೆಯ ಉಪ್ಪಾ ಗ್ರಾಮದಲ್ಲಿ (Upla gram panchayat) ಈ ರೀತಿ ಮಂಗಗಳ ಹೆಸರಿನಲ್ಲಿ ಜಮೀನು ಮೀಸಲಿಡಲಾಗಿದೆ. ಈ ಗ್ರಾಮದಲ್ಲಿ ಮಂಗಗಳಿಗೆ ವಿಶೇಷವಾದ ಮರ್ಯಾದೆ ಇದೆಯಂತೆ. ಪೂರ್ವಜರ ಕಾಲದಿಂದಲೂ ಮಂಗಗಳು ಮನೆ ಬಾಗಿಲಿಗೆ ಬಂದರೆ ಅವುಗಳಿಗೆ ಊಟ ಹಾಕುವ ವಾಡಿಕೆಯಿದೆ. ಹಾಗೆಯೇ ಊರಲ್ಲಿ ಯಾರದ್ದೇ ಮದುವೆಯಾದರೂ ಅಲ್ಲಿ ಮೊದಲನೇ ಉಡುಗೊರೆಯನ್ನು ಮಂಗಕ್ಕೆ ಕೊಡಲಾಗುತ್ತದೆ.

ಈ ಊರಿನಲ್ಲಿರುವ 32 ಎಕ್ರೆ ಜಮೀನು ಊರಿನ ಮಂಗಗಳ ಹೆಸರಿನಲ್ಲಿ ನೋಂದಣಿಯಾಗಿದೆ! ಆದರೆ ಅದನ್ನು ಯಾವ ಕಾಲದಲ್ಲಿ, ಯಾರು ನೋಂದಣಿ ಮಾಡಿಸಿದರು ಎನ್ನುವ ಬಗ್ಗೆ ನಮಗೂ ಮಾಹಿತಿಯಿಲ್ಲ ಎನ್ನುತ್ತಾರೆ ಈಗಿನ ಗ್ರಾಮ ಪಂಚಾಯತ್ ಅಧ್ಯಕ್ಷರು. ಊರಿನಲ್ಲಿ ಸುಮಾರು ನೂರು ಮಂಗಗಳು ಇವೆ. ಸದ್ಯ ಮಂಗಗಳ ಹೆಸರಿನಲ್ಲಿರುವ ಜಾಗವನ್ನು ಸರಕಾರ ಪ್ಲಾಂಟೇಶನ್ ಮಾಡಿದೆ. ಮಂಗಗಳು ಒಂದೇ ಸ್ಥಳದಲ್ಲಿ ಹೆಚ್ಚು ಕಾಲ ಇರದ ಕಾರಣ ವರ್ಷಗಳು ಕಳೆದಂತೆ ಅವುಗಳ ಸಂಖ್ಯೆ ಕಡಿಮೆಯಾಗಿದೆ. ಈ ಗ್ರಾಮವು ಈಗ ಸುಮಾರು 100 ಜನರಿಗೆ ನೆಲೆಯಾಗಿದೆ ಎಂದು ಪಿಟಿಐ ವರದಿ ಮಾಡಿದೆ .

ಅಧಿಕೃತ ದಾಖಲೆಗಳ ಪ್ರಕಾರ ಮಂಗಗಳು ಗ್ರಾಮದಲ್ಲಿ 32 ಎಕರೆ ಭೂಮಿಯನ್ನು ಹೊಂದಿವೆ ಎಂದು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಮಹಾನಿರ್ದೇಶಕ ಎಂವಿ ರಾವ್ ಅವರು ಟ್ವೀಟ್‌ ಮಾಡಿ ಖಚಿತಪಡಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ