AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಿ ಜಿಂಕೆಯನ್ನು ಉಳಿಸಲು ಹೋಗಿ ಮೊಸಳೆಗೆ ಆಹಾರವಾದ ತಾಯಿ ಜಿಂಕೆ; ತಾಯಿಯ ತ್ಯಾಗಕ್ಕೆ ಕಣ್ಣೀರು ಹಾಕಿದ ನೆಟ್ಟಿಗರು

ತಾಯಿಯ ಪ್ರೀತಿಯ ಶಕ್ತಿ, ಸೌಂದರ್ಯ ಮತ್ತು ವೀರತ್ವವನ್ನು ಯಾವುದೆ ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ತಾಯಿ ಜಿಂಕೆಯೊಂದು ತನ್ನ ಮಗುವನ್ನು ರಕ್ಷಿಸಲು ತ್ಯಾಗ ಮಾಡಿದ ಹೃದಯವಿದ್ರಾವಕ ವಿಡಿಯೋ ಇದು.

ಮರಿ ಜಿಂಕೆಯನ್ನು ಉಳಿಸಲು ಹೋಗಿ ಮೊಸಳೆಗೆ ಆಹಾರವಾದ ತಾಯಿ ಜಿಂಕೆ; ತಾಯಿಯ ತ್ಯಾಗಕ್ಕೆ ಕಣ್ಣೀರು ಹಾಕಿದ ನೆಟ್ಟಿಗರು
ಮರಿ ಜಿಂಕೆಯನ್ನು ಉಳಿಸಲು ಹೋಗಿ ಮೊಸಳೆಗೆ ಆಹಾರವಾದ ತಾಯಿ ಜಿಂಕೆ
TV9 Web
| Edited By: |

Updated on: Apr 09, 2022 | 9:15 PM

Share

viral video: ತಾಯಿ ಜಿಂಕೆ (Deer) ಗಳು ತಮ್ಮ ಸಂತತಿಯನ್ನು ತೀವ್ರವಾಗಿ ರಕ್ಷಿಸುತ್ತವೆ ಮತ್ತು ಸಾಮಾನ್ಯವಾಗಿ ತಮ್ಮ ಎರಡು ವರ್ಷಗಳವರೆಗೆ ವಿಶೇಷವಾಗಿ ತಮ್ಮ ಮರಿಗಳಿಗೆ ಹತ್ತಿರವಾಗಿರುತ್ತವೆ. ಹೆಣ್ಣು ಜಿಂಕೆ ತನ್ನ ಮಕ್ಕಳನ್ನು ಎಷ್ಟು ಪ್ರೀತಿಸುತ್ತದೆ ಎಂಬುದಕ್ಕೆ ಸಾಕ್ಷಿ ಎನ್ನುವಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಏಪ್ರಿಲ್ 6 ರಂದು ಐಎಎಸ್ ಅಧಿಕಾರಿ ಸೋನಾಲ್ ಗೋಯೆಲ್ ಅವರು ಟ್ವಿಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಇಲ್ಲಿಯವರೆಗೆ 124k ವೀಕ್ಷಣೆಗಳು ಮತ್ತು 8k ಲೈಕ್‌ಗಳನ್ನು ಪಡೆದುಕೊಂಡಿದೆ. ಹೃದಯ ವಿದ್ರಾವಕ ವಿಡಿಯೋದಲ್ಲಿ ಜಿಂಕೆಯೊಂದು ನದಿಯಲ್ಲಿ ಈಜುತ್ತಿರುವಾಗ ಮೊಸಳೆಯು ಅದನ್ನು ಬೇಟೆಯಾಡಲು ಅದರ ಕಡೆಗೆ ಧಾವಿಸುತ್ತದೆ. ಇದನ್ನು ನೋಡಿದ ತಾಯಿ ಜಿಂಕೆ ತಕ್ಷಣವೇ ನೀರಿಗೆ ಹಾರಿ ತನ್ನ ಮರಿ ಜಿಂಕೆಯ ಜೀವ ಉಳಿಸುತ್ತದೆ. ಜಿಂಕೆ ಮರಿ ದಡ ತಲುಪಿದ ನಂತರ, ತಾಯಿ ಜಿಂಕೆಯು ಮೊಸಳೆಗೆ ತನ್ನನ್ನು ಬೇಟೆಯಾಗಿ ತೆಗೆದುಕೊಳ್ಳಲು ಅವಕಾಶ ನೀಡುತ್ತದೆ. ಮೊಸಳೆ ತನ್ನ ಚುಪಾದ ಹಲ್ಲುಗಳಿಂದ ಜಿಂಕೆಯನ್ನು ಕೊಂದು ಅದನ್ನು ತಿನ್ನುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ತಾಯಿಯ ಪ್ರೀತಿಯ ಶಕ್ತಿ, ಸೌಂದರ್ಯ ಮತ್ತು ವೀರತ್ವವನ್ನು ಯಾವುದೆ ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ತಾಯಿ ಜಿಂಕೆಯೊಂದು ತನ್ನ ಮಗುವನ್ನು ರಕ್ಷಿಸಲು ತ್ಯಾಗ ಮಾಡಿದ ಹೃದಯವಿದ್ರಾವಕ ವಿಡಿಯೋ ಇದು. ನಿಮ್ಮ ಪೋಷಕರು ಮತ್ತು ಕುಟುಂಬವನ್ನು ಎಂದಿಗೂ ನಿರ್ಲಕ್ಷಿಸಬೇಡಿ ಎಂದು ಇದು ನಮಗೆ ನೆನಪಿಸುತ್ತದೆ. ಅವರನ್ನು ಗೌರವಿಸಿ ಮತ್ತು ನಿಮ್ಮ ಸರದಿ ಬಂದಾಗ ಅವರನ್ನು ನೋಡಿಕೊಳ್ಳಿ ಎಂದು ಅಧಿಕಾರಿ ವಿಡಿಯೋದೊಂದಿಗೆ ಟ್ವೀಟ್ ಮಾಡಿದ್ದಾರೆ. ಜಿಂಕೆಗಳು ವೀರಾವೇಶದಿಂದ ಬಲಿಯಾಗುತ್ತಿರುವುದು ನೆಟ್ಟಿಗರ ಕಣ್ಣಲ್ಲಿ ನೀರು ತರಿಸಿದೆ. ಟ್ವಿಟರ್ ಬಳಕೆದಾರರು ಆಕೆಯ ನಿಸ್ವಾರ್ಥತೆ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ. ಭಾವನಾತ್ಮಕವಾಗುವುದು !!! ನಿಜವಾದ ಪಾಠ.. ತಾಯಿ ತಾಯಿನೇ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:

ಮಂಗಳೂರು: ಡಿವೈಡರ್​​ ಹಾರಿ ಸ್ಕೂಟಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್