AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮರಿಯನ್ನು ರಕ್ಷಿಸಲು ಮೊಸಳೆಯನ್ನು ಕೊಂದ ತಾಯಿ ಆನೆ; ವಿಡಿಯೋ ವೈರಲ್

ಶಾಂತಿಯುತ ಪ್ರಾಣಿಗಳಲ್ಲಿ ಆನೆಯೂ ಕೂಡಾ ಒಂದು. ಆದರೆ ತನಗೆ ಮತ್ತು ತನ್ನ ಸಂತತಿ ಮೇಲೆ ದಾಳಿ ನಡೆದಾಗ ರಕ್ಷಣೆಗಾಗಿ ಆಕ್ರಮಣಕಾರಿಯಾಗಿ ಹೋರಾಟ ನಡೆಸುತ್ತದೆ.

ತನ್ನ ಮರಿಯನ್ನು ರಕ್ಷಿಸಲು ಮೊಸಳೆಯನ್ನು ಕೊಂದ ತಾಯಿ ಆನೆ; ವಿಡಿಯೋ ವೈರಲ್
ಮೊಸಳೆಯನ್ನು ಕೊಲ್ಲುತ್ತಿರುವ ಆನೆ
TV9 Web
| Edited By: |

Updated on: Oct 21, 2021 | 11:40 AM

Share

ತನಗೆ ನೋವಾದರೂ ಪರವಾಗಿಲ್ಲ, ತನ್ನ ಮಕ್ಕಳಿಗೆ ಏನೂ ಆಗಬಾರದು ಅಂತ ಯೋಚಿಸುವ ಜಗತ್ತಿನ ಏಕೈಕ ಜೀವಿ ಎಂದರೆ ಅದು ತಾಯಿ. ಮನುಷ್ಯರು ಮಾತ್ರವಲ್ಲ ಪ್ರಾಣಿ, ಪಕ್ಷಿಗಳಿಗೂ ತನ್ನ ಮರಿಗಳೆಂದರೆ ಅಷ್ಟೇ ಕಾಳಜಿ ಇರುತ್ತದೆ. ತನ್ನ ಮರಿಗಳಿಗೆ ತೊಂದರೆ ಕೊಡಲು ಯಾರಾದರೂ ಬಂದರೆ ಕೊನೆ ಉಸಿರು ಇರುವವರೆಗೂ ಹೋರಾಡುತ್ತವೆ. ತಮ್ಮ ಸಂತತಿಯನ್ನು ರಕ್ಷಿಸಲು ಜೀವವನ್ನೇ ಒತ್ತೆ ಇಡುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ಜಾಂಬಿಯಾದಲ್ಲಿ ಒಂದು ಘಟನೆ ನಡೆದಿದ್ದು, ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶಾಂತಿಯುತ ಪ್ರಾಣಿಗಳಲ್ಲಿ ಆನೆಯೂ ಕೂಡಾ ಒಂದು. ಆದರೆ ತನಗೆ ಮತ್ತು ತನ್ನ ಸಂತತಿ ಮೇಲೆ ದಾಳಿ ನಡೆದಾಗ ರಕ್ಷಣೆಗಾಗಿ ಆಕ್ರಮಣಕಾರಿಯಾಗಿ ಹೋರಾಟ ನಡೆಸುತ್ತದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಕೂಡಾ ಆನೆ ಮತ್ತು ಮೊಸಳೆ ಸಂಘರ್ಷ. ತಾಯಿ ಆನೆಯೊಂದು ತನ್ನ ಮರಿಯನ್ನು ರಕ್ಷಿಸಲು ಮೊಸಳೆಯನ್ನು ಕೊಂದಿದೆ. ಹೆಣ್ಣು ಆನೆ ಕರುವನ್ನು ರಕ್ಷಿಸಲು ಮೊಸಳೆಯನ್ನು ಕೊಂದ ದೃಶ್ಯವನ್ನು ಹನ್ಸ್ ಹೆನ್ರಿಕ್ ಹಾಹರ್ ಎಂಬುವವರು ಸಫಾರಿಗೆ ಹೋಗಿದ್ದಾಗ ಸೆರೆಹಿಡಿದಿದ್ದಾರೆ.

ಇನ್ನು ಆನೆ ತನ್ನ ಸೊಂಡಿಲು ಮತ್ತು ತಲೆಯಿಂದ ಮೊಸಳೆಯನ್ನು ಕೊಲ್ಲಲು ಮುಂದಾಗಿದೆ. ಮಾತ್ರವಲ್ಲದೇ ಕಾಲಿನಿಂದ ತುಳಿದಿದ್ದು, ಈ ದೃಶ್ಯಗಳನ್ನು ವಿಡಿಯೋದಲ್ಲಿ ಕಾಣಬಹುದು. ಹೆಣ್ಣು ಆನೆಗೆ ದಂತ ಇಲ್ಲದ ಕಾರಣ ಮೊಸಳೆಯನ್ನು ಕೊಲ್ಲಲು ಬಾಯಿಯನ್ನು ಬಳಸಿದೆ. ಆನೆ ನಿರಂತರವಾಗಿ ಮೊಸಳೆಯನ್ನು ತುಳಿದು ಕೊಂದಿದೆ. ಈ ಎಲ್ಲಾ ದೃಶ್ಯಗಳನ್ನು ಸಫಾರಿಗೆ ಹೋದ ಹನ್ಸ್ ಹೆನ್ರಿಕ್ ಹಾಹರ್ ಸೆರೆಹಿಡಿದಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, 4 ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಹಲವರು ಕಾಮೆಂಟ್ ಮೂಲಕ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ

Viral Video: ತಮ್ಮ ಪೇಟವನ್ನೇ ಹಗ್ಗವನ್ನಾಗಿಸಿ ಜಲಪಾತಕ್ಕೆ ಸಿಕ್ಕಿ ಜೀವ ಕಳೆದುಕೊಳ್ಳುತ್ತಿದ್ದ ಇಬ್ಬರನ್ನು ರಕ್ಷಿಸಿದ ಸಿಖ್ಖರ ತಂಡ

Viral Video: ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆ; ರಕ್ಷಿಸಿದ ಅರಣ್ಯ ಅಧಿಕಾರಿಗಳು

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ