AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲು ಹಳಿ ದಾಟಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ತಾಯಾನೆ ಸಾಥ್‌, ವೈರಲ್‌ ಆಯ್ತು ದೃಶ್ಯ

ಮರಿಯಾನೆ ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ತನ್ನ ತಾಯಿಯನ್ನು ಹಿಂಬಾಲಿಸುತ್ತಿದ್ದರೆ ನೋಡಲು ಎರಡು ಕಣ್ಣು ಸಾಲದು. ಇದೀಗ ಮರಿಯಾನೆಯೊಂದು ರೈಲು ಹಳಿ ದಾಟಲು ಕಷ್ಟ ಪಡುತ್ತಿದ್ದು, ತಾಯಾನೆ ತನ್ನ ಕಂದಮ್ಮನಿಗೆ ಮಾರ್ಗದರ್ಶನ ನೀಡಿದೆ. ಈ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಕಾಮೆಂಟ್‌ ಮಾಡಿ ತಾಯಿಯ ಪ್ರೀತಿ ಮುಂದೆ ಎಲ್ಲವೂ ಶೂನ್ಯ ಎಂದಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರೈಲು ಹಳಿ ದಾಟಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ತಾಯಾನೆ ಸಾಥ್‌, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 15, 2026 | 11:43 AM

Share

ತಾಯಿಯೇ ಪ್ರೀತಿಯೇ ಹಾಗೆ, ವಿವರಿಸಲು ಪದಗಳೇ ಇಲ್ಲ. ಪ್ರಾಣಿಗಳು ಕೂಡ ತನ್ನ ಕಂದಮ್ಮಗಳ ಮೇಲೆ ಕಾಳಜಿ ವಹಿಸುತ್ತವೆ, ತಪ್ಪು ಮಾಡಿದರೆ ಗದರುತ್ತವೆ. ಇದೀಗ ತಾಯಾನೆ (mother elephant) ತನ್ನ ಮರಿಯನ್ನು ಎಷ್ಟು ಕೇರ್ ಮಾಡುತ್ತದೆ ಎನ್ನುವುದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ಹೌದು, ಮರಿಯಾನೆ ರೈಲು ಹಳಿ ದಾಟಲು ಕಷ್ಟ ಪಡುತ್ತಿದೆ. ಇದೇ ವೇಳೆ ತಾಯಿ ಆನೆ ತನ್ನ ಕಂದಮ್ಮನನ್ನು ರೈಲು ಹಳಿ ದಾಟಿಸಿ ತನ್ನ ಜತೆಗೆ ಕರೆದುಕೊಂಡು ಹೋಗಿರುವ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ.

ಎಲಿಫೆಂಟ್ ಸೆಕ್ಯೂರ್ (elephantssecures) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ರೈಲು ಹಳಿ ದಾಟಲು ಕಷ್ಟ ಪಡುತ್ತಿರುವುದನ್ನು ಕಾಣಬಹುದು. ಈ ಪುಟಾಣಿ ಆನೆಯ ಹಿಂಭಾಗದಲ್ಲಿದ್ದ ತಾಯಾನೆ ತನ್ನ ಕಂದಮ್ಮ ಬೀಳದಂತೆ ತಡೆದಿದೆ. ರೈಲು ಹಳಿ ದಾಟುವುದು ಹೇಗೆಂದು ಮಾರ್ಗದರ್ಶನ ಮಾಡಿದ್ದು, ತನ್ನ ಸೊಂಡಿಲಿನಿಂದ ಮರಿಯಾನೆಯನ್ನು ಮೆಲ್ಲನೆ ಮುಂದಕ್ಕೆ ದೂಡುತ್ತಾ ಹಳಿ ದಾಟಿಸಿರುವುದನ್ನು ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಎದ್ದು ನಿಂತು ನಡೆಯಲು ಪ್ರಯತ್ನಿಸುತ್ತಿದ್ದ ಕಂದಮ್ಮನನ್ನು ಬೀಳದಂತೆ ತಡೆದ ತಾಯಾನೆ

ಈ ವಿಡಿಯೋ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮುದ್ದಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬುದ್ಧಿವಂತ ಆನೆ ಎಂದಿದ್ದಾರೆ. ಇನ್ನೊಬ್ಬರು, ಆನೆಗೆ ಈ ರೈಲ್ವೆ ಟ್ರ್ಯಾಕ್ ಡೇಂಜರ್ಸ್ ಎಂಬುದು ತಿಳಿದಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?