AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮೊದಲ ಮುಟ್ಟಿನ ನೋವಿಗೆ ಹೆದರಿ 14ವರ್ಷದ ಬಾಲಕಿ ಆತ್ಮಹತ್ಯೆ

ಮೊದಲ ಋತುಸ್ರಾವದ ನೋವು ತಡೆದುಕೊಳ್ಳಲಾಗದೆ 14 ವರ್ಷದ ಬಾಲಕಿ ಚಡಪಡಿಸಿ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮುಟ್ಟಿನ ಬಗ್ಗೆ ಬಾಲಕಿಗೆ ಯಾವುದೇ ಮಾಹಿತಿ ತಿಳಿಯದೇ ಇರುವುದು ಸಾವಿಗೆ ಕಾರಣವಾಯಿತು ಎಂದು ಪೊಲೀಸರ ತನಿಖೆಯ ವೇಳೆ ತಿಳಿದುಬಂದಿದೆ.

Viral News: ಮೊದಲ ಮುಟ್ಟಿನ ನೋವಿಗೆ ಹೆದರಿ 14ವರ್ಷದ ಬಾಲಕಿ ಆತ್ಮಹತ್ಯೆ
ಮೊದಲ ಮುಟ್ಟಿನ ನೋವಿಗೆ ಹೆದರಿ 14ವರ್ಷದ ಬಾಲಕಿ ಆತ್ಮಹತ್ಯೆ
ಅಕ್ಷತಾ ವರ್ಕಾಡಿ
|

Updated on:Mar 29, 2024 | 3:09 PM

Share

14 ವರ್ಷದ ಬಾಲಕಿಯೊಬ್ಬಳು ತನ್ನ ಮೊದಲ ಋತುಚಕ್ರದ (Menstrual cycle) ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮುಂಬೈನ ಮಲಾಡ್‌ನಲ್ಲಿ ನಡೆದಿದೆ. ಮುಟ್ಟಿನ ಬಗ್ಗೆ ಬಾಲಕಿಗೆ ಯಾವುದೇ ಮಾಹಿತಿ ತಿಳಿಯದೇ ಇರುವುದು ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 26 ರಂದು ತಡರಾತ್ರಿ ಈ ಘಟನೆ ನಡೆದಿದೆ. ಮೊದಲ ಬಾರಿಗೆ ಋತುಸ್ರಾವವಾದಾಗ ನೋವಿನ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿದ್ದಳು. ಇದಲ್ಲದೆ ನೋವಿನ ಜೊತೆಗೆ ಮಾನಸಿಕ ಒತ್ತಡವನ್ನು ಅನುಭವಿಸಿದ್ದಳು. ನೋವು ತಡೆದುಕೊಳ್ಳಲಾಗದೆ ಬಾಲಕಿ ಚಡಪಡಿಸಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟೋತ್ತಿಗಾಗಲೇ ಬಾಲಕಿ ಸಾವನ್ನಪ್ಪಿರುವುದಾಗಿ ವೈದ್ಯರು ಫೋಷಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ದುಷ್ಕೃತ್ಯ ಕಂಡುಬಂದಿಲ್ಲದ ಕಾರಣ  ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿರುವುದು ವರದಿಯಾಗಿದೆ.

ಪೊಲೀಸರು ಇದೀಗ ಬಾಲಕಿಯ ಕುಟುಂಬ ಸದಸ್ಯರು ಮತ್ತು ಶಾಲೆ ಮತ್ತು ಸ್ಥಳೀಯ ಸ್ನೇಹಿತರ ಹೇಳಿಕೆಗಳನ್ನು ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.  ತನಿಖೆಯ ಸಲುವಾಗಿ ಆಕೆಯ ಖಿನ್ನತೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಆಕೆಯ ಸ್ನೇಹಿತರ ಜೊತೆಗೆ ಮಾತನಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Fri, 29 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ