AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Rain: ನೋಡನೋಡುತ್ತಿದ್ದಂತೆಯೇ ಮಾಯವಾದ ಕಾರು! ಮುಂಬೈ ಮಳೆ ಸೃಷ್ಟಿಸಿದ ಅವಾಂತರ ನೀವೂ ನೋಡಿ

ನೋಡನೋಡುತ್ತಿದ್ದಂತೆಯೇ ಕಾರು ಹೊಂಡದಲ್ಲಿ ಮುಳುಗಿ ಕಣ್ಣಿಗೆ ಕಾಣಿಸದಂತಾಗಿದೆ. ಮನೆ ಎದುರಿಗೆ ಕಾರ್​ ಪಾರ್ಕ್ ಮಾಡಿದ್ದೇನೆ, ಇನ್ಯಾವ ಭಯ ಇಲ್ಲ ಎಂದುಕೊಂಡ ಕಾರಿನ ಮಾಲೀಕ ಮಾತ್ರ ತಲೆ ಮೇಲೆ ಕೈ ಹೊತ್ತು ಕೂತಿದ್ದಾನಂತೆ.

Mumbai Rain: ನೋಡನೋಡುತ್ತಿದ್ದಂತೆಯೇ ಮಾಯವಾದ ಕಾರು! ಮುಂಬೈ ಮಳೆ ಸೃಷ್ಟಿಸಿದ ಅವಾಂತರ ನೀವೂ ನೋಡಿ
ಮನೆ ಮುಂದೆ ನಿಂತ ಕಾರು ನೋಡನೋಡುತ್ತಿದ್ದಂತೆಯೇ ಮಾಯ!
TV9 Web
| Edited By: |

Updated on:Jun 13, 2021 | 11:35 PM

Share

ಮುಂಬೈಯಲ್ಲಿ ಈಗ ಮಳೆಯ ಅಬ್ಬರ ಜೋರಾಗಿದೆ.  ಮಳೆಯ ಅಬ್ಬರಕ್ಕೆ ನೂರಾರು ಮರಗಳು ನೆಲಕ್ಕುರುಳಿವೆ. ರಸ್ತೆಗಳು ಹಾನಿಗೊಳಗಾಗಿವೆ. ಈ ಮುನ್ನವೂ ಮಳೆಯಿಂದ ರೈಲ್ವೆ ಹಳಿಗಳ ಮೇಲೆ ನೀರು ತುಂಬಿಹೋಗಿತ್ತು. ಮಳೆಯ ಅಬ್ಬರಕ್ಕೆ ಕೊವಿಡ್​ ನ ನಡುವೆಯೂ ಮುಂಬೈ ನಾಗರಿಕರು ಸ್ವಲ್ಪ ಹೆಚ್ಚೇ ಕಳವಳಗೊಂಡಿದ್ದರು. ಏಕೆಂದರೆ ಆ ಪ್ರಮಾಣದ ಮಳೆ ಮುಂಬೈನಲ್ಲಿ ಸುರಿದಿತ್ತು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹಡಿದಾಡುತ್ತಿರುವ ಮಳೆಯ ನಂತರದ ಮುಂಬೈನ ವಿಡಿಯೋವೊಂದು ಆಘಾತ ಮೂಡಿಸುವಂತಿದೆ.

ಸದ್ಯ ವೈರಲ್ ಆಗುತ್ತಿರುವ ಈ ವಿಡಿಯೋ ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ನಡೆದಿದ್ದು ಎಂದು ಹೇಳಲಾಗಿದೆ. ಮನೆಯ ಮುಂದೆ ಕಾರನ್ನು ನಿಲ್ಲಿಸಲಾಗಿತ್ತು. ಆದರೆ, ಧಾರಾಕಾರ ಮಳೆಯಿಂದಾಗಿ ಈ ಪ್ರದೇಶದಲ್ಲಿ ಸಾಕಷ್ಟು ನೀರು ಸಂಗ್ರಹವಾಗಿತ್ತು. ರಸ್ತೆಯಲ್ಲಿ ನಿಂತ ನೀರು ಹರಿದುಹೋಗಿರಲೇ ಇಲ್ಲ. ಕಾರಿನ ಮುಂಭಾಗದಲ್ಲೇ ರಸ್ತೆಯೊಳಗಿನ ಹೊಂಡ ನೀರು ನಿಂತದ್ದೇ ನೆವವಾಗಿ ಬಾಯ್ತೆರೆದುಬಿಟ್ಟಿದೆ. ಅಷ್ಟೇ, ಆ ಹೊಂಡ ಕಾರನ್ನು ನುಂಗಿಬಿಟ್ಟಿದೆ. ದೂರದಿಂದ ಇದನ್ನೆಲ್ಲ ನೋಡುತ್ತಿರುವವರು ಆಕ್ಷಣ ಏನನ್ನೂ ಮಾಡಲಾರದೇ ದಂಗಾಗಿಬಿಟ್ಟಿದ್ದಾರೆ. ಯಾರೋ ಮಹಾನುಭಾವರು ಈ ವಿಡಿಯೋ ಚಿತ್ರಿಸಿ ಸಾಮಾಜಿಕ ಜಾಲತಾಣಗಳಿಗೆ ಹರಿಯಬಿಟ್ಟಿದ್ದಾರೆ.

ನೋಡನೋಡುತ್ತಿದ್ದಂತೆಯೇ ಕಾರು ಹೊಂಡದಲ್ಲಿ ಮುಳುಗಿ ಕಣ್ಣಿಗೆ ಕಾಣಿಸದಂತಾಗಿದೆ. ದೂರದಲ್ಲಿ ನಿಂತು ನೋಡುತ್ತಿದ್ದವರು ಆಘಾತಕ್ಕೊಳಗಾಗಿ ಉದ್ಘಾರವೆತ್ತುವುದನ್ನು ಸಹ ವಿಡಿಯೊದಲ್ಲಿ ಕೇಳಿಸಿಕೊಳ್ಳಬಹುದಾಗಿದೆ. ಮನೆ ಎದುರಿಗೆ ಕಾರ್​ ಪಾರ್ಕ್ ಮಾಡಿದ್ದೇನೆ, ಇನ್ಯಾವ ಭಯ ಇಲ್ಲ ಎಂದುಕೊಂಡ ಕಾರಿನ ಮಾಲೀಕ ಮಾತ್ರ ತಲೆ ಮೇಲೆ ಕೈ ಹೊತ್ತು ಕೂತಿದ್ದಾನಂತೆ.

ಇದನ್ನೂ ಓದಿ: Happy birthday Disha Patani: 19ನೇ ವಯಸ್ಸಿಗೆ ದಿಶಾ ಕೊಟ್ಟ ಮೊದಲ ಆಡಿಷನ್​ ವಿಡಿಯೋ ವೈರಲ್​

Viral Video: ಮಾಸ್ಕ್ ಧರಿಸದೆ ಓಡಾಡಿದವರಿಗೆ ಮಂಗಳಾರತಿ ಬೆಳಗಿ ಹಾಡು ಹೇಳಿದ ಮಹಿಳಾ ಪೊಲೀಸ್ ಅಧಿಕಾರಿ, ವಿಡಿಯೋ ವೈರಲ್

(Car sunk in ditch in Mumbai due to heavy rain video viral)

Published On - 5:01 pm, Sun, 13 June 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್