AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತೃ ವಾತ್ಸಲ್ಯ,: ಹಸಿದ ನಾಯಿ ಮರಿಗೆ ಎದೆ ಹಾಲುಣಿಸಿದ ಹಂದಿ

ಪ್ರಾಣಿಗಳಿಗೆ ಮನುಷ್ಯರಂತೆ ಮಾತು ಬಾರದಿರಬಹುದು ಆದರೆ ಅವುಗಳು ಭಾವನೆಗಳಿಗೆ, ಮನುಷ್ಯತ್ವಕ್ಕೆ ಮಾನವರಾದ ನಮಗಿಂತ ಹೆಚ್ಚಿನ ಬೆಲೆ ಕೊಡುತ್ತವೆ. ಇದಕ್ಕೆ ಉದಾಹರಣೆಯೆಂಬಂತೆ ಪ್ರಾಣಿಗಳ ವಾತ್ಸಲ್ಯದ ಕುರಿತ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಹರಿದಾಡುತ್ತಿರುತ್ತವೆ. ಇತ್ತೀಚಿಗೆ ಅಂತಹದ್ದೇ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದ್ದು, ಹಸಿದು ಬಂದ ನಾಯಿ ಮರಿಗೆ ಹಂದಿಯೊಂದು ಎದೆ ಹಾಲುಣಿಸಿದೆ. ಇದನ್ನು ಕಂಡು ಪ್ರಾಣಿಗಳಿಂದ ಮನುಷ್ಯರು ಕಲಿಯಬೇಕಾಗಿರುವುದು ಸಾಕಷ್ಟಿದೆ ಎಂದು ಹಲವರು ಹೇಳಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on:Dec 07, 2023 | 6:02 PM

Share

ಪ್ರಾಣಿಗಳಿಗೆ ಮನುಷ್ಯರಂತೆ ಮಾತು ಬಾರದಿರಬಹುದು ಆದರೆ ಅವುಗಳು ತಮ್ಮ ನಡವಳಿಯೆ, ವಾತ್ಸಲ್ಯ, ಮಾನವೀಯ ಗುಣಗಳ  ಮೂಲಕವೇ ಎಲ್ಲರ ಹೃದಯ ಗೆಲ್ಲುತ್ತವೆ.  ಪ್ರಾಣಿಗಳಿಗೆ ಇರುವಷ್ಟು ಕರುಣೆ, ದಯೆ, ಮಾನವೀಯ ಮೌಲ್ಯ ಮನುಷ್ಯರಲ್ಲಿ ಕಾಣಸಿಗುವುದು ಬಲು ಅಪರೂಪ ಎಂದು ಹೆಚ್ಚಿನವರು ಹೇಳುತ್ತಾರೆ. ಇದಕ್ಕೆ ಉದಾಹರಣೆಯೆಂಬಂತೆ ತಾಯಿಯಿಂದ ಬೇರ್ಪಟ್ಟ ಕೋತಿ ಮರಿಯನ್ನು ತನ್ನ ಸ್ವಂತ ಮಗುವಿನಂತೆ ಸಾಕಿದ ನಾಯಿ ಮರಿ, ಬೆಕ್ಕಿನ ಮರಿಗೆ ಹಾಲುಣಿಸಿದ ಶ್ವಾನ, ತಾಯಿಯಿಂದ ಬೇರ್ಪಟ್ಟ ಜಿಂಕೆ ಮರಿಯನ್ನು ಇತರ ಕಾಡು ಪ್ರಾಣಿಗಳ ದಾಳಿಯಿಂದ ರಕ್ಷಿಸಿದ ಸಿಂಹ ಹೀಗೆ ಇಂತಹ ಹಲವಾರು ಮನಕಲಕುವಂತಹ ವಿಡಿಯೋಗಳು ಆಗಾಗ್ಗೆ  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ.  ಇತ್ತೀಚಿಗೆ ಇದೇ ರೀತಿಯ ಹೃದಯಸ್ಪರ್ಶಿ  ವೀಡಿಯೋವೊಂದು ಸಾಮಾಜಿಕ  ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಸಿದು ಬಂದಂತಹ ನಾಯಿ ಮರಿಗೆ ಹಂದಿ ತನ್ನ ಎದೆ ಹಾಲುಣಿದೆ. ಈ ದೃಶ್ಯವನ್ನು ಕಂಡ ನೆಟ್ಟಿಗರು ಪ್ರಾಣಿಗಳಿಂದ ನಾವು ಕಲಿಯಬೇಕಿರುವುದು ಸಾಕಷ್ಟಿದೆ ಎಂದು ಹೇಳಿದ್ದಾರೆ.

ಈ ಹೃದಯಸ್ಪರ್ಶಿ ಘಟನೆ  ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಎಮ್ಮಿಗನೂರಿನ ಮುನೆಪ್ಪ ನಗರದಲ್ಲಿ ನಡೆದಿದ್ದು, ಹಸಿದ ಬಂದಂತಹ ಪುಟ್ಟ ಶ್ವಾನದ  ಮರಿಗೆ  ಹಂದಿ ತನ್ನ ಎದೆ ಹಾಲುಣಿಸಿ ಮಾತೃ ವಾತ್ಸಲ್ಯವನ್ನು ಮೆರೆದಿದೆ.  ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

ಇದನ್ನೂ ಓದಿ: ಈ ರೆಸ್ಟೋರೆಂಟ್​​ನಲ್ಲಿ ಕಪಾಳಮೋಕ್ಷ ಸ್ಪೆಷಲ್​​ ಮೆನು

ವಿಡಿಯೋದಲ್ಲಿ ನಗರದ ಬೀದಿಯೊಂದರ  ಪಕ್ಕದಲ್ಲಿ ಹಂದಿಯೊಂದು ಪ್ರಶಾಂತವಾಗಿ ಮಲಗಿರುವುದನ್ನು ಕಾಣಬಹುದು. ಅಷ್ಟರಲ್ಲಿ ಅಲ್ಲಿಗೆ ಬಂದಂತಹ ಪುಟ್ಟ ಶ್ವಾನದ ಮರಿಯೊಂದು ಹೊಟ್ಟೆ ಹಸಿವನ್ನು ತಾಳಲಾರದೆ ಹಂದಿಯ ಎದೆ ಹಾಲನ್ನು ಕುಡಿಯುತ್ತದೆ. ಈ ಸಂದರ್ಭದಲ್ಲಿ ಹಂದಿ ನಾಯಿ ಮರಿಯ ಮೇಲೆ ದಾಳಿ ಮಾಡದೆ ಅಥವಾ ಎಗರಾಡದೆ ಹಾಲು ಕುಡಿಯಲು ಅವಕಾಶವನ್ನು ನೀಡಿ ಮಾತೃ ವಾತ್ಸಲ್ಯವನ್ನು ಮೆರೆದಿದೆ.  ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು,  ಇದೀಗ ಈ ಹೃದಯಸ್ಪರ್ಶಿ ವಿಡಿಯೋ ಸಖತ್ ವೈರಲ್ ಆಗಿದೆ.  ಯಾವುದೇ ದ್ವೇಷ ಸಾಧಿಸದೆ ಪ್ರೀತಿಯಿಂದ ವರ್ತಿಸುವ ಪ್ರಾಣಿಗಳನ್ನು ನೋಡಿ ಮನುಷ್ಯರಾದ ನಾವು ಕಲಿಯಬೇಕಾಗಿರುವುದು ಸಾಕಷ್ಟಿದೆ  ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:00 pm, Thu, 7 December 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ