AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkey: ಈ ಗ್ರಾಮದಲ್ಲಿರುವ 32 ಎಕರೆ ಜಮೀನು ಪೂರ್ವಜರಿಗೇ ಮೀಸಲು!

ಅಧಿಕೃತ ದಾಖಲೆಗಳ ಪ್ರಕಾರ ಮಂಗಗಳು ಗ್ರಾಮದಲ್ಲಿ 32 ಎಕರೆ ಭೂಮಿಯನ್ನು ಹೊಂದಿವೆ ಎಂದು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಮಹಾನಿರ್ದೇಶಕ ಎಂವಿ ರಾವ್ ಅವರು ಟ್ವೀಟ್‌ ಮಾಡಿ ಖಚಿತಪಡಿಸಿದ್ದಾರೆ.

Monkey: ಈ ಗ್ರಾಮದಲ್ಲಿರುವ 32 ಎಕರೆ ಜಮೀನು ಪೂರ್ವಜರಿಗೇ ಮೀಸಲು!
ಈ ಗ್ರಾಮದಲ್ಲಿರುವ 32 ಎಕರೆ ಜಮೀನು ನಮ್ಮ ಪೂರ್ವಜರಿಗೇ ಮೀಸಲು!
TV9 Web
| Edited By: |

Updated on: Oct 24, 2022 | 3:47 PM

Share

ಮುಂಬಯಿ: ಜಮೀನು ಅಂದ್ರೆ ಹೆಣಾನೂ ಬಾಯ್ಬಿಡುವ ಇಂದಿನ ದಿನ ಮಾನದಲ್ಲಿ ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಮ್ಮ ಪೂರ್ವಜರಿಗೇ 32 ಎಕರೆ ಜಮೀನನ್ನು ಮೀಸಲು ಇಡಲಾಗಿದೆ! ನಮ್ಮ ಪೂರ್ವಜರು ಅಂದ್ರೆ ಮಂಗನಿಂದ ಮಾನವ ಎಂಬಂತೆ ಮಂಗಗಳು! ಹೌದು ಈ ಹಳ್ಳಿಯಲ್ಲಿ ಮಂಗಗಳ ಹೆಸರಿಗೆ ಗುಂಟೆ ಅಲ್ಲ, ಒಂದೆಕರೆ ಅಲ್ಲ; ಬರೋಬ್ಬರಿ 32 ಎಕ್ರೆ ಜಮೀನು ಬಿಟ್ಟುಕೊಡಲಾಗಿದೆ! ಒಸ್ಮಾನಾಬಾದ್ (Osmanabad) ಜಿಲ್ಲೆಯ ಉಪ್ಪಾ ಗ್ರಾಮದಲ್ಲಿ (Upla gram panchayat) ಈ ರೀತಿ ಮಂಗಗಳ ಹೆಸರಿನಲ್ಲಿ ಜಮೀನು ಮೀಸಲಿಡಲಾಗಿದೆ. ಈ ಗ್ರಾಮದಲ್ಲಿ ಮಂಗಗಳಿಗೆ ವಿಶೇಷವಾದ ಮರ್ಯಾದೆ ಇದೆಯಂತೆ. ಪೂರ್ವಜರ ಕಾಲದಿಂದಲೂ ಮಂಗಗಳು ಮನೆ ಬಾಗಿಲಿಗೆ ಬಂದರೆ ಅವುಗಳಿಗೆ ಊಟ ಹಾಕುವ ವಾಡಿಕೆಯಿದೆ. ಹಾಗೆಯೇ ಊರಲ್ಲಿ ಯಾರದ್ದೇ ಮದುವೆಯಾದರೂ ಅಲ್ಲಿ ಮೊದಲನೇ ಉಡುಗೊರೆಯನ್ನು ಮಂಗಕ್ಕೆ ಕೊಡಲಾಗುತ್ತದೆ.

ಈ ಊರಿನಲ್ಲಿರುವ 32 ಎಕ್ರೆ ಜಮೀನು ಊರಿನ ಮಂಗಗಳ ಹೆಸರಿನಲ್ಲಿ ನೋಂದಣಿಯಾಗಿದೆ! ಆದರೆ ಅದನ್ನು ಯಾವ ಕಾಲದಲ್ಲಿ, ಯಾರು ನೋಂದಣಿ ಮಾಡಿಸಿದರು ಎನ್ನುವ ಬಗ್ಗೆ ನಮಗೂ ಮಾಹಿತಿಯಿಲ್ಲ ಎನ್ನುತ್ತಾರೆ ಈಗಿನ ಗ್ರಾಮ ಪಂಚಾಯತ್ ಅಧ್ಯಕ್ಷರು. ಊರಿನಲ್ಲಿ ಸುಮಾರು ನೂರು ಮಂಗಗಳು ಇವೆ. ಸದ್ಯ ಮಂಗಗಳ ಹೆಸರಿನಲ್ಲಿರುವ ಜಾಗವನ್ನು ಸರಕಾರ ಪ್ಲಾಂಟೇಶನ್ ಮಾಡಿದೆ. ಮಂಗಗಳು ಒಂದೇ ಸ್ಥಳದಲ್ಲಿ ಹೆಚ್ಚು ಕಾಲ ಇರದ ಕಾರಣ ವರ್ಷಗಳು ಕಳೆದಂತೆ ಅವುಗಳ ಸಂಖ್ಯೆ ಕಡಿಮೆಯಾಗಿದೆ. ಈ ಗ್ರಾಮವು ಈಗ ಸುಮಾರು 100 ಜನರಿಗೆ ನೆಲೆಯಾಗಿದೆ ಎಂದು ಪಿಟಿಐ ವರದಿ ಮಾಡಿದೆ .

ಅಧಿಕೃತ ದಾಖಲೆಗಳ ಪ್ರಕಾರ ಮಂಗಗಳು ಗ್ರಾಮದಲ್ಲಿ 32 ಎಕರೆ ಭೂಮಿಯನ್ನು ಹೊಂದಿವೆ ಎಂದು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಮಹಾನಿರ್ದೇಶಕ ಎಂವಿ ರಾವ್ ಅವರು ಟ್ವೀಟ್‌ ಮಾಡಿ ಖಚಿತಪಡಿಸಿದ್ದಾರೆ.

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು