AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mother’s Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?

Indigo : 'ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಇಬ್ಬರೂ...' ಭಾವಪೂರ್ಣ ವಿಡಿಯೋ ನೋಡಿ.

Mother's Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?
ಅಮ್ಮ ಮಗಳು ಒಂದೇ ವಿಮಾನದಲ್ಲಿ ತಾಯಂದಿರ ದಿನದಂದು
Follow us
TV9 Web
| Updated By: ಶ್ರೀದೇವಿ ಕಳಸದ

Updated on:May 15, 2023 | 11:13 AM

Viral Video : ನಿನ್ನೆಯಷ್ಟೇ ತಾಯಂದಿರ ದಿನವನ್ನು ಆಚರಿಸಿದ್ದೀರಿ. ಸಾಮಾಜಿಕ ಜಾಲತಾಣಗಳಲ್ಲಿ ಅಮ್ಮನ ಬಗ್ಗೆ ಥರಹೇವಾರಿ ಬರಹಗಳು, ನೆನಪುಗಳು, ಫೋಟೋ, ವಿಡಿಯೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದೀರಿ, ಮಿಡಿದಿದ್ದೀರಿ, ಸ್ಪಂದಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಗಗನಸಖಿ ವೃತ್ತಿಯಲ್ಲಿರುವ ಮಗಳು ಮತ್ತು ಕ್ಯಾಬಿನ್​ ಸಿಬ್ಬಂದಿಯಾಗಿರುವ ತಾಯಿ, ವಿಮಾನದಲ್ಲಿ ಸಮವಸ್ತ್ರಸಮೇತ ಎದುರುಗೊಂಡಿದ್ದಾರೆ. ಈ ಅಪರೂಪದ ಕ್ಷಣಗಳು ಇಬ್ಬರನ್ನೂ ಭಾವುಕಗೊಳಿಸಿವೆ.

ಇಂಡಿಗೋ ಏರ್​ಲೈನ್ಸ್​ನ ಗಗನಸಖಿ ನಬಿರಾ ಸಶ್ಮಿ ವಿಮಾನದಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತ ತನ್ನ ತಾಯಿಯನ್ನುದ್ದೇಶಿಸಿ ಮಾತನಾಡುತ್ತಾಳೆ. ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಈ ಅವಕಾಶಕ್ಕೆ ಇಂಡಿಗೋಗೆ ಧನ್ಯವಾದ ಎಂದಿದ್ದಾಳೆ. ಪ್ರಯಾಣಿಕರು ಈ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ : ಸ್ಪೈಸ್​ಜೆಟ್​ನ​ ಬ್ಯಾಂಕಾಕ್​ ವಿಮಾನದಲ್ಲಿ ಪೈಲಟ್​ನ​ ತಮಾಷೆ ವಿಡಿಯೋ ವೈರಲ್

ನೆಟ್ಟಿಗರನೇಕರು ಇವರಿಗೆ ಶುಭ ಹಾರೈಸಿದ್ದಾರೆ. ನಿಮ್ಮಿಬ್ಬರಿಗೂ ಇಂಥ ಅವಕಾಶಗಳು ಮತ್ತಷ್ಟು ಸಿಗಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಹೀಗೆ ತಾಯಿ ಮಗಳಿಗೆ ಈ ಅವಕಾಶ ಕಲ್ಪಿಸಿದ ವಿಮಾನ ಸಂಸ್ಥೆಗೆ ವಂದನೆ ಎಂದು ಕೆಲವರು ಹೇಳಿದ್ದಾರೆ. ಇಂಥ ಆಪ್ತಘಳಿಗೆಗಳು ಆಗಾಗ ಸಂಭವಿಸುತ್ತಿರಲಿ ಎಂದು ಕೆಲವರು ಆಶಯ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:10 am, Mon, 15 May 23

ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ