AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿರುವ ವ್ಯಕ್ತಿ, ಈತ ಸಂಪಾದಿಸಿದ ಒಟ್ಟು ಆಸ್ತಿ ಎಷ್ಟು ಗೊತ್ತಾ?

ಹೆಚ್ಚಿನವರು ಒಬ್ಬ ವ್ಯಕ್ತಿಯನ್ನು ಆತನು ಧರಿಸುವ ಬಟ್ಟೆ ಹಾಗೂ ಆತನ ಬಳಿಯಿರುವ ಐಷಾರಾಮಿ ವಸ್ತುಗಳಿಂದ ಅಳೆದು ಬಿಡುತ್ತೇವೆ. ಮಾಸಿಕ ವಾಗಿ 60000 ರೂ ಸಂಪಾದಿಸುವ ಈ ವ್ಯಕ್ತಿಯೂ ಯಾವುದೇ ಕಂಪನಿಯಲ್ಲಿ ಉದ್ಯೋಗದಲಿಲ್ಲ. ಭಿಕ್ಷೆ ಬೇಡಿಯೇ ಆಸ್ತಿ ಹಾಗೂ ಕೋಟಿಗಟ್ಟಲೇ ಹಣವನ್ನು ಸಂಪಾದಿಸಿದ್ದಾರೆ. ಹೀಗಾಗಿ ಈ ವ್ಯಕ್ತಿಯನ್ನು ವಿಶ್ವದ ಶ್ರೀಮಂತ ಭಿಕ್ಷುಕ ಎನ್ನಲಾಗಿದೆ. ಹಾಗಾದ್ರೆ ಈ ಕುರಿತಾದ ಕುತೂಹಲಕಾರಿ ಸ್ಟೋರಿ ಇಲ್ಲಿದೆ.

Viral: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿರುವ ವ್ಯಕ್ತಿ, ಈತ ಸಂಪಾದಿಸಿದ ಒಟ್ಟು ಆಸ್ತಿ ಎಷ್ಟು ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Pinterest
ಸಾಯಿನಂದಾ
| Edited By: |

Updated on: Jul 30, 2025 | 4:01 PM

Share

ಮುಂಬೈ, ಜುಲೈ 30: ಮಧ್ಯಮ ವರ್ಗ ಹಾಗೂ ಬಡವರ್ಗದ ಜನರಿಗೆ ದುಡಿದರೆ ಮಾತ್ರ ಜೀವನ ನಡೆಸಲು ಸಾಧ್ಯ. ಆದರೆ ಕೆಲವರು ಹಣ ಹಾಗೂ ಜೀವನ ನಿರ್ವಹಣೆಗಾಗಿ ಭಿಕ್ಷಾಟನೆಯತ್ತ ಮುಖ ಮಾಡುತ್ತಾರೆ. ಅಂತಹವರಲ್ಲಿ ಮುಂಬೈನ (Mumbai) ಭರತ್ ಜೈನ್ (Bharath Jain) ಕೂಡ ಒಬ್ಬರು.. ಅನಿವಾರ್ಯ ಕಾರಣಕ್ಕಾಗಿ ಭಿಕ್ಷೆ ಬೇಡಿ ಜೀವನ ಸಾಗಿಸಲು ಮುಂದಾದ ಈ ವ್ಯಕ್ತಿ ಇಂದು ಪ್ರಪಂಚದ ಶ್ರೀಮಂತ ಭಿಕ್ಷುಕ ಎನಿಸಿಕೊಂಡಿದ್ದಾರೆ. ಅಷ್ಟಕ್ಕೂ ಈ ವ್ಯಕ್ತಿ ಭಿಕ್ಷೆ ಬೇಡಿ ಸಂಪಾದಿಸಿರುವ ಹಣ ಎಷ್ಟು? ಈತನ ಆಸ್ತಿಯ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ.

ಮುಂಬೈನ ಸಿಎಸ್‌ಟಿ ಮತ್ತು ಆಜಾದ್‌ ಮೈದಾನದ ಆಚೆ ಈಚೆಯ ಬೀದಿಗಳಲ್ಲಿ ತಟ್ಟೆ ಹಿಡಿದುಕೊಂಡು ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿರುವ ವ್ಯಕ್ತಿಯೇ ಭರತ್ ಜೈನ್. ಅರಕಲು ಬಟ್ಟೆ ತೊಟ್ಟು ಭಿಕ್ಷೆ ಬೇಡಿ ಶ್ರೀಮಂತ ವ್ಯಕ್ತಿಯಾಗಿರಲು ಸಾಧ್ಯನಾ ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಹೌದು, ಕಳೆದ 40 ವರ್ಷಗಳಿಂದ ಭಿಕ್ಷೆ ಬೇಡಿ ಜೀವನ ನಡೆಸುತ್ತಿರುವ ಭರತ್ ಜೈನ್ ದಿನಕ್ಕೆ 2000 ದಿಂದ 2500 ರೂ ಸಂಪಾದಿಸುತ್ತಾರೆ. ತಿಂಗಳ ಆದಾಯ ಸರಿಸುಮಾರು 60 ಸಾವಿರ ರೂಯಿಂದ 75 ಸಾವಿರ ರೂ ಆಗಿದೆಯಂತೆ.

ಹೌದು, ಭರತ್ ಜೈನ್ ಹುಟ್ಟಿನಿಂದಲೇ ಬಡತನವನ್ನು ಕಂಡವರು. ಹೀಗಾಗಿ ಶಾಲೆಯ ಮುಖವನ್ನು ಕಂಡವರು ಅಲ್ಲ. ಅವರ ಕುಟುಂಬವು ಜೀವನ ನಿರ್ವಹಣೆಗೆ ಹೆಣಗಾಡುತ್ತಿತ್ತು. ಈ ವೇಳೆಯಲ್ಲಿ ಮೂರೊತ್ತು ಹೊಟ್ಟೆ ತುಂಬಿಸಿಕೊಳ್ಳುವುದೇ ಕಷ್ಟವಾಗಿತ್ತು. ಹೀಗಾಗಿ ಅನಿವಾರ್ಯವಾಗಿ ಭಿಕ್ಷೆ ಬೇಡಲು ಮುಂದಾದರು. ತದನಂತರದಲ್ಲಿ ಭಿಕ್ಷೆ ಬೇಡುವುದನ್ನೇ ಜೀವನೋಪಾಯಕ್ಕಾಗಿ ಅವಲಂಬಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
ಉತ್ತರ ಕರ್ನಾಟಕದ ರೊಟ್ಟಿ ಸವಿಯಲು ಅಮೆರಿಕದಿಂದ ಬೆಂಗಳೂರಿಗೆ ಬರುವ ಉದ್ಯಮಿ
Image
ಮದ್ವೆ ಆದವರಿಗಿಂತ ಸಿಂಗಲ್‌ ಆಗಿರೋರೆ ಖುಷಿಯಾಗಿರೋದಂತೆ
Image
ಮರಿ ಆನೆಗಳ ಕ್ಯೂಟ್​​​ ಚುಂಬನ
Image
ಯುವತಿಯರನ್ನು ಹಿಂಬಾಲಿಸಿಕೊಂಡು ಬಂದ ಪುಂಡರ ಗುಂಪು

ಇದನ್ನೂ ಓದಿ: Viral: ನನ್ನ ಮೊದಲ ಸಂಬಳ 5000 ರೂ, ಇದೀಗ ವಾರ್ಷಿಕ ಸಂಬಳ 46 ಲಕ್ಷ ರೂ, ಯಶಸ್ಸಿನ ಹಾದಿ ಬಿಚ್ಚಿಟ್ಟ ಯುವಕ

ನಲವತ್ತು ವರ್ಷಗಳಿಂದ ಭಿಕ್ಷಾಟನೆಯನ್ನೇ ನಂಬಿಕೊಂಡಿರುವ ಭರತ್‌ ಜೈನ್‌ ಗಳಿಸಿರುವ ಆಸ್ತಿಯ ಮೊತ್ತ 7.5 ಕೋಟಿ ರೂ. ಮುಂಬೈನಲ್ಲಿ ಎರಡು ಪ್ಲಾಟ್ ಮಾಲೀಕನಾಗಿದ್ದು, ಈ ವ್ಯಕ್ತಿಯ ಮಕ್ಕಳಿಬ್ಬರೂ ಟಾಪ್ ಕಾನ್ವೆಂಟ್ ಶಾಲೆಯಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ. 1.4 ಕೋಟಿ ಮೌಲ್ಯದ ಪ್ಲಾಟ್‌ಯೊಂದಿಗೆ ಥಾಣೆಯಲ್ಲಿಯಲ್ಲಿ ಎರಡು ಅಂಗಡಿಗಳನ್ನು ಹೊಂದಿದ್ದು ಅದನ್ನು ಬಾಡಿಗೆ ನೀಡಿದ್ದಾರೆ. ಇದರಿಂದ ಪ್ರತಿ ತಿಂಗಳು 30,000 ರೂ ಗಳಿಸುತ್ತಾರೆ ಎನ್ನಲಾಗಿದೆ. ಚೆನ್ನಾಗಿ ಓದಿ ಒಂದೊಳ್ಳೆ ಉದ್ಯೋಗ ಪಡೆದುಕೊಂಡವರಿಗೆ ಈ ವ್ಯಕ್ತಿಯ ಆದಾಯ ಕಂಡು ಅಚ್ಚರಿಯಾಗೋದರಲ್ಲಿ ಸಂದೇಹವಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು