AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​

ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​
ಮುಂಬೈ ಪೊಲೀಸರು
TV9 Web
| Edited By: |

Updated on: Mar 15, 2022 | 4:49 PM

Share

ಕಳೆದ ಡಿಸೆಂಬರ್​ನಲ್ಲಿ ಅಲ್ಲು ಅರ್ಜುನ್ (Allu Arjun)​ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ಪುಷ್ಪ (Pushpa) ಚಿತ್ರ ಬಿಡುಗಡೆಯಾಗಿ ಸಖತ್​ ಸದ್ದು ಮಾಡಿದೆ. ಪುಷ್ಟ ಚಿತ್ರದ ಹಾಡುಗಳಂತೂ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅಲ್ಲು ಅರ್ಜುನ ಅವರ ಸಿಗ್ನೇಚರ್​ ಸ್ಟೆಪ್​ ಎಲ್ಲರ ಗಮನ ಸೆಳೆದಿದೆ. ಇದೀಗ ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಡಿಯೋವನ್ನು ಯುಟ್ಯೂಬ್​ನಲ್ಲಿ ಶೇರ್​ ಮಾಡಲಾಗಿದೆ.  ಮುಂಬೈ ಪೊಲೀಸ್‌ ಅಧಿಕೃತ ಟ್ವಿಟರ್​ ಖಾತೆಯಲ್ಲಿ ವಿಡಿಯೋದ ಲಿಂಕ್​ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಪೊಲೀಸರು ತಮ್ಮ ಬ್ಯಾಂಡ್ ನಲ್ಲಿ ಶ್ರೀವಲ್ಲಿಯ ಹಾಡು ನುಡಿಸಿದ್ದಾರೆ. ವಿಡಿಯೋದಲ್ಲಿ ಬ್ಯಾಂಡ್ ಸದಸ್ಯರು ಕ್ಲಾರಿನೆಟ್, ಸ್ಯಾಕ್ಸೋಫೋನ್, ಟ್ರಂಪೆಟ್ ಮತ್ತು ಕೊಳಲು ಸೇರಿದಂತೆ ಹಲವಾರು ಸಂಗೀತ ವಾದ್ಯಗಳನ್ನು ನುಡಿಸುವುದನ್ನು ಕಾಣಬಹುದು.

ಈ ಹಿಂದೆ ಕೂಡ ಶ್ರೀವಲ್ಲಿ ಹಾಡು ಹಲವು ಕ್ಷೇತ್ರಗಳಲ್ಲಿ ವೈರಲ್​ ಆಗಿತ್ತು. ಉದಾಹರಣೆಗೆ ಯಕ್ಷಗಾನದಲ್ಲಿಯೂ ಶ್ರೀವಲ್ಲಿ ಹಾಡನ್ನು ಹಾಕಿ ಹೆಜ್ಜೆಹಾಕಿದ ವಿಡಿಯೋ ಇತ್ತೀಚೆಗೆ ವೈರಲ್​ ಆಗಿತ್ತು. ಅದಕ್ಕೂ ಮೊದಲು ಡೆವೊಡೆ್​ ವಾರ್ನರ್​ ಸೇರಿದಂತೆ ಹಲವು ತಾರೆಯರೂ ಕೂಡ ಅಲ್ಲು ಅರ್ಜುನ್​ ಸಿಗ್ನೇಚರ್​ ಸ್ಟೆಪ್​ ಮೂಲಕ ಸುದ್ದಿಯಾಗಿದ್ದರು.

ಇದನ್ನೂ ಓದಿ:

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?