AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸತ್ತ ತನ್ನ ಮರಿಯನ್ನು ಎದ್ದೇಳು ಎಂದು ಎಬ್ಬಿಸುತ್ತಿರುವ ತಾಯಿ ಆನೆ; ಹೃದಯ ಮಿಡಿಯುವ ವಿಡಿಯೊವಿದು

ಹೃದಯ ಮಿಡಿಯುವ ವಿಡಿಯೊವೊಂದು ಇದೀಗ ವೈರಲ್ ಆಗಿದೆ. ವೈರಲ್ ಆಗುತ್ತಿರುವ ವಿಡಿಯೊದಲ್ಲಿ ನೋಡುವಂತೆ ತಾಯಿ ಆನೆಯೊಂದು ಸಾವಿಗೀಡಾದ ತನ್ನ ಮೂರು ವರ್ಷದ ಮರಿಯನ್ನು ಎದ್ದೇಳು ಎಂದು ಎಬ್ಬಿಸುತ್ತಿದೆ.

Video: ಸತ್ತ ತನ್ನ ಮರಿಯನ್ನು ಎದ್ದೇಳು ಎಂದು ಎಬ್ಬಿಸುತ್ತಿರುವ ತಾಯಿ ಆನೆ; ಹೃದಯ ಮಿಡಿಯುವ ವಿಡಿಯೊವಿದು
ಸತ್ತ ತನ್ನ ಮರಿಯನ್ನು ಎದ್ದೇಳು ಎಂದು ಎಬ್ಬಿಸುತ್ತಿರುವ ತಾಯಿ ಆನೆ
TV9 Web
| Edited By: |

Updated on:Nov 19, 2021 | 12:01 PM

Share

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಸಾಕಷ್ಟು ವಿಡಿಯೊಗಳು ತಮಾಷೆಯಾಗಿದ್ದರೂ ಇನ್ನು ಕೆಲವು ವಿಡಿಯೊಗಳನ್ನು ನೋಡಿದಾಕ್ಷಣ ಮನಕಲಕುವುದಂತೂ ಸತ್ಯ. ಹೃದಯ ಮಿಡಿಯುವ ವಿಡಿಯೊವೊಂದು ಇದೀಗ ವೈರಲ್ ಆಗಿದೆ. ವೈರಲ್ ಆಗುತ್ತಿರುವ ವಿಡಿಯೊದಲ್ಲಿ ನೋಡುವಂತೆ ತಾಯಿ ಆನೆಯೊಂದು ಸಾವಿಗೀಡಾದ ತನ್ನ ಮೂರು ವರ್ಷದ ಮರಿಯನ್ನು ಎದ್ದೇಳು ಎಂದು ಎಬ್ಬಿಸುತ್ತಿದೆ. ತನ್ನ ಕಾಲುಗಳಲ್ಲಿ ದೂಡುತ್ತಾ ತನ್ನ ಮರಿಯನ್ನು ಎಬ್ಬಿಸಲು ಪ್ರಯತ್ನಿಸುತ್ತಿದೆ. ಹೃದಯ ಮಿಡಿಯುವ ದೃಶ್ಯ ನೋಡಿದಾಕ್ಷಣ ಬೇಸರ ಆಗದೇ ಇರೋಕೆ ಸಾಧ್ಯಾನ?

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಘಟನೆಯಿದು. ಆನೆ ಮರಿಯೊಂದು ವಿದ್ಯುತ್ ಸ್ಪರ್ಶ ತಗುಲಿ ಸಾವಿಗೀಡಾಗಿದೆ. ಇದನ್ನು ನೋಡಿದ ತಾಯಿ ಆನೆಗೆ ದುಃಖ ತಡೆಯಲಾಗುತ್ತಿಲ್ಲ. ತನ್ನ ಮರಿಯ ಬಳಿ ಹೋಗಿ ಕಾಲುಗಳಲ್ಲಿ ದೂಡುತ್ತಾ ಎದ್ದೇಳು ಅನ್ನುತ್ತಿದೆ. ತನ್ನ ಸೊಂಡಿಲಿನಿಂದ ಮರಿಯ ದೇಹವನ್ನು ಮುಟ್ಟುತ್ತಿದೆ. ಈ ಮನ ಮಿಡಿಯುವ ದೃಶ್ಯದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಆನೆ ಮರಿಯ ಸಾವಿಗೆ ನಿಖರವಾದ ಮಾಹಿತಿ ತಿಳಿದಿದೆ. ಬೋರ್​ವೆಲ್​ ಸಂಪರ್ಕ ಹೊಂದಿರುವ ವಿದ್ಯುತ್ ತಂತಿಯನ್ನು ಮುಟ್ಟಿದ್ದರಿಂದ ಮರಿ ಆನೆ ಸಾವಿಗೀಡಾಗಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಕುರ್ರಾ ಶ್ರೀನಿವಾಸ್ ಹೇಳಿದ್ದಾರೆ. ಏತನ್ಮಧ್ಯೆ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ತಾಯಿ ಆನೆಯ ಸಂಕರ್ಷ ನೋಡಿ ನೆಟ್ಟಿಗರು ಮನನೊಂದಿದ್ದಾರೆ. ಇನ್ನು ಕೆಲವರು ವಿದ್ಯುತ್ ಸಂಪರ್ಕ ತಂತಿ ಅಳವಡಿಸಿದ್ದಕ್ಕಾಗಿ ಅಧಿಕಾರಿಗಳ ವಿರುದ್ಧ ಕೋಪಗೊಂಡಿದ್ದಾರೆ.

ಇದನ್ನೂ ಓದಿ:

Viral Video: ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆ; ರಕ್ಷಿಸಿದ ಅರಣ್ಯ ಅಧಿಕಾರಿಗಳು

Viral Video: ದೈತ್ಯ ಆನೆ ಕಬ್ಬಿಣದ ಬೇಲಿ ಏರುತ್ತಿರುವುದನ್ನು ನೀವು ಎಂದಾದರೂ ನೋಡಿದ್ದೀರಾ? ಈ ವಿಡಿಯೊ ನೋಡಿ

Published On - 11:59 am, Fri, 19 November 21

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ