AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಓಡ್ಬೇಡ ಕಂದಮ್ಮ, ಬಿದ್ದೋಗ್ತೀಯಾ; ಪುಟ್ಟ ಪುಟ್ಟ ಹೆಜ್ಜೆ ಓಡುತ್ತಿರುವ ಕಂದನನ್ನು ಬೀಳದಂತೆ ತಡೆದ ತಾಯಾನೆ

ಮರಿಯಾನೆಗಳ ಆಟ ತುಂಟಾಟಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಮರಿ ಆನೆ ತುಂಟಾಟ ಮಾಡುತ್ತಿದ್ರೆ ತಾಯಾನೆ ಗದರುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಮರಿಯಾನೆಯೊಂದು ಓಡುತ್ತಿದ್ದರೆ ತಾಯಾನೆಯೂ ಅದರ ಜತೆಗೆ ಓಡುತ್ತಾ ಬೀಳದಂತೆ ಕಾಳಜಿ ವಹಿಸಿದೆ. ಹೃದಯಕ್ಕೆ ಹತ್ತಿರವಾಗುವ ವಿಡಿಯೋ ವೈರಲ್‌ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಓಡ್ಬೇಡ ಕಂದಮ್ಮ, ಬಿದ್ದೋಗ್ತೀಯಾ; ಪುಟ್ಟ ಪುಟ್ಟ ಹೆಜ್ಜೆ ಓಡುತ್ತಿರುವ ಕಂದನನ್ನು ಬೀಳದಂತೆ ತಡೆದ ತಾಯಾನೆ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Dec 01, 2025 | 3:31 PM

Share

ತಾಯಿ ಪ್ರೀತಿನೇ (mother love) ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಪ್ರಾಣಿಗಳು ಹೊರತಾಗಗಿಲ್ಲ. ಹೌದು, ತಾಯಾನೆ (mother elephant) ತನ್ನ ಮರಿಯನ್ನು ಎಷ್ಟು ಕೇರ್ ಮಾಡುತ್ತದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ಮರಿಯಾನೆಯೊಂದು ಓಡುತ್ತಿದ್ದು, ತಾಯಾನೆ ಅದರ ಹಿಂದೆಯೇ ಓಡುತ್ತಾ ಸೊಂಡಿಲಿನಿಂದ ಬೀಳದಂತೆ ತಡೆಯುವ ಹೃದಯಸ್ಪರ್ಶಿ ದೃಶ್ಯ ಇದಾಗಿದೆ. ಈ ಮುದ್ದಾದ ವಿಡಿಯೋ ನೋಡಿ ನೆಟ್ಟಿಗರು ಕಳೆದೇ ಹೋಗಿದ್ದಾರೆ.

rachellehaven5 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ತಾಯಾನೆ ಮರಿಯಾನೆಯನ್ನು ಕಾಳಜಿ ವಹಿಸುವುದನ್ನು ನೋಡಬಹುದು. ಪುಟಾಣಿ ಆನೆಯೂ ತನ್ನ ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಓಡುತ್ತಿದ್ದು, ಇತ್ತ ತಾಯಾನೆ ಅದರ ಜತೆಗೆ ಓಡುತ್ತಿದೆ. ಕೊನೆಗೆ, ತನ್ನ ಸೊಂಡಿಲಿನಿಂದ ಕಂದಮ್ಮನ ಕೊರಳಿಗೆ ಕಟ್ಟಿದ ಹಗ್ಗ ಹಿಡಿದು ಬೀಳದಂತೆ ತಡೆದಿದೆ.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಮಾಲೀಕಳ ಜತೆಗೆ ಗಜರಾಜನ ಕಣ್ಣಾಮುಚ್ಚಾಲೆ ಆಟ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಇದುವರೆಗೆ ಎಂಭತ್ತೆಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತಾಯಾನೆ ಹಾಗೂ ಮರಿಯಾನೆ ಇಬ್ಬರೂ ಎಲ್ಲಿಗೆ ಓಡಿ ಹೋಗ್ತಾ ಇದ್ದೀರಾ ಎಂದು ಕೇಳಿದ್ದಾರೆ. ಇನ್ನೊಬ್ಬರು, ಅಮ್ಮನ ಬಿಟ್ಟು ಎಲ್ಲಿಗೆ ಓಡ್ತಾ ಇದ್ಯಾ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ ಮುದ್ದಾದ ವಿಡಿಯೋ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Mon, 1 December 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ