AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮುಂಬೈ; ಕಳೆದುಕೊಂಡ ‘ಶಾಂತಿ’ ಹುಡುಕಲು ಪೊಲೀಸರ ಬಳಿ ಹೋಗುತ್ತಿದ್ದೇನೆ ಎಂದ ಮಹಿಳೆ; ಪೊಲೀಸರ ಉತ್ತರ ಇಲ್ಲಿದೆ

Peace: ಶಾಂತಿ ಯಾರಿಗೆ ಬೇಕಿಲ್ಲ? ಎಲ್ಲರಿಗೂ ಬೇಕು. ಆದರೆ ಅದು ಸಿಗುವುದೆಲ್ಲಿ? ಕೆಲವರು ದೇವಸ್ಥಾನಕ್ಕೆ ಹೋಗುತ್ತಾರೆ. ಇನ್ನೂ ಕೆಲವರು ಬಾರಿಗೆ ಹೋಗುತ್ತಾರೆ. ಮತ್ತೂ ಕೆಲವರು ಕಾಡಿಗೆ ಹೋಗುತ್ತಾರೆ. ಇಲ್ಲವಾದರೆ ಸೋಶಿಯಲ್​ ಮೀಡಿಯಾದಲ್ಲಿ ಮುಳುಗುತ್ತಾರೆ. ಇದೀಗ ಮುಂಬೈನ ಮಹಿಳೆಯೊಬ್ಬಳು ಶಾಂತಿ ಹುಡುಕಿಕೊಂಡು ಪೊಲೀಸರ ಬಳಿ ಹೊರಟಿದ್ದೇನೆ ಎಂದಿದ್ದಕ್ಕೆ ಪೊಲೀಸರು ಏನುತ್ತರಿಸಿದ್ಧಾರೆ ನೋಡಿ.

Viral: ಮುಂಬೈ; ಕಳೆದುಕೊಂಡ 'ಶಾಂತಿ' ಹುಡುಕಲು ಪೊಲೀಸರ ಬಳಿ ಹೋಗುತ್ತಿದ್ದೇನೆ ಎಂದ ಮಹಿಳೆ; ಪೊಲೀಸರ ಉತ್ತರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Nov 03, 2023 | 1:23 PM

Share

Mumbai: ‘ನಾನು ಕಳೆದುಕೊಂಡಿರುವ ಶಾಂತಿಯನ್ನು ಹುಡುಕಲು ಪೊಲೀಸ್​ ಠಾಣೆಗೆ ಹೋಗುತ್ತಿದ್ದೇನೆ’ ಎಂದು ಮುಂಬೈನ ವೇದಿಕಾ ಆರ್ಯ ಎಂಬಾಕೆ Xನಲ್ಲಿ ಹಾಕಿದ ಪೊಲೀಸರನ್ನು (Police) ಟ್ಯಾಗ್ ಮಾಡಿದ್ದಾರೆ. ಇದೀಗ ನೆಟ್ಟಿಗರಿಗೆ ಒಳ್ಳೆಯ ಮನರಂಜನೆ ಕೊಡುತ್ತಿದೆ. ಸೃಜನಶೀಲರಾದ ಮುಂಬೈ ಪೊಲೀಸರು ಈ ಪೋಸ್ಟ್​ಗೆ ಎಂದಿನಂತೆ ಕಾವ್ಯಾತ್ಮಕವಾಗಿ ಪ್ರತಿಕ್ರಿಯಿಸಿ ಭೇಷ್​ ಎನ್ನಿಸಿಕೊಂಡಿದ್ದಾರೆ. ತಮಾಷೆಯಾಗಿ ಆಕೆ ಈ ಪೋಸ್ಟ್​ ಹಾಕಿದ್ದನ್ನು ಗಮನಿಸಿದ ಪೊಲೀಸರು ಸಿಕ್ಕ ಅವಕಾಶವನ್ನು ಬಿಡದೆ, ‘ಮಿಸ್ ಆರ್ಯ, ನಾವು  ಹಲವಾರು ಮಂದಿ ಕೂಡ ಶಾಂತಿಯ ಹುಡುಕಾಟದಲ್ಲಿದ್ದೇವೆ. ಖಂಡಿತ ನೀವು ನಿಮ್ಮ ಆತ್ಮದಲ್ಲಿ ಅದನ್ನು ಕಂಡುಕೊಳ್ಳುತ್ತೀರಿ. ಈ ವಿಷಯವಾಗಿ ನಮ್ಮ ಮೇಲೆ ನೀವು ವಿಶ್ವಾಸವಿಟ್ಟಿದ್ದನ್ನು ಪ್ರಶಂಸಿಸುತ್ತೇವೆ, ಇನ್ನೇನಾದರೂ ಸ್ಪಷ್ಟತೆ ಬೇಕಿದ್ದರೆ ಖಂಡಿತ ನೀವು ನಮ್ಮ ಬಳಿ ಬರಬಹುದು’ ಎಂದು #EnsuringSukoonForMumbai #MumbaiFirst ಹ್ಯಾಷ್​ಟ್ಯಾಗ್ ಸೇರಿಸಿದ್ದಾರೆ.

ಇದನ್ನೂ ಓದಿ : Viral Video: ಮೊಮೊದಲ್ಲಿ ಜೀವಂತ ಹುಳುಗಳ ಹೂರಣ; ವಾಂತಿ ಬಟನ್​ ಎಲ್ಲಿ ಎಂದ ನೆಟ್ಟಿಗರು

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಪೊಲೀಸರ ಈ ಫಿಲ್ಮಿ ಉತ್ತರ ಮತ್ತು ಬುದ್ಧಿವಂತಿಕೆ ನೆಟ್ಟಿಗರ ಮನಸ್ಸನ್ನು ಸೂರೆಗೊಂಡಿದೆ. ಮುಂಬೈ ಪೊಲೀಸರ ಹಾಸ್ಯಪ್ರಜ್ಞೆಯ ಪ್ರದರ್ಶನ ಪ್ರದರ್ಶನಗೊಳ್ಳುವುದು ಇದು ಮೊದಲ ಬಾರಿಯೇನಲ್ಲ. ಎರಡು ದಿನಗಳ ಹಿಂದೆ ಹಂಚಿಕೊಂಡ ಈ ಪೋಸ್ಟ್​ ಅನ್ನು ಈತನಕ 1.4 ಲಕ್ಷ ಜನರು ನೋಡಿದ್ದಾರೆ. ಸುಮಾರು 500 ಜನರು ಲೈಕ್ ಮಾಡಿದ್ದು ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ವೇದಿಕಾ ಆರ್ಯ ಪೋಸ್ಟ್​ ಇಲ್ಲಿದೆ

ಅರೆ ವಾಹ್​ ಶಾಹಿರಿ ಬರೆಯುವ ಪೊಲೀಸರಿದ್ದಾರೆ! ಎಂದಿದ್ದಾರೆ ಒಬ್ಬರು. ಓಹ್ ದೇವರೇ, ನೀವು ಪೊಲೀಸರು ಪ್ರತೀದಿನ ಏನೆಲ್ಲ ಅನುಭವಿಸಬೇಕು ಎನ್ನುವುದು ನಂಬಲಸಾಧ್ಯ ಎಂದಿದ್ದಾರೆ ಇನ್ನೊಬ್ಬರು. ಸಾಮಾಜಿಕ ಜಾಲತಾಣದ ಈ ಪುಟವನ್ನು ನಿರ್ವಹಿಸುವವರು ಯಾರು? ಅವರು ಹೀಗೆ ಆಗಾಗ ಮಿನುಗುತ್ತಿರುತ್ತಾರೆ ಮರೆಯಲ್ಲೇ ಎಂದಿದ್ದಾರೆ ಮತ್ತೊಬ್ಬರು. ಜಾವೇದ್ ಅಖ್ತರ್ ನಿಮ್ಮ ಐಡಿಯಿಂದ ಬರೆದಿರಬೇಕು ಎಂದಿದ್ದಾರೆ ಮಗದೊಬ್ಬರು.

ಇದನ್ನೂ ಓದಿ : Viral Video: ‘ಹುಡುಗ ಹರೆಯಕ್ಕೆ ಬಂದಿದ್ದಾನೆ ಬಯ್ಯದೇ ಪ್ರೀತಿಯಿಂದ ತಿದ್ದಿ’ ಎನ್ನುತ್ತಿರುವ ಶ್ವಾನಪ್ರೇಮಿಗಳು

ಸಾರ್ವಜನಿಕರೊಂದಿಗೆ ಶಾಂತವಾಗಿ, ಸಂವಾದಾತ್ಮಕ ಮತ್ತು ತಮಾಷೆಯಾಗಿ ಪ್ರತಿಕ್ರಿಯಿಸುವ ವಿಷಯವಾಗಿ ಮುಂಬೈ ಪೊಲೀಸರು ಪ್ರಸಿದ್ಧಿ ಪಡೆದಿದ್ದಾರೆ. 2015 ರ ಡಿಸೆಂಬರ್​ನಲ್ಲಿ X ಖಾತೆ ತೆರೆಯಲಾಗಿದ್ದು ಈತನಕ ಸುಮಾರು 5 ಮಿಲಿಯನ್​ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:13 pm, Fri, 3 November 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ