AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mother’s Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?

Indigo : 'ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಇಬ್ಬರೂ...' ಭಾವಪೂರ್ಣ ವಿಡಿಯೋ ನೋಡಿ.

Mother's Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?
ಅಮ್ಮ ಮಗಳು ಒಂದೇ ವಿಮಾನದಲ್ಲಿ ತಾಯಂದಿರ ದಿನದಂದು
TV9 Web
| Edited By: |

Updated on:May 15, 2023 | 11:13 AM

Share

Viral Video : ನಿನ್ನೆಯಷ್ಟೇ ತಾಯಂದಿರ ದಿನವನ್ನು ಆಚರಿಸಿದ್ದೀರಿ. ಸಾಮಾಜಿಕ ಜಾಲತಾಣಗಳಲ್ಲಿ ಅಮ್ಮನ ಬಗ್ಗೆ ಥರಹೇವಾರಿ ಬರಹಗಳು, ನೆನಪುಗಳು, ಫೋಟೋ, ವಿಡಿಯೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದೀರಿ, ಮಿಡಿದಿದ್ದೀರಿ, ಸ್ಪಂದಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಗಗನಸಖಿ ವೃತ್ತಿಯಲ್ಲಿರುವ ಮಗಳು ಮತ್ತು ಕ್ಯಾಬಿನ್​ ಸಿಬ್ಬಂದಿಯಾಗಿರುವ ತಾಯಿ, ವಿಮಾನದಲ್ಲಿ ಸಮವಸ್ತ್ರಸಮೇತ ಎದುರುಗೊಂಡಿದ್ದಾರೆ. ಈ ಅಪರೂಪದ ಕ್ಷಣಗಳು ಇಬ್ಬರನ್ನೂ ಭಾವುಕಗೊಳಿಸಿವೆ.

ಇಂಡಿಗೋ ಏರ್​ಲೈನ್ಸ್​ನ ಗಗನಸಖಿ ನಬಿರಾ ಸಶ್ಮಿ ವಿಮಾನದಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತ ತನ್ನ ತಾಯಿಯನ್ನುದ್ದೇಶಿಸಿ ಮಾತನಾಡುತ್ತಾಳೆ. ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಈ ಅವಕಾಶಕ್ಕೆ ಇಂಡಿಗೋಗೆ ಧನ್ಯವಾದ ಎಂದಿದ್ದಾಳೆ. ಪ್ರಯಾಣಿಕರು ಈ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ : ಸ್ಪೈಸ್​ಜೆಟ್​ನ​ ಬ್ಯಾಂಕಾಕ್​ ವಿಮಾನದಲ್ಲಿ ಪೈಲಟ್​ನ​ ತಮಾಷೆ ವಿಡಿಯೋ ವೈರಲ್

ನೆಟ್ಟಿಗರನೇಕರು ಇವರಿಗೆ ಶುಭ ಹಾರೈಸಿದ್ದಾರೆ. ನಿಮ್ಮಿಬ್ಬರಿಗೂ ಇಂಥ ಅವಕಾಶಗಳು ಮತ್ತಷ್ಟು ಸಿಗಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಹೀಗೆ ತಾಯಿ ಮಗಳಿಗೆ ಈ ಅವಕಾಶ ಕಲ್ಪಿಸಿದ ವಿಮಾನ ಸಂಸ್ಥೆಗೆ ವಂದನೆ ಎಂದು ಕೆಲವರು ಹೇಳಿದ್ದಾರೆ. ಇಂಥ ಆಪ್ತಘಳಿಗೆಗಳು ಆಗಾಗ ಸಂಭವಿಸುತ್ತಿರಲಿ ಎಂದು ಕೆಲವರು ಆಶಯ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:10 am, Mon, 15 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್