AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಿ ಜಿಂಕೆಯನ್ನು ಉಳಿಸಲು ಹೋಗಿ ಮೊಸಳೆಗೆ ಆಹಾರವಾದ ತಾಯಿ ಜಿಂಕೆ; ತಾಯಿಯ ತ್ಯಾಗಕ್ಕೆ ಕಣ್ಣೀರು ಹಾಕಿದ ನೆಟ್ಟಿಗರು

ತಾಯಿಯ ಪ್ರೀತಿಯ ಶಕ್ತಿ, ಸೌಂದರ್ಯ ಮತ್ತು ವೀರತ್ವವನ್ನು ಯಾವುದೆ ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ತಾಯಿ ಜಿಂಕೆಯೊಂದು ತನ್ನ ಮಗುವನ್ನು ರಕ್ಷಿಸಲು ತ್ಯಾಗ ಮಾಡಿದ ಹೃದಯವಿದ್ರಾವಕ ವಿಡಿಯೋ ಇದು.

ಮರಿ ಜಿಂಕೆಯನ್ನು ಉಳಿಸಲು ಹೋಗಿ ಮೊಸಳೆಗೆ ಆಹಾರವಾದ ತಾಯಿ ಜಿಂಕೆ; ತಾಯಿಯ ತ್ಯಾಗಕ್ಕೆ ಕಣ್ಣೀರು ಹಾಕಿದ ನೆಟ್ಟಿಗರು
ಮರಿ ಜಿಂಕೆಯನ್ನು ಉಳಿಸಲು ಹೋಗಿ ಮೊಸಳೆಗೆ ಆಹಾರವಾದ ತಾಯಿ ಜಿಂಕೆ
TV9 Web
| Edited By: |

Updated on: Apr 09, 2022 | 9:15 PM

Share

viral video: ತಾಯಿ ಜಿಂಕೆ (Deer) ಗಳು ತಮ್ಮ ಸಂತತಿಯನ್ನು ತೀವ್ರವಾಗಿ ರಕ್ಷಿಸುತ್ತವೆ ಮತ್ತು ಸಾಮಾನ್ಯವಾಗಿ ತಮ್ಮ ಎರಡು ವರ್ಷಗಳವರೆಗೆ ವಿಶೇಷವಾಗಿ ತಮ್ಮ ಮರಿಗಳಿಗೆ ಹತ್ತಿರವಾಗಿರುತ್ತವೆ. ಹೆಣ್ಣು ಜಿಂಕೆ ತನ್ನ ಮಕ್ಕಳನ್ನು ಎಷ್ಟು ಪ್ರೀತಿಸುತ್ತದೆ ಎಂಬುದಕ್ಕೆ ಸಾಕ್ಷಿ ಎನ್ನುವಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಏಪ್ರಿಲ್ 6 ರಂದು ಐಎಎಸ್ ಅಧಿಕಾರಿ ಸೋನಾಲ್ ಗೋಯೆಲ್ ಅವರು ಟ್ವಿಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಇಲ್ಲಿಯವರೆಗೆ 124k ವೀಕ್ಷಣೆಗಳು ಮತ್ತು 8k ಲೈಕ್‌ಗಳನ್ನು ಪಡೆದುಕೊಂಡಿದೆ. ಹೃದಯ ವಿದ್ರಾವಕ ವಿಡಿಯೋದಲ್ಲಿ ಜಿಂಕೆಯೊಂದು ನದಿಯಲ್ಲಿ ಈಜುತ್ತಿರುವಾಗ ಮೊಸಳೆಯು ಅದನ್ನು ಬೇಟೆಯಾಡಲು ಅದರ ಕಡೆಗೆ ಧಾವಿಸುತ್ತದೆ. ಇದನ್ನು ನೋಡಿದ ತಾಯಿ ಜಿಂಕೆ ತಕ್ಷಣವೇ ನೀರಿಗೆ ಹಾರಿ ತನ್ನ ಮರಿ ಜಿಂಕೆಯ ಜೀವ ಉಳಿಸುತ್ತದೆ. ಜಿಂಕೆ ಮರಿ ದಡ ತಲುಪಿದ ನಂತರ, ತಾಯಿ ಜಿಂಕೆಯು ಮೊಸಳೆಗೆ ತನ್ನನ್ನು ಬೇಟೆಯಾಗಿ ತೆಗೆದುಕೊಳ್ಳಲು ಅವಕಾಶ ನೀಡುತ್ತದೆ. ಮೊಸಳೆ ತನ್ನ ಚುಪಾದ ಹಲ್ಲುಗಳಿಂದ ಜಿಂಕೆಯನ್ನು ಕೊಂದು ಅದನ್ನು ತಿನ್ನುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ತಾಯಿಯ ಪ್ರೀತಿಯ ಶಕ್ತಿ, ಸೌಂದರ್ಯ ಮತ್ತು ವೀರತ್ವವನ್ನು ಯಾವುದೆ ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ತಾಯಿ ಜಿಂಕೆಯೊಂದು ತನ್ನ ಮಗುವನ್ನು ರಕ್ಷಿಸಲು ತ್ಯಾಗ ಮಾಡಿದ ಹೃದಯವಿದ್ರಾವಕ ವಿಡಿಯೋ ಇದು. ನಿಮ್ಮ ಪೋಷಕರು ಮತ್ತು ಕುಟುಂಬವನ್ನು ಎಂದಿಗೂ ನಿರ್ಲಕ್ಷಿಸಬೇಡಿ ಎಂದು ಇದು ನಮಗೆ ನೆನಪಿಸುತ್ತದೆ. ಅವರನ್ನು ಗೌರವಿಸಿ ಮತ್ತು ನಿಮ್ಮ ಸರದಿ ಬಂದಾಗ ಅವರನ್ನು ನೋಡಿಕೊಳ್ಳಿ ಎಂದು ಅಧಿಕಾರಿ ವಿಡಿಯೋದೊಂದಿಗೆ ಟ್ವೀಟ್ ಮಾಡಿದ್ದಾರೆ. ಜಿಂಕೆಗಳು ವೀರಾವೇಶದಿಂದ ಬಲಿಯಾಗುತ್ತಿರುವುದು ನೆಟ್ಟಿಗರ ಕಣ್ಣಲ್ಲಿ ನೀರು ತರಿಸಿದೆ. ಟ್ವಿಟರ್ ಬಳಕೆದಾರರು ಆಕೆಯ ನಿಸ್ವಾರ್ಥತೆ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ. ಭಾವನಾತ್ಮಕವಾಗುವುದು !!! ನಿಜವಾದ ಪಾಠ.. ತಾಯಿ ತಾಯಿನೇ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:

ಮಂಗಳೂರು: ಡಿವೈಡರ್​​ ಹಾರಿ ಸ್ಕೂಟಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?