AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮುಂಬೈ; ಕಳೆದುಕೊಂಡ ‘ಶಾಂತಿ’ ಹುಡುಕಲು ಪೊಲೀಸರ ಬಳಿ ಹೋಗುತ್ತಿದ್ದೇನೆ ಎಂದ ಮಹಿಳೆ; ಪೊಲೀಸರ ಉತ್ತರ ಇಲ್ಲಿದೆ

Peace: ಶಾಂತಿ ಯಾರಿಗೆ ಬೇಕಿಲ್ಲ? ಎಲ್ಲರಿಗೂ ಬೇಕು. ಆದರೆ ಅದು ಸಿಗುವುದೆಲ್ಲಿ? ಕೆಲವರು ದೇವಸ್ಥಾನಕ್ಕೆ ಹೋಗುತ್ತಾರೆ. ಇನ್ನೂ ಕೆಲವರು ಬಾರಿಗೆ ಹೋಗುತ್ತಾರೆ. ಮತ್ತೂ ಕೆಲವರು ಕಾಡಿಗೆ ಹೋಗುತ್ತಾರೆ. ಇಲ್ಲವಾದರೆ ಸೋಶಿಯಲ್​ ಮೀಡಿಯಾದಲ್ಲಿ ಮುಳುಗುತ್ತಾರೆ. ಇದೀಗ ಮುಂಬೈನ ಮಹಿಳೆಯೊಬ್ಬಳು ಶಾಂತಿ ಹುಡುಕಿಕೊಂಡು ಪೊಲೀಸರ ಬಳಿ ಹೊರಟಿದ್ದೇನೆ ಎಂದಿದ್ದಕ್ಕೆ ಪೊಲೀಸರು ಏನುತ್ತರಿಸಿದ್ಧಾರೆ ನೋಡಿ.

Viral: ಮುಂಬೈ; ಕಳೆದುಕೊಂಡ 'ಶಾಂತಿ' ಹುಡುಕಲು ಪೊಲೀಸರ ಬಳಿ ಹೋಗುತ್ತಿದ್ದೇನೆ ಎಂದ ಮಹಿಳೆ; ಪೊಲೀಸರ ಉತ್ತರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಶ್ರೀದೇವಿ ಕಳಸದ
|

Updated on:Nov 03, 2023 | 1:23 PM

Share

Mumbai: ‘ನಾನು ಕಳೆದುಕೊಂಡಿರುವ ಶಾಂತಿಯನ್ನು ಹುಡುಕಲು ಪೊಲೀಸ್​ ಠಾಣೆಗೆ ಹೋಗುತ್ತಿದ್ದೇನೆ’ ಎಂದು ಮುಂಬೈನ ವೇದಿಕಾ ಆರ್ಯ ಎಂಬಾಕೆ Xನಲ್ಲಿ ಹಾಕಿದ ಪೊಲೀಸರನ್ನು (Police) ಟ್ಯಾಗ್ ಮಾಡಿದ್ದಾರೆ. ಇದೀಗ ನೆಟ್ಟಿಗರಿಗೆ ಒಳ್ಳೆಯ ಮನರಂಜನೆ ಕೊಡುತ್ತಿದೆ. ಸೃಜನಶೀಲರಾದ ಮುಂಬೈ ಪೊಲೀಸರು ಈ ಪೋಸ್ಟ್​ಗೆ ಎಂದಿನಂತೆ ಕಾವ್ಯಾತ್ಮಕವಾಗಿ ಪ್ರತಿಕ್ರಿಯಿಸಿ ಭೇಷ್​ ಎನ್ನಿಸಿಕೊಂಡಿದ್ದಾರೆ. ತಮಾಷೆಯಾಗಿ ಆಕೆ ಈ ಪೋಸ್ಟ್​ ಹಾಕಿದ್ದನ್ನು ಗಮನಿಸಿದ ಪೊಲೀಸರು ಸಿಕ್ಕ ಅವಕಾಶವನ್ನು ಬಿಡದೆ, ‘ಮಿಸ್ ಆರ್ಯ, ನಾವು  ಹಲವಾರು ಮಂದಿ ಕೂಡ ಶಾಂತಿಯ ಹುಡುಕಾಟದಲ್ಲಿದ್ದೇವೆ. ಖಂಡಿತ ನೀವು ನಿಮ್ಮ ಆತ್ಮದಲ್ಲಿ ಅದನ್ನು ಕಂಡುಕೊಳ್ಳುತ್ತೀರಿ. ಈ ವಿಷಯವಾಗಿ ನಮ್ಮ ಮೇಲೆ ನೀವು ವಿಶ್ವಾಸವಿಟ್ಟಿದ್ದನ್ನು ಪ್ರಶಂಸಿಸುತ್ತೇವೆ, ಇನ್ನೇನಾದರೂ ಸ್ಪಷ್ಟತೆ ಬೇಕಿದ್ದರೆ ಖಂಡಿತ ನೀವು ನಮ್ಮ ಬಳಿ ಬರಬಹುದು’ ಎಂದು #EnsuringSukoonForMumbai #MumbaiFirst ಹ್ಯಾಷ್​ಟ್ಯಾಗ್ ಸೇರಿಸಿದ್ದಾರೆ.

ಇದನ್ನೂ ಓದಿ : Viral Video: ಮೊಮೊದಲ್ಲಿ ಜೀವಂತ ಹುಳುಗಳ ಹೂರಣ; ವಾಂತಿ ಬಟನ್​ ಎಲ್ಲಿ ಎಂದ ನೆಟ್ಟಿಗರು

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಪೊಲೀಸರ ಈ ಫಿಲ್ಮಿ ಉತ್ತರ ಮತ್ತು ಬುದ್ಧಿವಂತಿಕೆ ನೆಟ್ಟಿಗರ ಮನಸ್ಸನ್ನು ಸೂರೆಗೊಂಡಿದೆ. ಮುಂಬೈ ಪೊಲೀಸರ ಹಾಸ್ಯಪ್ರಜ್ಞೆಯ ಪ್ರದರ್ಶನ ಪ್ರದರ್ಶನಗೊಳ್ಳುವುದು ಇದು ಮೊದಲ ಬಾರಿಯೇನಲ್ಲ. ಎರಡು ದಿನಗಳ ಹಿಂದೆ ಹಂಚಿಕೊಂಡ ಈ ಪೋಸ್ಟ್​ ಅನ್ನು ಈತನಕ 1.4 ಲಕ್ಷ ಜನರು ನೋಡಿದ್ದಾರೆ. ಸುಮಾರು 500 ಜನರು ಲೈಕ್ ಮಾಡಿದ್ದು ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ವೇದಿಕಾ ಆರ್ಯ ಪೋಸ್ಟ್​ ಇಲ್ಲಿದೆ

ಅರೆ ವಾಹ್​ ಶಾಹಿರಿ ಬರೆಯುವ ಪೊಲೀಸರಿದ್ದಾರೆ! ಎಂದಿದ್ದಾರೆ ಒಬ್ಬರು. ಓಹ್ ದೇವರೇ, ನೀವು ಪೊಲೀಸರು ಪ್ರತೀದಿನ ಏನೆಲ್ಲ ಅನುಭವಿಸಬೇಕು ಎನ್ನುವುದು ನಂಬಲಸಾಧ್ಯ ಎಂದಿದ್ದಾರೆ ಇನ್ನೊಬ್ಬರು. ಸಾಮಾಜಿಕ ಜಾಲತಾಣದ ಈ ಪುಟವನ್ನು ನಿರ್ವಹಿಸುವವರು ಯಾರು? ಅವರು ಹೀಗೆ ಆಗಾಗ ಮಿನುಗುತ್ತಿರುತ್ತಾರೆ ಮರೆಯಲ್ಲೇ ಎಂದಿದ್ದಾರೆ ಮತ್ತೊಬ್ಬರು. ಜಾವೇದ್ ಅಖ್ತರ್ ನಿಮ್ಮ ಐಡಿಯಿಂದ ಬರೆದಿರಬೇಕು ಎಂದಿದ್ದಾರೆ ಮಗದೊಬ್ಬರು.

ಇದನ್ನೂ ಓದಿ : Viral Video: ‘ಹುಡುಗ ಹರೆಯಕ್ಕೆ ಬಂದಿದ್ದಾನೆ ಬಯ್ಯದೇ ಪ್ರೀತಿಯಿಂದ ತಿದ್ದಿ’ ಎನ್ನುತ್ತಿರುವ ಶ್ವಾನಪ್ರೇಮಿಗಳು

ಸಾರ್ವಜನಿಕರೊಂದಿಗೆ ಶಾಂತವಾಗಿ, ಸಂವಾದಾತ್ಮಕ ಮತ್ತು ತಮಾಷೆಯಾಗಿ ಪ್ರತಿಕ್ರಿಯಿಸುವ ವಿಷಯವಾಗಿ ಮುಂಬೈ ಪೊಲೀಸರು ಪ್ರಸಿದ್ಧಿ ಪಡೆದಿದ್ದಾರೆ. 2015 ರ ಡಿಸೆಂಬರ್​ನಲ್ಲಿ X ಖಾತೆ ತೆರೆಯಲಾಗಿದ್ದು ಈತನಕ ಸುಮಾರು 5 ಮಿಲಿಯನ್​ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 1:13 pm, Fri, 3 November 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್