AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಯಂತ್ರಣ ತಪ್ಪಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು; ಸಿಸಿಟಿವಿಯಲ್ಲಿ ಸೆರೆ

ಮಂಗಳವಾರ (ಜುಲೈ 16) ಮಧ್ಯಾಹ್ನ 2.40 ರ ಸುಮಾರಿಗೆ, ಕೆಲಸದ ವಿರಾಮದ ಸಮಯದಲ್ಲಿ ಕಟ್ಟಡದ ಮೂರನೇ ಮಹಡಿಯಲ್ಲಿನ ಮೆಟ್ಟಿಲುಗಳ ಬಳಿ ನಾಗಿನಾ ಕುಳಿತಿರುವುದು ಕಂಡುಬಂದಿದೆ. ಸಹೋದ್ಯೋಗಿಗಳೊಂದಿಗೆ ನಗುತ್ತಾ ಮಾತನಾಡುತ್ತಿರುವ ವೇಳೆ ಹಿಡಿತ ತಪ್ಪಿ ಮೂರನೇ ಮಹಡಿಯಿಂದ ಮಹಿಳೆ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on:Jul 18, 2024 | 12:13 PM

Share

ಮುಂಬೈ: ಮಹಿಳೆಯೊಬ್ಬಳು ನಿಯಂತ್ರಣ ತಪ್ಪಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಮೃತ ಮಹಿಳೆ ನಾಗಿನಾ ದೇವಿ ಅಲಿಯಾಸ್ ಗುಡಿಯಾ ದೇವಿ ಎಂದು ಗುರುತಿಸಲಾಗಿದ್ದು, ಈಕೆ ಡೊಂಬಿವಲಿಯಲ್ಲಿರುವ ಗ್ಲೋಬ್ ಸ್ಟೇಟ್ ಬಿಲ್ಡಿಂಗ್ ಕಾಂಪ್ಲೆಕ್ಸ್‌ನ ಕ್ಲೀನಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು. ಮಂಗಳವಾರ (ಜುಲೈ 16) ಮಧ್ಯಾಹ್ನ 2.40 ರ ಸುಮಾರಿಗೆ, ವಿರಾಮದ ಸಮಯದಲ್ಲಿ ಕಟ್ಟಡದ ಮೂರನೇ ಮಹಡಿಯಲ್ಲಿನ ಮೆಟ್ಟಿಲುಗಳ ಬಳಿ ನಾಗಿನಾ ಕುಳಿತಿರುವುದು ಕಂಡುಬಂದಿದೆ.

ಸಹೋದ್ಯೋಗಿಗಳೊಂದಿಗೆ ನಗುತ್ತಾ ಹಿಡಿತ ತಪ್ಪಿ ಅಲ್ಲಿಂದ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅವಳ ಜೊತೆಗೆ ಅವಳ ಹಿಂದೆಯಿದ್ದ ವ್ಯಕ್ತಿ ಕೂಡ ಬಿದ್ದಿದ್ದು, ಆದರೆ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ; ಪರ ಸ್ತ್ರೀಯೊಂದಿಗೆ ರೋಮ್ಯಾನ್ಸ್​​​ ಮಾಡುತ್ತಿದ್ದ ವೇಳೆ ಪತ್ನಿಯ ಎಂಟ್ರಿ, ಪತಿಗೆ ಹಿಗ್ಗಾಮುಗ್ಗಾ ಥಳಿತ

ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ನಾಗಿನಾ ದೇವಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಈ ಭೀಕರ ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಅಧಿಕಾರಿಗಳು ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Thu, 18 July 24

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​