AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀರ್‌ ಹತ್ರ ಯಾಕೆ ಹೋಗ್ತೀಯಾ; ನೀರಿಗೆ ಬಿದ್ದ ಕಂದಮ್ಮನನ್ನು ರಕ್ಷಿಸಿದ ಸಿಂಹಿಣಿ

ಮನುಷ್ಯರೇ ಆಗಿರಲಿ, ಪ್ರಾಣಿಗಳೇ ಆಗಿರಲಿ, ತಾಯಿ ಪ್ರೀತಿ ಯಾವತ್ತೂ ಬದಲಾಗಲ್ಲ. ಈ ಪ್ರಾಣಿಗಳು ತಮ್ಮ ಕಂದಮ್ಮವನ್ನು ಮುದ್ದಿಸುವ ಕಾಳಜಿವಹಿಸುವ ದೃಶ್ಯಗಳನ್ನು ನೀವು ನೋಡಿರುತ್ತೀರಿ. ಆದರೆ ತಾಯಿ ಸಿಂಹವೊಂದು ನೀರಿಗೆ ಬಿದ್ದ ಮರಿಯನ್ನು ರಕ್ಷಿಸಿದ ಹೃದಯ ಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದೆ. ಈ ದೃಶ್ಯ ನೆಟ್ಟಿಗರ ಹೃದಯ ಗೆದ್ದಿದೆ.

Video: ನೀರ್‌ ಹತ್ರ ಯಾಕೆ ಹೋಗ್ತೀಯಾ; ನೀರಿಗೆ ಬಿದ್ದ ಕಂದಮ್ಮನನ್ನು ರಕ್ಷಿಸಿದ ಸಿಂಹಿಣಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Apr 13, 2026 | 5:51 PM

Share

ತಾಯಿ (mother) ಪ್ರೀತಿಯೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮೂಕ ಪ್ರಾಣಿಗಳು ತಮ್ಮ ಕಂದಮ್ಮಗಳನ್ನು ಪ್ರೀತಿಸುತ್ತವೆ, ಕಾಳಜಿ ವಹಿಸುತ್ತವೆ. ತಪ್ಪು ಮಾಡಿದರೆ ದಂಡಿಸುತ್ತವೆ. ಇದೀಗ ಸಿಂಹಿಣಿಯೊಂದು ನೀರಿಗೆ ಬಿದ್ದ ತನ್ನ ಕಂದನನ್ನು ರಕ್ಷಿಸಿದೆ. ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ತಾಯಿಯ ನಿಷ್ಕಲ್ಮಶ ಪ್ರೀತಿಗೆ ಕರಗಿ ಹೋಗಿದ್ದಾರೆ.

gulnara.de ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮೃಗಾಲಯದ ದೃಶ್ಯವನ್ನು ಕಾಣಬಹುದು. ಕೆರೆಗೆ ಬಿದ್ದ ಮರಿಯನ್ನು ಹೆಣ್ಣು ಸಿಂಹವೊಂದು ರಕ್ಷಣೆ ಮಾಡಿದೆ. ಇದೇ ವೇಳೆ ಗಂಡು ಸಿಂಹವೂ ಅಡ್ಡಿ ಪಡಿಸಿದೆ.  ಆದರೆ ಗಂಡು ಸಿಂಹದೊಂದಿಗೆ ಜಗಳಕ್ಕಿಳಿದ ಸಿಂಹಿಣಿಯೊಂದು ಕೊನೆಗೂ ತನ್ನ ಮರಿಯನ್ನು ನೀರಿನಿಂದ ಮೇಲೆತ್ತಿ ರಕ್ಷಿಸಿರುವ ದೃಶ್ಯವನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ

ಈ ವಿಡಿಯೋ 3.5 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ತಾಯಿಗಿಂತ ನಮ್ಮನ್ನು ಸದಾ ಕಾಪಾಡುವ ಜೀವ ಮತ್ತೊಂದಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಂಗೆ ಒಂದು ಕ್ಷಣ ಗಾಬರಿಯಾಯ್ತು, ಒಳ್ಳೆಯ ತಾಯಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಎಲ್ಲಾ ಗಂಡಸರು ಒಂದೇ ರೀತಿ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Mon, 13 April 26

Follow Us
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ