Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಮೇಲೆ ಕೋತಿಗಳ ಸೇಡು: ಒಂದೇ ತಿಂಗಳಿನಲ್ಲಿ 250 ನಾಯಿಗಳನ್ನು ಹತ್ಯೆಗೈದ ಕೋತಿಗಳ ಹಿಂಡು

ನಾಯಿಗಳು ತಮ್ಮ ಮರಿಯನ್ನು ಕೊಂದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಕೋತಿಗಳು ಒಂದೇ ಗ್ರಾಮದಲ್ಲಿ 250 ನಾಯಿಗಳನ್ನು ಹತ್ಯೆಗೈದ ಘಟನೆ ನಡೆದಿದೆ.

ನಾಯಿಗಳ ಮೇಲೆ ಕೋತಿಗಳ ಸೇಡು: ಒಂದೇ ತಿಂಗಳಿನಲ್ಲಿ 250 ನಾಯಿಗಳನ್ನು ಹತ್ಯೆಗೈದ ಕೋತಿಗಳ ಹಿಂಡು
ನಾಯಿಮರಿಯನ್ನು ಎಳೆದೊಯ್ಯತ್ತಿರುವ ಕೋತಿ
Follow us
TV9 Web
| Updated By: Pavitra Bhat Jigalemane

Updated on: Dec 19, 2021 | 9:51 AM

ಮಹಾರಾಷ್ಟ್ರ: ಮನುಷ್ಯರು ಸೇಡಿಗಾಗಿ ಹತ್ಯೆ, ಹಲ್ಲೆ ಮಾಡುವುದನ್ನು ಕೇಳಿದ್ದೇವೆ, ಕಂಡಿದ್ದೇವೆ. ಆದರೆ ಮಹಾರಾಷ್ಟ್ರದಲ್ಲೊಂದು ವಿಲಕ್ಷಣ ಘಟನೆಯೊಂದು ವರದಿಯಾಗಿದೆ. ನಾಯಿಗಳು ತಮ್ಮ ಮರಿಯನ್ನು ಕೊಂದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಕೋತಿಗಳು ಒಂದೇ ಗ್ರಾಮದಲ್ಲಿ 250 ನಾಯಿಗಳನ್ನು ಹತ್ಯೆಗೈದ ಘಟನೆ ನಡೆದಿದೆ. ಮಹಾರಾಷ್ಟ್ರದ ಬೀಡ್​ ಜಿಲ್ಲೆಯ ಮಜಲ್​ಗಾಂವ್​ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ನಾಯಿಯೊಂದು ಕೋತಿ ಮರಿಯನ್ನು ಹಿಡಿದು ಕೊಂದು ಹಾಕಿತ್ತು. ಅದಕ್ಕೆ ಪ್ರತಿಯಾಗಿ ಕೋತಿಗಳ ಹಿಂಡು ಊರನ್ನು ಪ್ರವೇಶಿಸಿ ನಾಯಿ ಮರಿಗಳನ್ನು ತಮ್ಮ ಹಲ್ಲುಗಳಿಂದ ಕಚ್ಚುತ್ತಿವೆ. ಅಲ್ಲದೆ ಮರದ ಮೇಲೆ ಎಳೆದೊಯ್ದು ಮೇಲಿನಿಂದ ಎಸೆದು ಸಾಯಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಬಗ್ಗೆ ಹಲವು ಬಾರಿ ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಅವರು ಹಳ್ಳಿಗೆ ಬಂದು ಕೋತಿಗಳನ್ನು ಹಿಡಿಯಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗುತ್ತಿಲ್ಲ. ಇದೀಗ ಕೋತಿಗಳು ಊರಿನಲ್ಲಿ ನಾಯಿಗಳ ಮಾರಣಹೋಮವನ್ನೇ ನಡೆಸಿವೆ. ಕಳೆದ ಒಂದು ತಿಂಗಳಿನಿಂದ ಕೋತಿಗಳ ದಾಳಿಗೆ  ಊರಿನಲ್ಲಿರುವ ನಾಯಿಗಳೆಲ್ಲ ಸಾವನ್ನಪ್ಪಿವೆ. ಆದರೂ ಕೋತಿಗಳಿಗೆ ಸೇಡು ತೀರಲಿಲ್ಲ. ಇದೀಗ ಶಾಲೆಗೆ ಹೋಗುವ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೋತಿಗಳ ಹಾವಳಿಯಿಂದ ಗ್ರಾಮದಲ್ಲಿ ಹೊರಗೆ ಓಡಾಡಲೂ ಜನ ಭಯ ಪಡುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಹುಡುಕುವುದೇ ಹಳ್ಳಿಯ ಜನರಿಗೆ ಸವಾಲಾಗಿ ಪರಿಣಮಿಸಿದೆ.

ಇದೇ ರೀತಿಯ ಇನ್ನೊಂದು ಘಟನೆ ಸಪ್ಟಂಬರ್​ನಲ್ಲಿ ಕರ್ನಾಟಕದಲ್ಲೂ ನಡೆದಿದೆ. ಹೌದು. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಊರಿನಲ್ಲಿ ಕೋತಿಯೊಂದು ಗ್ರಾಮಸ್ಥರ ವಿರುದ್ಧ ಸೇಡು ತೀರಿಸಿಕೊಳ್ಳಲು 22ಕಿಮೀ ಪ್ರಯಾಣಿಸಿದ ಘಟನೆ ನಡೆದಿತ್ತು. ಶಾಲೆಯ ಆವರಣದಲ್ಲಿ ಕೋತಿ ತಿರುಗಾಟ ಆರಂಭಿಸಿದ್ದನ್ನು ಕಂಡ ಊರಿನ ಜನ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿ ಕೋತಿಯನ್ನು ಹಿಡಿದು ಕಾಡಿಗೆ ಬಿಟ್ಟದ್ದರು. ಆದರೆ ವಿಪರ್ಯಾಸ ಎಂಬಂತೆ ಒಂದೇ ವಾರದಲ್ಲಿ ಕೋತಿ ಮತ್ತೆ ಊರನ್ನು ಪ್ರವೇಶಿಸಿತ್ತು. ನಂತರ ಅರಣ್ಯ ಅಧಿಕಾರಿಗಳು ಕೋತಿಯನ್ನು ಮತ್ತೆ ಸೆರೆಹಿಡಿದು ಊರಿನಿಂದ ದೂರ ಇರುವ ಕಾಡಿಗೆ ಬಿಟ್ಟಿದ್ದರು. ಇದರಿಂದ ಕೋತಿ ಕಾಟದ ಸಮಸ್ಯೆ ಪರಿಹಾರವಾಗಿತ್ತು.

ಇದನ್ನೂ ಓದಿ:

Viral Video: ಅಮ್ಮನ ಮದುವೆಯಲ್ಲಿ ಮಗಳ ಸಂಭ್ರಮ; ಈ ವಿಡಿಯೋ ನೋಡಿದರೆ ಅಚ್ಚರಿಯಾಗದಿರದು!

ಜನರ ಕುತೂಹಲ ತಣಿಸಿದ ಗೂಗಲ್!; 2021ರಲ್ಲಿ ರಿಲೇಷನ್​ಶಿಪ್​ ಬಗ್ಗೆ ಅತ್ಯಂತ ಹೆಚ್ಚು ಕೇಳಲಾದ ಪ್ರಶ್ನೆಗಳು ಇಲ್ಲಿವೆ ನೋಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!