AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲು ಹಳಿ ದಾಟಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ತಾಯಾನೆ ಸಾಥ್‌, ವೈರಲ್‌ ಆಯ್ತು ದೃಶ್ಯ

ಮರಿಯಾನೆ ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ತನ್ನ ತಾಯಿಯನ್ನು ಹಿಂಬಾಲಿಸುತ್ತಿದ್ದರೆ ನೋಡಲು ಎರಡು ಕಣ್ಣು ಸಾಲದು. ಇದೀಗ ಮರಿಯಾನೆಯೊಂದು ರೈಲು ಹಳಿ ದಾಟಲು ಕಷ್ಟ ಪಡುತ್ತಿದ್ದು, ತಾಯಾನೆ ತನ್ನ ಕಂದಮ್ಮನಿಗೆ ಮಾರ್ಗದರ್ಶನ ನೀಡಿದೆ. ಈ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಕಾಮೆಂಟ್‌ ಮಾಡಿ ತಾಯಿಯ ಪ್ರೀತಿ ಮುಂದೆ ಎಲ್ಲವೂ ಶೂನ್ಯ ಎಂದಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರೈಲು ಹಳಿ ದಾಟಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ತಾಯಾನೆ ಸಾಥ್‌, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 15, 2026 | 11:43 AM

Share

ತಾಯಿಯೇ ಪ್ರೀತಿಯೇ ಹಾಗೆ, ವಿವರಿಸಲು ಪದಗಳೇ ಇಲ್ಲ. ಪ್ರಾಣಿಗಳು ಕೂಡ ತನ್ನ ಕಂದಮ್ಮಗಳ ಮೇಲೆ ಕಾಳಜಿ ವಹಿಸುತ್ತವೆ, ತಪ್ಪು ಮಾಡಿದರೆ ಗದರುತ್ತವೆ. ಇದೀಗ ತಾಯಾನೆ (mother elephant) ತನ್ನ ಮರಿಯನ್ನು ಎಷ್ಟು ಕೇರ್ ಮಾಡುತ್ತದೆ ಎನ್ನುವುದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ಹೌದು, ಮರಿಯಾನೆ ರೈಲು ಹಳಿ ದಾಟಲು ಕಷ್ಟ ಪಡುತ್ತಿದೆ. ಇದೇ ವೇಳೆ ತಾಯಿ ಆನೆ ತನ್ನ ಕಂದಮ್ಮನನ್ನು ರೈಲು ಹಳಿ ದಾಟಿಸಿ ತನ್ನ ಜತೆಗೆ ಕರೆದುಕೊಂಡು ಹೋಗಿರುವ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ.

ಎಲಿಫೆಂಟ್ ಸೆಕ್ಯೂರ್ (elephantssecures) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ರೈಲು ಹಳಿ ದಾಟಲು ಕಷ್ಟ ಪಡುತ್ತಿರುವುದನ್ನು ಕಾಣಬಹುದು. ಈ ಪುಟಾಣಿ ಆನೆಯ ಹಿಂಭಾಗದಲ್ಲಿದ್ದ ತಾಯಾನೆ ತನ್ನ ಕಂದಮ್ಮ ಬೀಳದಂತೆ ತಡೆದಿದೆ. ರೈಲು ಹಳಿ ದಾಟುವುದು ಹೇಗೆಂದು ಮಾರ್ಗದರ್ಶನ ಮಾಡಿದ್ದು, ತನ್ನ ಸೊಂಡಿಲಿನಿಂದ ಮರಿಯಾನೆಯನ್ನು ಮೆಲ್ಲನೆ ಮುಂದಕ್ಕೆ ದೂಡುತ್ತಾ ಹಳಿ ದಾಟಿಸಿರುವುದನ್ನು ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಎದ್ದು ನಿಂತು ನಡೆಯಲು ಪ್ರಯತ್ನಿಸುತ್ತಿದ್ದ ಕಂದಮ್ಮನನ್ನು ಬೀಳದಂತೆ ತಡೆದ ತಾಯಾನೆ

ಈ ವಿಡಿಯೋ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮುದ್ದಾಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬುದ್ಧಿವಂತ ಆನೆ ಎಂದಿದ್ದಾರೆ. ಇನ್ನೊಬ್ಬರು, ಆನೆಗೆ ಈ ರೈಲ್ವೆ ಟ್ರ್ಯಾಕ್ ಡೇಂಜರ್ಸ್ ಎಂಬುದು ತಿಳಿದಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ