AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 10-12 ಮನೆಗಳಲ್ಲಿ ದಿನಕ್ಕೆ 30 ನಿಮಿಷದ ಕೆಲಸ, ತಿಂಗಳಿಗೆ 2 ಲಕ್ಷ ರೂ ಸಂಬಳ, ಏನ್ ಕೆಲಸ ಗೊತ್ತಾ?

ಬದುಕುವ ಕಲೆ ಗೊತ್ತಿರಲೇಬೇಕು, ಎಲ್ಲಿ ಹೋದರೂ ಕಷ್ಟಪಟ್ಟು ಹಾಗೂ ನಿಷ್ಠೆಯಿಂದ ದುಡಿದರೆ ದುಡ್ಡು ತಾನಾಗಿ ಬರುತ್ತದೆ. ಇದಕ್ಕೆ ಈ ವ್ಯಕ್ತಿಯೇ ನೈಜ ಉದಾಹರಣೆ. ಮುಂಬೈನಂತಹ ದೊಡ್ಡ ನಗರದಲ್ಲಿ ಹತ್ತು ಹನ್ನೆರಡು ಮನೆಗಳಲ್ಲಿ ಅಡುಗೆ ಮಾಡಿ ತಿಂಗಳಿಗೆ ಕೋಟಿಗಟ್ಟಲೆ ಸಂಪಾದಿಸುತ್ತಿದ್ದಾರೆ. ವಕೀಲೆಯೊಬ್ಬರು ತಮ್ಮ ಮನೆಗೆ ಬಂದು ರುಚಿಯಾಗಿ ಅಡುಗೆ ಮಾಡಿ ಉಣಬಡಿಸುವ ವ್ಯಕ್ತಿಯ ಆದಾಯದ ಬಗ್ಗೆ ಉಲ್ಲೇಖಿಸಿದ್ದಾರೆ. ಈ ಕುರಿತಾದ ಪೋಸ್ಟ್ ಇಲ್ಲಿದೆ.

Viral: 10-12 ಮನೆಗಳಲ್ಲಿ ದಿನಕ್ಕೆ 30 ನಿಮಿಷದ ಕೆಲಸ, ತಿಂಗಳಿಗೆ 2 ಲಕ್ಷ ರೂ ಸಂಬಳ, ಏನ್ ಕೆಲಸ ಗೊತ್ತಾ?
ವೈರಲ್‌ ಪೋಸ್ಟ್‌Image Credit source: Getty Images
ಸಾಯಿನಂದಾ
|

Updated on:Aug 03, 2025 | 10:44 AM

Share

ಮುಂಬೈನಂತಹ (Mumbai) ನಗರವೂ ಯಾರೇ ಯಾವ ಮೂಲೆಯಿಂದ ಬಂದರೂ ತಮ್ಮವರು ಎಂಬಂತೆ ಸ್ವೀಕರಿಸುತ್ತದೆ. ಮುಂಬೈ ಯಾರನ್ನು ಹಸಿವಿನಿಂದ ಸಾಯಲು ಬಿಡುವುದಿಲ್ಲ. ಹೀಗಾಗಿ ಸಣ್ಣ ಉದ್ಯೋಗ ಸಿಕ್ಕರೂ ಸರಿಯೇ, ಇಲ್ಲಿ ನೆಮ್ಮದಿಯಿಂದ ಜೀವಿಸಬಹುದು. ಬುದ್ಧಿವಂತಿಕೆಯಿದ್ದರೆ ನಿಷ್ಠೆಯಿಂದ ಪ್ರಾಮಾಣಿಕವಾಗಿ ಲಕ್ಷಾನುಗಟ್ಟಲೇ ದುಡಿಯಬಹುದು. ಮುಂಬೈನ ವಕೀಲೆಯೊಬ್ಬರು ತಮ್ಮ ಮನೆಗೆ ಅಡುಗೆ ಮಾಡಲು ಬರುವ ಕೆಲಸಗಾರರ ಸಂಬಳದ ಬಗ್ಗೆ ಪೋಸ್ಟ್ ಮಾಡಿದ್ದಾರೆ. 30 ನಿಮಿಷ ಅಡುಗೆ ಕೆಲಸ, ತಿಂಗಳಿಗೆ 18,000 ರೂ ಎಂದಿದ್ದಾರೆ. ಈ ಮಹಿಳೆಯ ಪೋಸ್ಟ್ ವೈರಲ್ ಆಗಿದ್ದು, ಬಳಕೆದಾರರು ನಿಜವೇ ಎಂದು ಕೇಳಿದ್ದಾರೆ.

@AyushiiDoshii ಹೆಸರಿನ ಎಕ್ಸ್ ಖಾತೆಯಲ್ಲಿ ಮಹಿಳೆಯೊಬ್ಬರು ತಮ್ಮ ಮನೆಗೆ ಬರುವ ಅಡುಗೆಯವ ತಿಂಗಳಿಗೆ ಎಷ್ಟು ಸಂಪಾದನೆ ಮಾಡ್ತಾನೆ ಎಂದು ಈ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ನನ್ನ ಮಹಾರಾಜ್ (ಅಡುಗೆಯವ)’ ಪ್ರತಿ ದಿನ ಅರ್ಧ ಗಂಟೆ ಕೆಲಸ ಮಾಡುತ್ತಾನೆ. ತಿಂಗಳಿಗೆ 18,000 ರೂ ಪಡೆಯುತ್ತಾರೆ . ಹೀಗೆ ಹತ್ತು ಹನ್ನೆರಡು ಮನೆಗಳಲ್ಲಿ ಪ್ರತಿದಿನ ಕೆಲಸ ಮಾಡುತ್ತಾರೆ. ಉಚಿತ ಊಟ ಚಹಾ ಸಿಗುತ್ತದೆ. ಒಂದು ವೇಳೆ ಸರಿಯಾಗಿ ಸಂಬಳ ಕೊಡದ್ದಿದರೆ ವಿದಾಯ ಹೇಳದೇ ಹೊರಟು ಹೋಗುತ್ತಾರೆ ಎಂದು ಇಲ್ಲಿ ಬರೆಯಲಾಗಿದೆ.

ಇದನ್ನೂ ಓದಿ
Image
ಜೀವ ಕಾಪಾಡಿದ ವೈದ್ಯರಿಗೆ ಉಡುಗೊರೆ ನೀಡಿದ ಪುಟ್ಟ ಹುಡುಗಿ
Image
ವಿಮಾನದಲ್ಲಿ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ ಸಹ ಪ್ರಯಾಣಿಕ
Image
ಪೋಷಕರಿಗೆ ಹುಷಾರಿಲ್ಲ ಎಂದರೂ ರಜೆ ನೀಡಲು ನಿರಾಕರಿಸಿದ ಬಾಸ್‌
Image
ಮಗುವನ್ನು ಏರ್‌ಪೋರ್ಟ್‌ನಲ್ಲಿಯೇ ಬಿಟ್ಟು ಟ್ರಿಪ್‌ಗೆ ಹೋದ ತಂದೆ-ತಾಯಿ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ: Viral: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿರುವ ವ್ಯಕ್ತಿ, ಈತ ಸಂಪಾದಿಸಿದ ಒಟ್ಟು ಆಸ್ತಿ ಎಷ್ಟು ಗೊತ್ತಾ?

ಜುಲೈ 29 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಒಂಬತ್ತು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ನೀವು ಯಾಕೆಅಷ್ಟು ಸಂಬಳ ನೀಡುತ್ತಿದ್ದೀರಿ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಬಳಕೆದಾರರೊಬ್ಬರು, ನನ್ನ ಅಡುಗೆಯವರು ಇಬ್ಬರಿಗೆ ಅಡುಗೆ ಮಾಡಲು 30 ನಿಮಿಷ ತೆಗೆದುಕೊಳ್ಳುತ್ತಾರೆ. ನಾನು ತಿಂಗಳಿಗೆ 4600 ರೂ ಕೊಡುವೆನು. ಇಷ್ಟು ಸಂಬಳ ನೀಡುವುದು ಯಾಕೆ ಎಂದು ಕೇಳಿದ್ದಾರೆ. ಇನ್ನೊಬ್ಬ ಬಳಕೆದಾರ, ಅಷ್ಟು ಸಂಬಳ ಪಡೆಯಲು ಅವರು ಅರ್ಹರು, ಯಾಕಂದ್ರೆ ಅವರು ಮಾಡುವ ಕೆಲಸದಲ್ಲಿ ಅವರ ಶ್ರಮ ಖಂಡಿತ ಇರುತ್ತದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬುದ್ಧಿವಂತಿಕೆಯಿದ್ದರೆ ದೊಡ್ಡ ದೊಡ್ಡ ನಗರಗಳಲ್ಲಿ ಹೇಗೂ ಬದುಕಬಹುದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:44 am, Sun, 3 August 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ