AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಯಂತ್ರಣ ತಪ್ಪಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು; ಸಿಸಿಟಿವಿಯಲ್ಲಿ ಸೆರೆ

ಮಂಗಳವಾರ (ಜುಲೈ 16) ಮಧ್ಯಾಹ್ನ 2.40 ರ ಸುಮಾರಿಗೆ, ಕೆಲಸದ ವಿರಾಮದ ಸಮಯದಲ್ಲಿ ಕಟ್ಟಡದ ಮೂರನೇ ಮಹಡಿಯಲ್ಲಿನ ಮೆಟ್ಟಿಲುಗಳ ಬಳಿ ನಾಗಿನಾ ಕುಳಿತಿರುವುದು ಕಂಡುಬಂದಿದೆ. ಸಹೋದ್ಯೋಗಿಗಳೊಂದಿಗೆ ನಗುತ್ತಾ ಮಾತನಾಡುತ್ತಿರುವ ವೇಳೆ ಹಿಡಿತ ತಪ್ಪಿ ಮೂರನೇ ಮಹಡಿಯಿಂದ ಮಹಿಳೆ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Follow us
ಅಕ್ಷತಾ ವರ್ಕಾಡಿ
|

Updated on:Jul 18, 2024 | 12:13 PM

ಮುಂಬೈ: ಮಹಿಳೆಯೊಬ್ಬಳು ನಿಯಂತ್ರಣ ತಪ್ಪಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಮೃತ ಮಹಿಳೆ ನಾಗಿನಾ ದೇವಿ ಅಲಿಯಾಸ್ ಗುಡಿಯಾ ದೇವಿ ಎಂದು ಗುರುತಿಸಲಾಗಿದ್ದು, ಈಕೆ ಡೊಂಬಿವಲಿಯಲ್ಲಿರುವ ಗ್ಲೋಬ್ ಸ್ಟೇಟ್ ಬಿಲ್ಡಿಂಗ್ ಕಾಂಪ್ಲೆಕ್ಸ್‌ನ ಕ್ಲೀನಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು. ಮಂಗಳವಾರ (ಜುಲೈ 16) ಮಧ್ಯಾಹ್ನ 2.40 ರ ಸುಮಾರಿಗೆ, ವಿರಾಮದ ಸಮಯದಲ್ಲಿ ಕಟ್ಟಡದ ಮೂರನೇ ಮಹಡಿಯಲ್ಲಿನ ಮೆಟ್ಟಿಲುಗಳ ಬಳಿ ನಾಗಿನಾ ಕುಳಿತಿರುವುದು ಕಂಡುಬಂದಿದೆ.

ಸಹೋದ್ಯೋಗಿಗಳೊಂದಿಗೆ ನಗುತ್ತಾ ಹಿಡಿತ ತಪ್ಪಿ ಅಲ್ಲಿಂದ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅವಳ ಜೊತೆಗೆ ಅವಳ ಹಿಂದೆಯಿದ್ದ ವ್ಯಕ್ತಿ ಕೂಡ ಬಿದ್ದಿದ್ದು, ಆದರೆ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ; ಪರ ಸ್ತ್ರೀಯೊಂದಿಗೆ ರೋಮ್ಯಾನ್ಸ್​​​ ಮಾಡುತ್ತಿದ್ದ ವೇಳೆ ಪತ್ನಿಯ ಎಂಟ್ರಿ, ಪತಿಗೆ ಹಿಗ್ಗಾಮುಗ್ಗಾ ಥಳಿತ

ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ನಾಗಿನಾ ದೇವಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಈ ಭೀಕರ ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಅಧಿಕಾರಿಗಳು ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Thu, 18 July 24

ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್