Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೇ ಟ್ರಾಫಿಕ್ ಪೊಲೀಸರನ್ನೇ ಎಳೆದೊಯ್ದ ಕಾರಿನ ಚಾಲಕ; ಎಫ್ಐಆರ್ ದಾಖಲು

Viral Video: ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೇ ದಂಡದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಸಿಬ್ಬಂದಿಯನ್ನು ಚಾಲಕ ಎಳೆದೊಯ್ದಿದ್ದಾನೆ. ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೇ ಟ್ರಾಫಿಕ್ ಪೊಲೀಸರನ್ನೇ ಎಳೆದೊಯ್ದ ಕಾರಿನ ಚಾಲಕ; ಎಫ್ಐಆರ್ ದಾಖಲು
ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೇ ದಂಡದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಸಿಬ್ಬಂದಿಯನ್ನು ಚಾಲಕ ಎಳೆದೊಯ್ಯುತ್ತಿರುವ ದೃಶ್ಯ
Follow us
TV9 Web
| Updated By: shruti hegde

Updated on:Oct 01, 2021 | 10:08 AM

ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೇ ದಂಡದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಸಿಬ್ಬಂದಿಯನ್ನು ಚಾಲಕ ಎಳೆದೊಯ್ದಿದ್ದಾನೆ. ಕಾರಿನ ಬ್ಯಾನೆಟ್ ಮೇಲೆ ಕುಳಿತ ಟ್ರಾಫಿಕ್ ಪೊಲೀಸರನ್ನು ಸುಮಾರು 1 ಕಿ. ಮೀ ನಷ್ಟು ಕರೆದೊಯ್ದಿದ್ದಾನೆ. ಘಟನೆ ನಿನ್ನೆ (ಸೆ.30) ಅಂಧೇರಿಯಲ್ಲಿ ನಡೆದಿದೆ. ಕಾರಿನ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿಯೊಬ್ಬರು ಅಂಧೇರಿಯಲ್ಲಿನ ಆಜಾದ್ ನಗರ ಮೆಟ್ರೋ ನಿಲ್ದಾಣದ ಕೆಳಗೆ ಕಾನ್​ಸ್ಟೇಬಲ್​ ವಿಜಯ್ ಸಿಂಗ್ ಗುರವ್ (48) ಕರ್ತವ್ಯದಲ್ಲಿದ್ದರು. ಟ್ರಾಫಿಕ್ ನಿಯಮ ಉಲ್ಲಂಘಿಸಿ ಒಂದು ಕಾರು ಸಾಗುತ್ತಿರುವುದನ್ನು ನೋಡಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾರು ನಿಲ್ಲಿಸಿದ್ದಾರೆ. ಆ ವೇಳೆ ಚಾಲಕ ಇವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ ಎಂದು ಹೇಳಿದ್ದಾರೆ.

ಚಾಲಕ ಕಾರಿನ ವೇಗ ಹೆಚ್ಚಿಸಲು ಪ್ರಯತ್ನಿಸುತ್ತಿದ್ದಂತೆ ಗುರವ್ ಅವರು ಕಾರನ್ನು ಚಲಿಸದಂತೆ ಕಾರಿನ ಬ್ಯಾನೆಟ್ ಮೇಲೆ ಹತ್ತಿ ಕುಳಿತಿದ್ದಾರೆ. ಆದರೂ ಸಹ ಚಾಲಕ ಕಾರು ನಿಲ್ಲಿಸದೇ ಬ್ಯಾನೆಟ್ ಮೇಲೆ ಕುಳಿತಿದ್ದ ಟ್ರಾಫಿಕ್ ಪೊಲೀಸರೊಂದಿಗೆ 1 ಕಿ.ಮೀ ಕಾರನ್ನು ಚಲಿಸಿಕೊಂಡು ಹೋಗಿದ್ದಾನೆ.

ಗುರವ್ ಅವರು ಪೊಲೀಸ್ ಠಾಣೆಯಲ್ಲಿ ಕಾರಿನ ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ. ಜನರು ಕ್ಯಾಮರಾದಲ್ಲಿ ದೃಶ್ಯವನ್ನು ಸೆರೆ ಹಿಡಿದಿದ್ದು ಕಾನ್​ಸ್ಟೇಬಲ್​ ಕಾರ್ ಬ್ಯಾನೆಟ್ ಮೇಲೆ ಕುಳಿತಿರುವಾಗ ಕಾರಿನ ಚಾಲಕ ವಾಹನವನ್ನು ಚಲಿಸುತ್ತಿರುವುದು ಕಂಡು ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral News: ವಿಚ್ಛೇದನದ ಬಳಿಕ ಪಾರ್ಟಿ ಆಯೋಜಿಸಿ ಸಂಭ್ರಮಿಸಿದ 45ರ ಮಹಿಳೆ! 17 ವರ್ಷದ ದಾಂಪತ್ಯ ಜೀವನದ ಕೊನೆಯ ದಿನವದು

Published On - 9:59 am, Fri, 1 October 21

ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ