AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡಲು ಕುಳಿತ ಸ್ಪೈಡರ್‌ ಮ್ಯಾನ್

ಸ್ಪೈಡರ್‌ ಮ್ಯಾನ್‌ ವೇಷವನ್ನು ಧರಿಸಿದ ಯುವಕನೊಬ್ಬ ಗಾರೆ ಕೆಲಸ ಮಾಡಿದಂತಹ, ಅಡುಗೆ ಮಾಡಿದಂತಹ, ಹಿರಿಯರಿಗೊಬ್ಬರಿಗೆ ರಸ್ತೆ ದಾಟಲು ಸಹಾಯ ಮಾಡಿದಂತಹ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ಸ್ಪೈಡರ್‌ ಮ್ಯಾನ್‌ ವೇಷ ಧರಿಸಿದ ಯುವಕನೊಬ್ಬ ರೈಲ್ವೆ ನಿಲ್ದಾಣದಲ್ಲಿ ಕುಳಿತು ಭಿಕ್ಷೆ ಬೇಡಿದ್ದಾನೆ. ಈ ಫನ್ನಿ ದೃಶ್ಯ ಕಂಡು ಅಯ್ಯೋ ದೇವರೇ… ಸ್ಪೈಡರ್‌ ಮ್ಯಾನ್‌ಗೆ ಇದೆಂಥಾ ಪರಿಸ್ಥಿತಿ ಬಂತು ತಮಾಷೆ ಮಾಡಿದ್ದಾರೆ.

Viral: ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡಲು ಕುಳಿತ ಸ್ಪೈಡರ್‌ ಮ್ಯಾನ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 24, 2024 | 4:41 PM

Share

ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ಈಗಿನ ಯುವ ಜನತೆ ಚಿತ್ರ ವಿಚಿತ್ರ ಅವತಾರಗಳನ್ನು ತಾಳುತ್ತಿರುತ್ತಾರೆ. ಕೆಲವರು ವಿಚಿತ್ರ, ಡಾನ್ಸ್‌, ಡೈಲಾಗ್ಸ್‌ ಮೂಲಕ ಮುನ್ನೆಲೆಗೆ ಬಂದ್ರೆ ಇನ್ನೂ ಕೆಲವರು ತಮ್ಮ ವಿಚಿತ್ರ ಅವತಾರಗಳ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಸ್ಪೈಡರ್‌ ಮ್ಯಾನ್‌ ವೇಷಧಾರಿಗಳ ವಿಡಿಯೋಗಳಂತೂ ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಈ ಹಿಂದೆ ಸ್ಪೈಡರ್‌ ಮ್ಯಾನ್‌ ವೇಷವನ್ನು ಧರಿಸಿದ ಯುವಕನೊಬ್ಬ ಟೆರೇಸ್‌ ಮೇಲೆ ಕುಳಿತು ಅಡುಗೆ ಮಾಡಿದಂತಹ, ಹಿರಿಯರಿಗೊಬ್ಬರಿಗೆ ರಸ್ತೆ ದಾಟಲು ಸಹಾಯ ಮಾಡಿದಂತಹ ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್‌ ಆಗಿದ್ದವು. ಇದೀಗ ಇಲ್ಲೊಬ್ಬ ಸ್ಪೈಡರ್‌ ಮ್ಯಾನ್‌ ವೇಷಧಾರಿ ರೈಲ್ವೆ ನಿಲ್ದಾಣದಲ್ಲಿ ಕುಳಿತು ಭಿಕ್ಷೆ ಬೇಡಿದ್ದಾನೆ. ಈ ವಿಡಿಯೋವನ್ನು ಆತ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದು, ಅಯ್ಯೋ ದೇವರೇ… ಸ್ಪೈಡರ್‌ ಮ್ಯಾನ್‌ಗೆ ಇದೆಂಥಾ ಪರಿಸ್ಥಿತಿ ಬಂತು ತಮಾಷೆ ಮಾಡಿದ್ದಾರೆ.

ರೀಲ್ಸ್‌ ಮಾಡಿ ಫೇಮಸ್‌ ಆಗುವ ಸಲುವಾಗಿ ಎಂತೆಂತಹ ಹುಚ್ಚು ಸಾಹಸಕ್ಕೂ ಕೈ ಹಾಕುವವರಿದ್ದಾರೆ. ಅದೇ ರೀತಿ ಇಲ್ಲೊಬ್ಬ ಯುವಕ ರೀಲ್ಸ್‌ ವಿಡಿಯೋಗಾಗಿ ಸ್ಪೈಡರ್‌ ಮ್ಯಾನ್‌ ವೇಷ ಧರಿಸಿ ಮುಂಬೈನ ಕಲ್ಯಾಣ್‌ ರೈಲ್ವೆ ನಿಲ್ದಾಣದಲ್ಲಿ ಕುಳಿತು ಭಿಕ್ಷೆ ಬೇಡಿದ್ದಾನೆ. ನಂತರ ಈ ವಿಡಿಯೋವನ್ನು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ (shaddyman98) ಖಾತೆಯಲ್ಲಿ ಶೇರ್‌ ಮಾಡಿದ್ದಾನೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಸ್ಪೈಡರ್‌ ಮ್ಯಾನ್‌ ವೇಷ ಧರಿಸಿದ ಯುವಕ ಮುಂಬೈನ ಕಲ್ಯಾಣ್‌ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಕುಳಿತು ಹಣ ಕೊಡಿ ಸ್ವಾಮಿ ಎಂದು ಕೈ ಚಾಚಿ ಭಿಕ್ಷೆ ಬೇಡುತ್ತಿರುವ ಫನ್ನಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿದ ಚಾಲಕ; ಫೋಟೋ ವೈರಲ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಯ್ಯಯ್ಯೋ ಸ್ಪೈಡರ್‌ ಮ್ಯಾನ್‌ನ ಆರ್ಥಿಕ ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿದೆಯೇʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼ ಸ್ಪೈಡರ್‌ ಮ್ಯಾನ್‌ಗೆ ಇದೆಂಥಾ ಪರಿಸ್ಥಿತಿ ಬಂತುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ