AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತೃ ವಾತ್ಸಲ್ಯ,: ಹಸಿದ ನಾಯಿ ಮರಿಗೆ ಎದೆ ಹಾಲುಣಿಸಿದ ಹಂದಿ

ಪ್ರಾಣಿಗಳಿಗೆ ಮನುಷ್ಯರಂತೆ ಮಾತು ಬಾರದಿರಬಹುದು ಆದರೆ ಅವುಗಳು ಭಾವನೆಗಳಿಗೆ, ಮನುಷ್ಯತ್ವಕ್ಕೆ ಮಾನವರಾದ ನಮಗಿಂತ ಹೆಚ್ಚಿನ ಬೆಲೆ ಕೊಡುತ್ತವೆ. ಇದಕ್ಕೆ ಉದಾಹರಣೆಯೆಂಬಂತೆ ಪ್ರಾಣಿಗಳ ವಾತ್ಸಲ್ಯದ ಕುರಿತ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಹರಿದಾಡುತ್ತಿರುತ್ತವೆ. ಇತ್ತೀಚಿಗೆ ಅಂತಹದ್ದೇ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದ್ದು, ಹಸಿದು ಬಂದ ನಾಯಿ ಮರಿಗೆ ಹಂದಿಯೊಂದು ಎದೆ ಹಾಲುಣಿಸಿದೆ. ಇದನ್ನು ಕಂಡು ಪ್ರಾಣಿಗಳಿಂದ ಮನುಷ್ಯರು ಕಲಿಯಬೇಕಾಗಿರುವುದು ಸಾಕಷ್ಟಿದೆ ಎಂದು ಹಲವರು ಹೇಳಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on:Dec 07, 2023 | 6:02 PM

Share

ಪ್ರಾಣಿಗಳಿಗೆ ಮನುಷ್ಯರಂತೆ ಮಾತು ಬಾರದಿರಬಹುದು ಆದರೆ ಅವುಗಳು ತಮ್ಮ ನಡವಳಿಯೆ, ವಾತ್ಸಲ್ಯ, ಮಾನವೀಯ ಗುಣಗಳ  ಮೂಲಕವೇ ಎಲ್ಲರ ಹೃದಯ ಗೆಲ್ಲುತ್ತವೆ.  ಪ್ರಾಣಿಗಳಿಗೆ ಇರುವಷ್ಟು ಕರುಣೆ, ದಯೆ, ಮಾನವೀಯ ಮೌಲ್ಯ ಮನುಷ್ಯರಲ್ಲಿ ಕಾಣಸಿಗುವುದು ಬಲು ಅಪರೂಪ ಎಂದು ಹೆಚ್ಚಿನವರು ಹೇಳುತ್ತಾರೆ. ಇದಕ್ಕೆ ಉದಾಹರಣೆಯೆಂಬಂತೆ ತಾಯಿಯಿಂದ ಬೇರ್ಪಟ್ಟ ಕೋತಿ ಮರಿಯನ್ನು ತನ್ನ ಸ್ವಂತ ಮಗುವಿನಂತೆ ಸಾಕಿದ ನಾಯಿ ಮರಿ, ಬೆಕ್ಕಿನ ಮರಿಗೆ ಹಾಲುಣಿಸಿದ ಶ್ವಾನ, ತಾಯಿಯಿಂದ ಬೇರ್ಪಟ್ಟ ಜಿಂಕೆ ಮರಿಯನ್ನು ಇತರ ಕಾಡು ಪ್ರಾಣಿಗಳ ದಾಳಿಯಿಂದ ರಕ್ಷಿಸಿದ ಸಿಂಹ ಹೀಗೆ ಇಂತಹ ಹಲವಾರು ಮನಕಲಕುವಂತಹ ವಿಡಿಯೋಗಳು ಆಗಾಗ್ಗೆ  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ.  ಇತ್ತೀಚಿಗೆ ಇದೇ ರೀತಿಯ ಹೃದಯಸ್ಪರ್ಶಿ  ವೀಡಿಯೋವೊಂದು ಸಾಮಾಜಿಕ  ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಸಿದು ಬಂದಂತಹ ನಾಯಿ ಮರಿಗೆ ಹಂದಿ ತನ್ನ ಎದೆ ಹಾಲುಣಿದೆ. ಈ ದೃಶ್ಯವನ್ನು ಕಂಡ ನೆಟ್ಟಿಗರು ಪ್ರಾಣಿಗಳಿಂದ ನಾವು ಕಲಿಯಬೇಕಿರುವುದು ಸಾಕಷ್ಟಿದೆ ಎಂದು ಹೇಳಿದ್ದಾರೆ.

ಈ ಹೃದಯಸ್ಪರ್ಶಿ ಘಟನೆ  ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಎಮ್ಮಿಗನೂರಿನ ಮುನೆಪ್ಪ ನಗರದಲ್ಲಿ ನಡೆದಿದ್ದು, ಹಸಿದ ಬಂದಂತಹ ಪುಟ್ಟ ಶ್ವಾನದ  ಮರಿಗೆ  ಹಂದಿ ತನ್ನ ಎದೆ ಹಾಲುಣಿಸಿ ಮಾತೃ ವಾತ್ಸಲ್ಯವನ್ನು ಮೆರೆದಿದೆ.  ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

ಇದನ್ನೂ ಓದಿ: ಈ ರೆಸ್ಟೋರೆಂಟ್​​ನಲ್ಲಿ ಕಪಾಳಮೋಕ್ಷ ಸ್ಪೆಷಲ್​​ ಮೆನು

ವಿಡಿಯೋದಲ್ಲಿ ನಗರದ ಬೀದಿಯೊಂದರ  ಪಕ್ಕದಲ್ಲಿ ಹಂದಿಯೊಂದು ಪ್ರಶಾಂತವಾಗಿ ಮಲಗಿರುವುದನ್ನು ಕಾಣಬಹುದು. ಅಷ್ಟರಲ್ಲಿ ಅಲ್ಲಿಗೆ ಬಂದಂತಹ ಪುಟ್ಟ ಶ್ವಾನದ ಮರಿಯೊಂದು ಹೊಟ್ಟೆ ಹಸಿವನ್ನು ತಾಳಲಾರದೆ ಹಂದಿಯ ಎದೆ ಹಾಲನ್ನು ಕುಡಿಯುತ್ತದೆ. ಈ ಸಂದರ್ಭದಲ್ಲಿ ಹಂದಿ ನಾಯಿ ಮರಿಯ ಮೇಲೆ ದಾಳಿ ಮಾಡದೆ ಅಥವಾ ಎಗರಾಡದೆ ಹಾಲು ಕುಡಿಯಲು ಅವಕಾಶವನ್ನು ನೀಡಿ ಮಾತೃ ವಾತ್ಸಲ್ಯವನ್ನು ಮೆರೆದಿದೆ.  ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು,  ಇದೀಗ ಈ ಹೃದಯಸ್ಪರ್ಶಿ ವಿಡಿಯೋ ಸಖತ್ ವೈರಲ್ ಆಗಿದೆ.  ಯಾವುದೇ ದ್ವೇಷ ಸಾಧಿಸದೆ ಪ್ರೀತಿಯಿಂದ ವರ್ತಿಸುವ ಪ್ರಾಣಿಗಳನ್ನು ನೋಡಿ ಮನುಷ್ಯರಾದ ನಾವು ಕಲಿಯಬೇಕಾಗಿರುವುದು ಸಾಕಷ್ಟಿದೆ  ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:00 pm, Thu, 7 December 23

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ