AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mother’s Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?

Indigo : 'ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಇಬ್ಬರೂ...' ಭಾವಪೂರ್ಣ ವಿಡಿಯೋ ನೋಡಿ.

Mother's Day: ಒಂದೇ ವಿಮಾನದಲ್ಲಿ ತಾಯಿಮಗಳು, ಗಗನಸಖಿ ಮಗಳು ಅಮ್ಮನ ಬಗ್ಗೆ ಹೇಳಿದ್ದೇನು?
ಅಮ್ಮ ಮಗಳು ಒಂದೇ ವಿಮಾನದಲ್ಲಿ ತಾಯಂದಿರ ದಿನದಂದು
TV9 Web
| Edited By: |

Updated on:May 15, 2023 | 11:13 AM

Share

Viral Video : ನಿನ್ನೆಯಷ್ಟೇ ತಾಯಂದಿರ ದಿನವನ್ನು ಆಚರಿಸಿದ್ದೀರಿ. ಸಾಮಾಜಿಕ ಜಾಲತಾಣಗಳಲ್ಲಿ ಅಮ್ಮನ ಬಗ್ಗೆ ಥರಹೇವಾರಿ ಬರಹಗಳು, ನೆನಪುಗಳು, ಫೋಟೋ, ವಿಡಿಯೋಗಳನ್ನು ಹಂಚಿಕೊಂಡು ಸಂಭ್ರಮಿಸಿದ್ದೀರಿ, ಮಿಡಿದಿದ್ದೀರಿ, ಸ್ಪಂದಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಗಗನಸಖಿ ವೃತ್ತಿಯಲ್ಲಿರುವ ಮಗಳು ಮತ್ತು ಕ್ಯಾಬಿನ್​ ಸಿಬ್ಬಂದಿಯಾಗಿರುವ ತಾಯಿ, ವಿಮಾನದಲ್ಲಿ ಸಮವಸ್ತ್ರಸಮೇತ ಎದುರುಗೊಂಡಿದ್ದಾರೆ. ಈ ಅಪರೂಪದ ಕ್ಷಣಗಳು ಇಬ್ಬರನ್ನೂ ಭಾವುಕಗೊಳಿಸಿವೆ.

ಇಂಡಿಗೋ ಏರ್​ಲೈನ್ಸ್​ನ ಗಗನಸಖಿ ನಬಿರಾ ಸಶ್ಮಿ ವಿಮಾನದಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತ ತನ್ನ ತಾಯಿಯನ್ನುದ್ದೇಶಿಸಿ ಮಾತನಾಡುತ್ತಾಳೆ. ಕಳೆದ ಆರು ವರ್ಷಗಳಿಂದ ನನ್ನ ತಾಯಿ ಕ್ಯಾಬಿನ್​ ಸಿಬ್ಬಂದಿಯಾಗಿ ಮಾಡುವ ಎಲ್ಲಾ ಕೆಲಸಗಳನ್ನು ನೋಡುತ್ತಿದ್ದೆ. ಆದರೆ ಈವತ್ತು ಒಂದೇ ವಿಮಾನದಲ್ಲಿ ಸಮವಸ್ತ್ರದಲ್ಲಿ ಒಟ್ಟಿಗೇ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಈ ಅವಕಾಶಕ್ಕೆ ಇಂಡಿಗೋಗೆ ಧನ್ಯವಾದ ಎಂದಿದ್ದಾಳೆ. ಪ್ರಯಾಣಿಕರು ಈ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿ : ಸ್ಪೈಸ್​ಜೆಟ್​ನ​ ಬ್ಯಾಂಕಾಕ್​ ವಿಮಾನದಲ್ಲಿ ಪೈಲಟ್​ನ​ ತಮಾಷೆ ವಿಡಿಯೋ ವೈರಲ್

ನೆಟ್ಟಿಗರನೇಕರು ಇವರಿಗೆ ಶುಭ ಹಾರೈಸಿದ್ದಾರೆ. ನಿಮ್ಮಿಬ್ಬರಿಗೂ ಇಂಥ ಅವಕಾಶಗಳು ಮತ್ತಷ್ಟು ಸಿಗಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಹೀಗೆ ತಾಯಿ ಮಗಳಿಗೆ ಈ ಅವಕಾಶ ಕಲ್ಪಿಸಿದ ವಿಮಾನ ಸಂಸ್ಥೆಗೆ ವಂದನೆ ಎಂದು ಕೆಲವರು ಹೇಳಿದ್ದಾರೆ. ಇಂಥ ಆಪ್ತಘಳಿಗೆಗಳು ಆಗಾಗ ಸಂಭವಿಸುತ್ತಿರಲಿ ಎಂದು ಕೆಲವರು ಆಶಯ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:10 am, Mon, 15 May 23

Follow Us
Web contact
Web contact

TV9 Kannada

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ