AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 119 ಕೋಟಿ ಖರ್ಚು ಮಾಡಿ ಹೊಸ ‘ನಗರ’ ನಿರ್ಮಿಸಿದ ಯೂಟ್ಯೂಬರ್

ಯೂಟ್ಯೂಬ್‌ನಲ್ಲಿ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ಮಿಸ್ಟರ್ ಬೀಸ್ಟ್ ತಮ್ಮ ಹೊಸ ರಿಯಾಲಿಟಿ ಶೋ "ಬೀಸ್ಟ್ ಗೇಮ್ಸ್" ಅನ್ನು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಶೋಗಾಗಿ ಸುಮಾರು 100 ಮಿಲಿಯನ್ ಡಾಲರ್ ಖರ್ಚು ಮಾಡಲಾಗಿದೆ. ಟೊರೊಂಟೊದಲ್ಲಿ ನಿರ್ಮಿಸಲಾದ ಭವ್ಯವಾದ ನಗರದಲ್ಲಿ 10 ಸಂಚಿಕೆಗಳನ್ನು ಚಿತ್ರೀಕರಿಸಲಾಗಿದೆ.

Viral: 119 ಕೋಟಿ ಖರ್ಚು ಮಾಡಿ ಹೊಸ 'ನಗರ' ನಿರ್ಮಿಸಿದ ಯೂಟ್ಯೂಬರ್
MrBeast's New Reality ShowImage Credit source: Twitter
ಅಕ್ಷತಾ ವರ್ಕಾಡಿ
|

Updated on:Dec 13, 2024 | 6:13 PM

Share

13ನೇ ವಯಸ್ಸಿನಲ್ಲಿ ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಮಾಡಲು ಶುರುಮಾಡಿ ಈಗ ವಿಶ್ವದ ಅತಿದೊಡ್ಡ ಯೂಟ್ಯೂಬರ್ ಎಂದೆನಿಸಿಕೊಂಡಿರುವ ಮಿಸ್ಟರ್ ಬೀಸ್ಟ್ ಇತ್ತೀಚೆಗೆ ತಮ್ಮ ಹೊಸ ರಿಯಾಲಿಟಿ ಶೋ ‘ಬೀಸ್ಟ್ ಗೇಮ್ಸ್’ ಅನ್ನು ಘೋಷಿಸಿದ್ದಾರೆ. ಇದಕ್ಕಾಗಿ ಯೂಟ್ಯೂಬರ್ ಟೊರೊಂಟೊದಲ್ಲಿ ‘ಮಿನಿ ಸಿಟಿ’ಗಿಂತ ಕಡಿಮೆಯಿಲ್ಲದ ಗ್ರ್ಯಾಂಡ್ ಸೆಟ್ ಅನ್ನು ಸಿದ್ಧಪಡಿಸಿದ್ದಾರೆ. ಇದಕ್ಕಾಗಿ ಸುಮಾರು 4 ಮಿಲಿಯನ್ ಡಾಲರ್ ಅಂದರೆ ಸುಮಾರು 119 ಕೋಟಿ ರೂ. ಖರ್ಚು ಮಾಡಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್​ ಆಗಿದೆ.

‘ಬೀಸ್ಟ್ ಗೇಮ್ಸ್’ ಕಾರ್ಯಕ್ರಮದ ಕುರಿತು ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದು, ಕೇವಲ 25 ನಿಮಿಷಗಳ ವೀಡಿಯೊಗಾಗಿ ಹಣವನ್ನು ನೀರಿನಂತೆ ಖರ್ಚು ಮಾಡುವುದು ಸರಿಯಲ್ಲಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಮಿಸ್ಟರ್ ಬೀಸ್ಟ್, ಇದು ಕೇವಲ 25 ನಿಮಿಷಗಳ ವೀಡಿಯೋ ಅಲ್ಲ, 10 ಪೂರ್ಣ ಸಂಚಿಕೆಗಳ ಶೋ, ಡಿಸೆಂಬರ್ 19 ರಿಂದ ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಿಸಲಿದ್ದೀರಿ ಎಂದು ಹೇಳಿದ್ದಾನೆ.

ಇದನ್ನೂ ಓದಿ: ವ್ಯಾಗನಾರ್ ಕಾರಿಗೆ ಟ್ರ್ಯಾಕ್ಟರ್ ಟ್ರಾಲಿ ಅಳವಡಿಸಿದ ವ್ಯಕ್ತಿ; ವಿಡಿಯೋ ವೈರಲ್​​

ಮಿಸ್ಟರ್ ಬೀಸ್ಟ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಈ ಪ್ರದರ್ಶನವನ್ನು ಮಾಡಲು ಒಟ್ಟು 100 ಮಿಲಿಯನ್ ಡಾಲರ್ (ಸುಮಾರು 850 ಕೋಟಿ ರೂ.) ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾನೆ. ಮಿಸ್ಟರ್ ಬೀಸ್ಟ್ ಯೂಟ್ಯೂಬ್ ಚಾನೆಲ್‌ನಲ್ಲಿ ಇದುವರೆಗೆ 335 ಮಿಲಿಯನ್ ಚಂದಾದಾರರನ್ನು ಹೊಂದಿದ್ದು, ಈ ಮೂಲಕ ವಿಶ್ವದ ಅತಿ ದೊಡ್ಡ ಯೂಟ್ಯೂಬರ್ ಎಂದೆನಿಸಿಕೊಂಡಿದ್ದಾನೆ. ಮಿಸ್ಟರ್ ಬೀಸ್ಟ್ 2014 ರಲ್ಲಿ ಟ್ವಿಟರ್‌ಗೆ ಸೇರಿದ್ದು, ಇಲ್ಲಿ 31.3 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾನೆ. ಅದೇ ಸಮಯದಲ್ಲಿ, ಇನ್ಸ್ಟಾಗ್ರಾಮ್​ನಲ್ಲಿ 63.1 ಮಿಲಿಯನ್ ಫಾಲೋವರ್ಸ್​ಗಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Fri, 13 December 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ