AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಅಮ್ಮನೂ ಪೈಲಟ್ ಮಗಳೂ ಪೈಲಟ್, ಒಟ್ಟಿಗೇ ಒಂದೇ ವಿಮಾನದಲ್ಲಿ ಹಾರಿದ ಆ ಕ್ಷಣ!

Viral : ಕೆಲ್ಲಿ 14 ವರ್ಷದವಳಿದ್ದಾಗಲೇ ತನ್ನ ತಾಯಿಯಂತೆ ಆಕಾಶದಲ್ಲಿ ಹಾರುವ ಕನಸಿಗೆ ಬಿದ್ದವಳು. ಅವಳ ಕನಸೀಗ ನನಸಾಗಿದೆ. ವಿಡಿಯೋ ನೋಡಿ.

Trending : ಅಮ್ಮನೂ ಪೈಲಟ್ ಮಗಳೂ ಪೈಲಟ್, ಒಟ್ಟಿಗೇ ಒಂದೇ ವಿಮಾನದಲ್ಲಿ ಹಾರಿದ ಆ ಕ್ಷಣ!
ತಾಯಿ ಮಗಳ ಪೈಲಟ್ ಜೋಡಿ
TV9 Web
| Edited By: ಶ್ರೀದೇವಿ ಕಳಸದ|

Updated on:Aug 04, 2022 | 2:53 PM

Share

Viral : ಸೌತ್‌ವೆಸ್ಟ್ ಏರ್‌ಲೈನ್‌ನಲ್ಲಿ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ತಾಯಿ ಹಾಲಿ ಪೆಟಿಟ್ ಮತ್ತು ಅವರ ಮಗಳಾದ ಫರ್ಸ್ಟ್ ಆಫೀಸರ್ ಕೀಲಿ ಪೆಟಿಟ್ ಫೋಟೋ ಈಗ ನೆಟ್ಟಿಗರ ಹೃದಯವನ್ನು ಸ್ಪರ್ಶಿಸಿದೆ. ನಮ್ಮ ಏರ್​ಲೈನ್ಸ್​ನ ಮೊದಲ ತಾಯಿ-ಮಗಳು ಪೈಲಟ್ ಜೋಡಿ ಹಾಲಿ ಮತ್ತು ಕೀಲಿ, ಜುಲೈ 23ರಂದು ಡೆನ್ವರ್​ನಿಂದ ಸೇಂಟ್​ ಲೂಯಿಸ್​ಗೆ 3658 ಫ್ಲೈಟ್‌ನಲ್ಲಿ ಒಟ್ಟಿಗೆ ಹಾರಿದರು! ಎಂದು ಸಂಸ್ಥೆಯು ತಿಳಿಸಿದೆ. ಕ್ಯಾಪ್ಟನ್ ಹಾಲಿ ತನ್ನ ಮಗಳನ್ನು ವಿಮಾನದಲ್ಲಿ ಪ್ರಯಾಣಿಕರಿಗೆ ಪರಿಚಯಿಸಿದ ಕ್ಷಣ ಕ್ಯಾಮರಾದಲ್ಲಿ ಸೆರೆಯಾಗಿದ್ದು, ‘ಗುಡ್​ಮಾರ್ನಿಂಗ್​ ಅಮೆರಿಕಾ’ದಲ್ಲಿ ಈ ವರದಿ ಪ್ರಸಾರವಾಗಿದೆ. ತಾಯಿಮಗಳ ಹಳೆಯ ಫೋಟೋದೊಂದಿಗೆ ವಿಡಿಯೋ ಶುರುವಾಗಿ ವಿಮಾನದಲ್ಲಿ ಪೈಲಟ್ ಆಸನಗಳಲ್ಲಿ ಕುಳಿತುಕೊಳ್ಳುವಲ್ಲಿಗೆ ಅಂತ್ಯವಾಗುತ್ತದೆ.

ಕೆಲ್ಲಿ 14 ವರ್ಷದವಳಿದ್ದಾಗಲೇ ತನ್ನ ತಾಯಿಯಂತೆ ಆಕಾಶದಲ್ಲಿ ಹಾರುವ ಕನಸಿಗೆ ಬಿದ್ದವಳು. ಹಾಗೆಯೇ ತನ್ನ ತಾಯಿಯ ಹೆಜ್ಜೆಯನ್ನೇ ಅನುಸರಿಸುತ್ತ 2017ರಲ್ಲಿ ಸೌತ್​ವೆಸ್ಟ್​ ಏರ್​ಲೈನ್ಸ್​ನಲ್ಲಿ ಇಂಟರ್ನ್​ಶಿಪ್ ಪಡೆದು ಉದ್ಯೋಗಕ್ಕೆ ಸೇರಿದಳು. ಇದೀಗ ತಾಯಿಯಂತೆ ತಾನೂ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ.

ಇದನ್ನೂ ಓದಿ
Image
Literature: ನೆರೆನಾಡ ನುಡಿಯೊಳಗಾಡಿ; ‘ಇಡೀ ಲೋಕವೇ ನಿನ್ನನ್ನು ವಂಚಿಸುತ್ತಿದೆ, ಈಗ ನಿನ್ನ ಸರದಿ, ಲೋಕವನ್ನು ವಂಚಿಸು’
Image
Literature: ನೆರೆನಾಡ ನುಡಿಯೊಳಗಾಡಿ; ಕೆಎಸ್ ವೈಶಾಲಿ ಅನುವಾದಿಸಿದ ರುಕಿಯಾ ಶೆಖಾವತ್​ ಹುಸೇನ್ ಕಥೆ ‘ಸುಲ್ತಾನಳ ಕನಸು’
Image
Literature: ನೆರೆನಾಡ ನುಡಿಯೊಳಗಾಡಿ; ಪಾವಣ್ಣನ್ ಚಿಂತಾಮಣಿ ಕೊಡ್ಲೆಕೆರೆ ಅನುವಾದಿಸಿದ ಬಿ ಜಯಮೋಹನ್ ಕಥೆ ‘ವಿಷಸರ್ಪ’
Image
Literature: ನೆರೆನಾಡ ನುಡಿಯೊಳಗಾಡಿ; ರೇಣುಕಾ ನಿಡಗುಂದಿ ಅನುವಾದಿಸಿದ ರವೀಂದ್ರನಾಥ ಟ್ಯಾಗೋರರ ಕಥೆ ‘ಪುತ್ರಯಜ್ಞ’

ಈಗ ವೈರಲ್ ಆಗಿರುವ ಈ ವಿಡಿಯೋದಲ್ಲಿ, ತಾಯಿ ಮತ್ತು ಮಗಳು ಇಬ್ಬರೂ ತಮ್ಮ ಸಾಮಾನುಗಳೊಂದಿಗೆ ಒಂದೇ ತೆರನಾದ ಪೈಲಟ್ ಸಮವಸ್ತ್ರ ಧರಿಸಿ ಬರುತ್ತಿರುವುದನ್ನು ನೋಡಿದಾಗ ಹೆಮ್ಮೆ ಎನ್ನಿಸುತ್ತದೆ. ಒಟ್ಟಿಗೆ, ಅವರು ಕಾಕ್‌ಪಿಟ್‌ನಲ್ಲಿ ಕಾಣಿಸಿಕೊಂಡಿದ್ದನ್ನು ನೋಡಿದ ಯಾರಿಗೂ ಸಂತಸ ಉಕ್ಕದೇ ಇರದು.  ಈ ವಿಡಿಯೋ ಈತನಕ 24,850 ಕ್ಕೂ ಹೆಚ್ಚು ಲೈಕ್ಸ್ ಪಡೆದುಕೊಂಡಿದೆ.

Published On - 2:51 pm, Thu, 4 August 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್