AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರು; 500 ಮೀ ಆಟೋ ಪ್ರಯಾಣಕ್ಕೆ ರೂ 100 ಪಾವತಿಸಿದ ಮುಂಬೈ ಸಿಇಒ

Auto : ಮುಂಬೈನಲ್ಲಿ ರೂ. 100ರಲ್ಲಿ 9 ಕಿ.ಮೀ ಪ್ರಯಾಣಿಸಬಹುದು. ಆದರೆ ಬೆಂಗಳೂರಿನಲ್ಲಿ!? ಎಂದು ಬೇಸರಕ್ಕೆ ಒಳಗಾಗಿದ್ದಾರೆ ಈ ವ್ಯಕ್ತಿ. ಮುಂಬೈ ಹೊರತುಪಡಿಸಿ ಎಲ್ಲ ಮಹಾನಗರಗಳ ಆಟೋ ಕಥೆ ಇಷ್ಟೇ ಎಂದಿದ್ದಾರೆ ನೆಟ್ಟಿಗರು.

Viral: ಬೆಂಗಳೂರು; 500 ಮೀ ಆಟೋ ಪ್ರಯಾಣಕ್ಕೆ ರೂ 100 ಪಾವತಿಸಿದ ಮುಂಬೈ ಸಿಇಒ
ಮಂದಾರ ನಾಟೇಕರ್ ಪ್ರಯಾಣಿಸಿದ ಆಟೋ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 25, 2023 | 10:58 AM

Share

Bengaluru : ಮುಂಬೈನ ನ್ಯೂರಲ್ ಗ್ಯಾರೇಜ್​ನ ಸಿಇಒ ಮಂದಾರ್​ ನಾಟೇಕರ್ ಬೆಂಗಳೂರಿನಲ್ಲಿ ಅನುಭವಿಸಿದ ಕಹಿ ಅನುಭವವನ್ನು ಟ್ವೀಟ್ ಮಾಡಿದ್ದಾರೆ. 500 ಮೀ. ಆಟೋ ಪ್ರಯಾಣಕ್ಕೆ ಅವರು ರೂ. 100 ಪಾವತಿಸಿದ ವಿಷಯದೊಂದಿಗೆ ಆ ಆಟೋದ ಫೋಟೋ ಕೂಡ ಹಂಚಿಕೊಂಡಿದ್ದಾರೆ. ಎಂದೂ ಇಷ್ಟೊಂದು ದುಬಾರಿ ಆಟೋ ಪ್ರಯಾಣ ಮಾಡಿರಲಿಲ್ಲ, ಮುಂಬೈನಲ್ಲಿ ರೂ. 100ಕ್ಕೆ 9 ಕಿ.ಮೀ ಪ್ರಯಾಣಿಸಬಹುದೆಂದೂ ಹೇಳಿದ್ದಾರೆ. ವೈರಲ್ ಆಗುತ್ತಿರುವ ಈ ಟ್ವೀಟಿನಡಿ ಅನೇಕರು ತಮ್ಮ ಆಟೋ ಪ್ರಯಾಣದ ಅಭಿಪ್ರಾಯಗಳನ್ನು ವಿನೋದ ಪ್ರಸಂಗಗಳನ್ನು ಅಚ್ಚರಿಗಳನ್ನು ದಾಖಲಿಸಿದ್ಧಾರೆ. ​

7,000ಕ್ಕೂ ಹೆಚ್ಚು ಜನರು ಈ ಟ್ವೀಟ್ ನೋಡಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ಟಿವಿಎಫ್ ಅಧ್ಯಕ್ಷ ವಿಜಯ್ ಕೋಶಿ, ಮುಂಬೈ ಬಿಟ್ಟರೆ ಉಳಿದ ಮಹಾನಗರಗಳ ಕಥೆ ಎಲ್ಲವೂ ಒಂದೇ ಥರ ಇದೆ. ಚೆನ್ನೈಗೆ ಬನ್ನಿ, ಇದಕ್ಕಿಂತಲೂ ದುಬಾರಿಯಾದ ಆಟೋ ಪ್ರಯಾಣವನ್ನು ಇಲ್ಲಿ ಮಾಡಬಹುದಾಗಿದೆ! ಎಂದಿದ್ದಾರೆ.

ಇದನ್ನೂ ಓದಿ : Viral Video: ಉಚಿತ ಐಸ್ಕ್ರೀಮ್​​ಗಾಗಿ ಬೆಂಗಳೂರಿಗರು ಹೇಗೆ ನೃತ್ಯ ಮಾಡಿದ್ದಾರೆ ನೋಡಿ

ಮುಂಬೈ ಆಟೋ ಚಾಲಕರ ಬಗ್ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ. ಅಲ್ಲಿಯ ಆಟೋ ಆಟೋ ಮೀಟರ್​ಗೆ ಅನುಗುಣವಾಗಿ ಹಣ ಪಾವತಿಸಬಹುದಾಗಿದೆ ಎಂದಿದ್ದಾರೆ. ಸರ್ಕಾರವೇ ಮೀಟರ್ ದರವನ್ನು ನಿಗದಿ ಪಡಿಸುತ್ತದೆ. ಬೆಂಗಳೂರಿನಲ್ಲಿ ಆರಂಭದ ಎರಡು ಕಿ.ಮೀ ರೂ. 30, ಆನಂತರ ಪ್ರತೀ ಕಿ.ಮೀ. ಮೂಲ ಬೆಲೆ ರೂ. 15 ಎಂದು ಹೇಳಿದ್ದಾರೆ ಮತ್ತೊಬ್ಬರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 10:57 am, Tue, 25 July 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು