AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಜಿಮ್ ಟ್ರೈನರ್​​ನಿಂದಲೇ ಯುವಕನ ಮೇಲೆ ಹಲ್ಲೆ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಯುವಕನೊಬ್ಬ ಜಿಮ್​​ನಲ್ಲಿ ವರ್ಕೌಟ್​​​​​​ ಮಾಡುತ್ತಿರುವಾಗಲೇ ಏಕಾಏಕಿ ಬಂದ ತರಬೇತುದಾರ ವ್ಯಾಯಾಮಕ್ಕೆ ಬಳಸುವ ಭಾರವಾದ ಮರದ ದೊಣ್ಣೆಯಿಂದ ಯುವಕನ ತಲೆ ಮೇಲೆ ಬಲವಾಗಿ ಹೊಡೆದಿದ್ದಾನೆ. ಪರಿಣಾಮ ತಲೆಬುರುಡೆಯ ಎಡಭಾಗದಲ್ಲಿ ತೀವ್ರ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on:Jul 20, 2024 | 10:39 AM

Share

ಮಹಾರಾಷ್ಟ್ರ: ಜಿಮ್‌ನಲ್ಲಿ ತರಬೇತುದಾರನೊಬ್ಬ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ವ್ಯಾಯಾಮಕ್ಕೆ ಬಳಸುವ ಭಾರವಾದ ಮರದ ದೊಣ್ಣೆಯಿಂದ ಯುವಕನ ತಲೆ ಮೇಲೆ ಬಲವಾಗಿ ಹೊಡೆದಿದ್ದು, ಪರಿಣಾಮ ತಲೆಬುರುಡೆಯ ಎಡಭಾಗದಲ್ಲಿ ತೀವ್ರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ. ಈ ಭೀಕರ ಘಟನೆಗೆ ಜಿಮ್​​ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಯೋಗೇಶ್ ಶಿಂಧೆ(20) ಕಳೆದ ಎರಡು ವರ್ಷಗಳಿಂದ ಮುಲುಂಡ್ ಪೂರ್ವದಲ್ಲಿರುವ ಜಿಮ್‌ಗೆ ಹೋಗುತ್ತಿದ್ದ. ಇದರಂತೆ ಬುಧವಾರ(ಜುಲೈ 17) ದಂದು ಜಿಮ್‌ನಲ್ಲಿ ತರಬೇತುದಾರರ ಸಹಾಯದಿಂದ ವ್ಯಾಯಾಮ ಮಾಡುತ್ತಿದ್ದಾಗ ಜಿಮ್‌ನ ಮತ್ತೊಂದು ಬದಿಯಲ್ಲಿ ನಿಂತಿದ್ದ ಮತ್ತೊಬ್ಬ ತರಬೇತುದಾರ ಧಾರಾವಿ ಎಂಬುವರು ವ್ಯಾಯಾಮಕ್ಕೆ ಬಳಸುತ್ತಿದ್ದ ಮರದ ದೊಣ್ಣೆಯನ್ನು ಕೈಯಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಇದಕ್ಕಿದ್ದಂತೆ ಯೋಗೇಶ್ ತಲೆಯ ಮೇಲೆ ಬಲವಾಗಿ ಹೊಡೆದಿದ್ದು, ಇದೆಲ್ಲವೂ ಜಿಮ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಮೂರಡಿ ಕುಳ್ಳನಿಗೆ ಈ ಬ್ಯೂಟಿ ಲವರ್​​, ದುಡ್ಡಿದ್ರೆ ಏನು ಬೇಕಾದ್ರೂ ಸಾಧ್ಯ ಎಂದ ನೆಟ್ಟಿಗರು

ಗಾಯಾಳು ಯೋಗೇಶ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಂಆರ್‌ಐ ಸ್ಕ್ಯಾನ್‌ನಲ್ಲಿ ಅವರ ತಲೆಬುರುಡೆಯ ಎಡಭಾಗದಲ್ಲಿ ಎರಡು ಮುರಿತಗಳು ಕಂಡುಬಂದಿವೆ. ಮತ್ತೊಂದೆಡೆ, ಹಲ್ಲೆ ಮಾಡಿದ ಜಿಮ್ ಟ್ರೈನರ್ ವಿರುದ್ಧ ಸಂತ್ರಸ್ತ ಯೋಗೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Sat, 20 July 24

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!