AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mother’s Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?

Indigo : 'ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಇಬ್ಬರೂ...' ಭಾವಪೂರ್ಣ ವಿಡಿಯೋ ನೋಡಿ.

Mother's Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?
ಅಮ್ಮ ಮಗಳು ಒಂದೇ ವಿಮಾನದಲ್ಲಿ ತಾಯಂದಿರ ದಿನದಂದು
TV9 Web
| Edited By: ಶ್ರೀದೇವಿ ಕಳಸದ|

Updated on:May 15, 2023 | 11:13 AM

Share

Viral Video : ನಿನ್ನೆಯಷ್ಟೇ ತಾಯಂದಿರ ದಿನವನ್ನು ಆಚರಿಸಿದ್ದೀರಿ. ಸಾಮಾಜಿಕ ಜಾಲತಾಣಗಳಲ್ಲಿ ಅಮ್ಮನ ಬಗ್ಗೆ ಥರಹೇವಾರಿ ಬರಹಗಳು, ನೆನಪುಗಳು, ಫೋಟೋ, ವಿಡಿಯೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದೀರಿ, ಮಿಡಿದಿದ್ದೀರಿ, ಸ್ಪಂದಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಗಗನಸಖಿ ವೃತ್ತಿಯಲ್ಲಿರುವ ಮಗಳು ಮತ್ತು ಕ್ಯಾಬಿನ್​ ಸಿಬ್ಬಂದಿಯಾಗಿರುವ ತಾಯಿ, ವಿಮಾನದಲ್ಲಿ ಸಮವಸ್ತ್ರಸಮೇತ ಎದುರುಗೊಂಡಿದ್ದಾರೆ. ಈ ಅಪರೂಪದ ಕ್ಷಣಗಳು ಇಬ್ಬರನ್ನೂ ಭಾವುಕಗೊಳಿಸಿವೆ.

ಇಂಡಿಗೋ ಏರ್​ಲೈನ್ಸ್​ನ ಗಗನಸಖಿ ನಬಿರಾ ಸಶ್ಮಿ ವಿಮಾನದಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತ ತನ್ನ ತಾಯಿಯನ್ನುದ್ದೇಶಿಸಿ ಮಾತನಾಡುತ್ತಾಳೆ. ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಈ ಅವಕಾಶಕ್ಕೆ ಇಂಡಿಗೋಗೆ ಧನ್ಯವಾದ ಎಂದಿದ್ದಾಳೆ. ಪ್ರಯಾಣಿಕರು ಈ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ : ಸ್ಪೈಸ್​ಜೆಟ್​ನ​ ಬ್ಯಾಂಕಾಕ್​ ವಿಮಾನದಲ್ಲಿ ಪೈಲಟ್​ನ​ ತಮಾಷೆ ವಿಡಿಯೋ ವೈರಲ್

ನೆಟ್ಟಿಗರನೇಕರು ಇವರಿಗೆ ಶುಭ ಹಾರೈಸಿದ್ದಾರೆ. ನಿಮ್ಮಿಬ್ಬರಿಗೂ ಇಂಥ ಅವಕಾಶಗಳು ಮತ್ತಷ್ಟು ಸಿಗಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಹೀಗೆ ತಾಯಿ ಮಗಳಿಗೆ ಈ ಅವಕಾಶ ಕಲ್ಪಿಸಿದ ವಿಮಾನ ಸಂಸ್ಥೆಗೆ ವಂದನೆ ಎಂದು ಕೆಲವರು ಹೇಳಿದ್ದಾರೆ. ಇಂಥ ಆಪ್ತಘಳಿಗೆಗಳು ಆಗಾಗ ಸಂಭವಿಸುತ್ತಿರಲಿ ಎಂದು ಕೆಲವರು ಆಶಯ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:10 am, Mon, 15 May 23

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ