ನಾಯಿಗಳ ಮೇಲೆ ಕೋತಿಗಳ ಸೇಡು: ಒಂದೇ ತಿಂಗಳಿನಲ್ಲಿ 250 ನಾಯಿಗಳನ್ನು ಹತ್ಯೆಗೈದ ಕೋತಿಗಳ ಹಿಂಡು

ನಾಯಿಗಳು ತಮ್ಮ ಮರಿಯನ್ನು ಕೊಂದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಕೋತಿಗಳು ಒಂದೇ ಗ್ರಾಮದಲ್ಲಿ 250 ನಾಯಿಗಳನ್ನು ಹತ್ಯೆಗೈದ ಘಟನೆ ನಡೆದಿದೆ.

ನಾಯಿಗಳ ಮೇಲೆ ಕೋತಿಗಳ ಸೇಡು: ಒಂದೇ ತಿಂಗಳಿನಲ್ಲಿ 250 ನಾಯಿಗಳನ್ನು ಹತ್ಯೆಗೈದ ಕೋತಿಗಳ ಹಿಂಡು
ನಾಯಿಮರಿಯನ್ನು ಎಳೆದೊಯ್ಯತ್ತಿರುವ ಕೋತಿ
Follow us
| Updated By: Pavitra Bhat Jigalemane

Updated on: Dec 19, 2021 | 9:51 AM

ಮಹಾರಾಷ್ಟ್ರ: ಮನುಷ್ಯರು ಸೇಡಿಗಾಗಿ ಹತ್ಯೆ, ಹಲ್ಲೆ ಮಾಡುವುದನ್ನು ಕೇಳಿದ್ದೇವೆ, ಕಂಡಿದ್ದೇವೆ. ಆದರೆ ಮಹಾರಾಷ್ಟ್ರದಲ್ಲೊಂದು ವಿಲಕ್ಷಣ ಘಟನೆಯೊಂದು ವರದಿಯಾಗಿದೆ. ನಾಯಿಗಳು ತಮ್ಮ ಮರಿಯನ್ನು ಕೊಂದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಕೋತಿಗಳು ಒಂದೇ ಗ್ರಾಮದಲ್ಲಿ 250 ನಾಯಿಗಳನ್ನು ಹತ್ಯೆಗೈದ ಘಟನೆ ನಡೆದಿದೆ. ಮಹಾರಾಷ್ಟ್ರದ ಬೀಡ್​ ಜಿಲ್ಲೆಯ ಮಜಲ್​ಗಾಂವ್​ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ನಾಯಿಯೊಂದು ಕೋತಿ ಮರಿಯನ್ನು ಹಿಡಿದು ಕೊಂದು ಹಾಕಿತ್ತು. ಅದಕ್ಕೆ ಪ್ರತಿಯಾಗಿ ಕೋತಿಗಳ ಹಿಂಡು ಊರನ್ನು ಪ್ರವೇಶಿಸಿ ನಾಯಿ ಮರಿಗಳನ್ನು ತಮ್ಮ ಹಲ್ಲುಗಳಿಂದ ಕಚ್ಚುತ್ತಿವೆ. ಅಲ್ಲದೆ ಮರದ ಮೇಲೆ ಎಳೆದೊಯ್ದು ಮೇಲಿನಿಂದ ಎಸೆದು ಸಾಯಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಬಗ್ಗೆ ಹಲವು ಬಾರಿ ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಅವರು ಹಳ್ಳಿಗೆ ಬಂದು ಕೋತಿಗಳನ್ನು ಹಿಡಿಯಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗುತ್ತಿಲ್ಲ. ಇದೀಗ ಕೋತಿಗಳು ಊರಿನಲ್ಲಿ ನಾಯಿಗಳ ಮಾರಣಹೋಮವನ್ನೇ ನಡೆಸಿವೆ. ಕಳೆದ ಒಂದು ತಿಂಗಳಿನಿಂದ ಕೋತಿಗಳ ದಾಳಿಗೆ  ಊರಿನಲ್ಲಿರುವ ನಾಯಿಗಳೆಲ್ಲ ಸಾವನ್ನಪ್ಪಿವೆ. ಆದರೂ ಕೋತಿಗಳಿಗೆ ಸೇಡು ತೀರಲಿಲ್ಲ. ಇದೀಗ ಶಾಲೆಗೆ ಹೋಗುವ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೋತಿಗಳ ಹಾವಳಿಯಿಂದ ಗ್ರಾಮದಲ್ಲಿ ಹೊರಗೆ ಓಡಾಡಲೂ ಜನ ಭಯ ಪಡುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಹುಡುಕುವುದೇ ಹಳ್ಳಿಯ ಜನರಿಗೆ ಸವಾಲಾಗಿ ಪರಿಣಮಿಸಿದೆ.

ಇದೇ ರೀತಿಯ ಇನ್ನೊಂದು ಘಟನೆ ಸಪ್ಟಂಬರ್​ನಲ್ಲಿ ಕರ್ನಾಟಕದಲ್ಲೂ ನಡೆದಿದೆ. ಹೌದು. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಊರಿನಲ್ಲಿ ಕೋತಿಯೊಂದು ಗ್ರಾಮಸ್ಥರ ವಿರುದ್ಧ ಸೇಡು ತೀರಿಸಿಕೊಳ್ಳಲು 22ಕಿಮೀ ಪ್ರಯಾಣಿಸಿದ ಘಟನೆ ನಡೆದಿತ್ತು. ಶಾಲೆಯ ಆವರಣದಲ್ಲಿ ಕೋತಿ ತಿರುಗಾಟ ಆರಂಭಿಸಿದ್ದನ್ನು ಕಂಡ ಊರಿನ ಜನ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿ ಕೋತಿಯನ್ನು ಹಿಡಿದು ಕಾಡಿಗೆ ಬಿಟ್ಟದ್ದರು. ಆದರೆ ವಿಪರ್ಯಾಸ ಎಂಬಂತೆ ಒಂದೇ ವಾರದಲ್ಲಿ ಕೋತಿ ಮತ್ತೆ ಊರನ್ನು ಪ್ರವೇಶಿಸಿತ್ತು. ನಂತರ ಅರಣ್ಯ ಅಧಿಕಾರಿಗಳು ಕೋತಿಯನ್ನು ಮತ್ತೆ ಸೆರೆಹಿಡಿದು ಊರಿನಿಂದ ದೂರ ಇರುವ ಕಾಡಿಗೆ ಬಿಟ್ಟಿದ್ದರು. ಇದರಿಂದ ಕೋತಿ ಕಾಟದ ಸಮಸ್ಯೆ ಪರಿಹಾರವಾಗಿತ್ತು.

ಇದನ್ನೂ ಓದಿ:

Viral Video: ಅಮ್ಮನ ಮದುವೆಯಲ್ಲಿ ಮಗಳ ಸಂಭ್ರಮ; ಈ ವಿಡಿಯೋ ನೋಡಿದರೆ ಅಚ್ಚರಿಯಾಗದಿರದು!

ಜನರ ಕುತೂಹಲ ತಣಿಸಿದ ಗೂಗಲ್!; 2021ರಲ್ಲಿ ರಿಲೇಷನ್​ಶಿಪ್​ ಬಗ್ಗೆ ಅತ್ಯಂತ ಹೆಚ್ಚು ಕೇಳಲಾದ ಪ್ರಶ್ನೆಗಳು ಇಲ್ಲಿವೆ ನೋಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್