AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಚಿಕನ್‌ ಮೂಳೆ ಗಂಟಲಲ್ಲಿ ಸಿಲುಕಿ ಪರದಾಡಿದ ಮಹಿಳೆ; ನಾನ್‌ವೆಜ್‌ ಪ್ರಿಯರೇ ಬಿರಿಯಾನಿ ತಿನ್ನೋ ಮುನ್ನ ಜೋಪಾನ

ಬಿರಿಯಾನಿ ತಿನ್ನುವಾಗ ಗಂಟಲಲ್ಲಿ ಮೂಳೆ ಸಿಲುಕಿ, ಗಂಟಲಲ್ಲಿ ಮೀನು ಸಿಲುಕಿ ಪೇಚಿಗೆ ಸಿಲುಕಿದವರ ಸುದ್ದಿಯನ್ನು ಈ ಹಿಂದೆಯೂ ಕೇಳಿರುತ್ತೀರಿ ಅಲ್ವಾ. ಇದೀಗ ಇಲ್ಲೊಂದು ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರು ಬಿರಿಯಾನಿಯಲ್ಲಿನ ಚಿಕನ್‌ ಮೂಳೆ ತಿನ್ನಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಿನ್ನುವಾಗ ಮೂಳೆ ಗಂಟಲಲ್ಲಿ ಸಿಲುಕಿದ್ದು, ಸತತ ಎಂಟು ಗಂಟೆಗಳ ಶಸ್ತ್ರ ಚಿಕಿತ್ಸೆಯ ಬಳಿಕ ವೈದ್ಯರು ಮೂಳೆಯನ್ನು ಹೊರ ತೆಗೆದಿದ್ದಾರೆ. ಈ ಸುದ್ದಿ ಇದೀಗ ಭಾರಿ ವೈರಲ್‌ ಆಗುತ್ತಿದೆ.

Viral: ಚಿಕನ್‌ ಮೂಳೆ ಗಂಟಲಲ್ಲಿ ಸಿಲುಕಿ ಪರದಾಡಿದ ಮಹಿಳೆ; ನಾನ್‌ವೆಜ್‌ ಪ್ರಿಯರೇ ಬಿರಿಯಾನಿ ತಿನ್ನೋ ಮುನ್ನ ಜೋಪಾನ
New Project (17)
ಮಾಲಾಶ್ರೀ ಅಂಚನ್​
| Edited By: |

Updated on:Mar 09, 2025 | 5:36 PM

Share

ಮುಂಬೈ, ಮಾ. 09: ಯಾವುದೇ ಆಹಾರವನ್ನು ನಿಧಾನವಾಗಿ ಆರಾಮವಾಗಿ ಸವಿದು ತಿನ್ನಬೇಕು ಎಂದು ಹೇಳ್ತಾರೆ. ಹೀಗಿದ್ರೂ ಕೂಡಾ ಕೆಲವೊಬ್ರು ಗಬಗಬನೆ ಊಟ ಮಾಡ್ತಾರೆ. ಹೀಗೆ ಗಬಗಬನೆ ಆಹಾರ ತಿನ್ನಲು ಹೋಗಿ, ಆ ಆಹಾರ ಗಂಟಲಲ್ಲಿ ಸಿಲುಕಿ ಹಲವರು ಪೇಚಿಗೆ ಸಿಲುಕಿದ್ದಾರೆ. ಹೀಗೆ ಗಂಟಲಲ್ಲಿ ಮೀನು, ಚಿಕನ್‌ ಮೂಳೆ ಸಿಕ್ಕಿ ಸಂಕಷ್ಟಕ್ಕೆ ಸಿಲುಕಿದವರ ಸುದ್ದಿಗಳನ್ನು ಈ ಹಿಂದೆಯೂ ಕೇಳಿರುತ್ತೀರಿ ಅಲ್ವಾ. ಇದೀಗ ಇಲ್ಲೊಂದು ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರು ಬಿರಿಯಾನಿಯಲ್ಲಿನ ಚಿಕನ್‌ ಮೂಳೆ ತಿನ್ನಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಿನ್ನುವಾಗ ಮೂಳೆ ಗಂಟಲಲ್ಲಿ ಸಿಲುಕಿದ್ದು, ಸತತ ಎಂಟು ಗಂಟೆಗಳ ಶಸ್ತ್ರ ಚಿಕಿತ್ಸೆಯ ಬಳಿಕ ವೈದ್ಯರು ಮೂಳೆಯನ್ನು ಹೊರ ತೆಗೆದಿದ್ದಾರೆ. ಈ ಸುದ್ದಿ ಇದೀಗ ಭಾರಿ ವೈರಲ್‌ ಆಗುತ್ತಿದೆ.

ಮುಂಬೈನ ಕುರ್ಲಾದ ಮಹಿಳೆಯೊಬ್ಬರು ಬಿರಿಯಾನಿ ಸವಿಯಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು ರೆಸ್ಟೋರೆಂಟ್‌ ಒಂದರಲ್ಲಿ ಬಿರಿಯಾನಿ ತಿನ್ನುವ ವೇಳೆ, ಚಿಕನ್‌ ಮೂಳೆ ಅವರ ಗಂಟಲಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಸತತ 8 ಗಂಟೆಗಳ ಶಸ್ತ್ರ ಚಿಕಿತ್ಸೆಯ ನಂತರ ವೈದ್ಯರು ಮಹಿಳೆಯ ಗಂಟಲಲ್ಲಿ ಸಿಲುಕಿದ್ದ 3.2 ಸೆಂ.ಮೀ ಉದ್ದದ ಮೂಳೆಯನ್ನು ಹೊರ ತೆಗೆದಿದ್ದಾರೆ.

34 ವರ್ಷದ ರೂಬಿ ತನ್ನ ಕುಟುಂಬದೊಂದಿಗೆ ಹೊರಗೆ ರೆಸ್ಟೋರೆಂಟ್‌ ಒಂದಕ್ಕೆ ಊಟ ಮಾಡಲು ಹೋಗಿದ್ದು, ಅಲ್ಲಿ ಅವರು ತಮ್ಮಿಷ್ಟದ ಚಿಕನ್‌ ಬಿರಿಯಾನಿ ಆರ್ಡರ್‌ ಮಾಡಿದ್ದಾರೆ. ಮತ್ತು ಬಿರಿಯಾನಿ ತಿನ್ನುವಾಗ ಚಿಕನ್‌ ಮೂಳೆ ಗಂಟಲಲ್ಲಿ ಸಿಕ್ಕಿ ಹಾಕಿಕೊಂಡಿದೆ. ಬಳಿಕ ಆಸ್ಪತ್ರೆಗೆ ದಾಖಲಾಗಬೇಕಾದ ಪರಿಸ್ಥಿತಿ ಎದುರಾಯಿತು. ನಂತರ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಮೂಳೆ ಹೊರ ತೆಗೆದಿದ್ದಾರೆ. ಚಿಕನ್‌ ಬಿರಿಯಾನಿ ತಂದ ಸಂಕಷ್ಟದಿಂದ 8 ಲಕ್ಷ ರೂ. ಖರ್ಚಾಗಿದ್ದು, ಇನ್ನು ಮುಂದೆ ನಾನು ಬಿರಿಯಾನಿ ತಿನ್ನುವುದಿಲ್ಲ, ಜೊತೆಗೆ ಮನೆಯಲ್ಲಿ ಬಿರಿಯಾನಿ ಮಾಡುವುದು ಇಲ್ಲ ಎಂದು ರೂಬಿ ತಮ್ಮ ಪತಿಗೆ ಹೇಳಿದ್ದಾರೆ.

ಇದನ್ನೂ ಓದಿ: CISF ನಲ್ಲಿ 1100 ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ

ಫೆಬ್ರವರಿ 3 ರಂದು, ರೂಬಿ ಗಂಟಲು ನೋವಿನಿಂದಾಗಿ ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ದಾಖಲಾದಾಗ ಎಕ್ಸ್-ರೇ ಸ್ಕ್ಯಾನ್ ಮಾಡಿದಾಗ ಆಕೆಯ ಕುತ್ತಿಗೆಯಲ್ಲಿ ವಿಚಿತ್ರ ವಸ್ತುವೊಂದು ಸಿಲುಕಿಕೊಂಡಿರುವುದು ಕಂಡುಬಂದಿದೆ. ಇದಾದ ನಂತರ, ವೈದ್ಯರು ರೂಬಿಯನ್ನು ಅಡ್ಮಿಟ್‌ ಆಗುವಂತೆ ಕೇಳಿದಾಗ, ಅವರು ಇದಕ್ಕೆ ನಿರಾಕರಿಸಿದ್ದಾರೆ. ಎರಡು ದಿನಗಳ ನಂತರ, ರೂಬಿ ಜ್ವರ, ಅಧಿಕ ರಕ್ತದೊತ್ತಡ ಮತ್ತು ಸೋಂಕಿನ ಕಾರಣದಿಂದ ಮತ್ತೆ ಆಸ್ಪತ್ರೆಗೆ ಬಂದಿದ್ದು, ಈ ಬಾರಿ ಎಂಡೋಸ್ಕೋಪಿ ಮತ್ತು ಸಿಟಿ ಸ್ಕ್ಯಾನ್ ಮಾಡಿದಾಗ ಅನ್ನನಾಳದಲ್ಲಿ ಏನೋ ಸಿಲುಕಿರುವುದನ್ನು ವೈದ್ಯರು ಗಮನಿಸುತ್ತಾರೆ. ನಂತರ ರೂಬಿಯನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಿದ್ದಾರೆ. ವೈದ್ಯರು ಶಸ್ತ್ರಚಿಕಿತ್ಸೆಯನ್ನು ಪ್ರಾರಂಭಿಸಿದಾಗ, ಎರಡು ಗಂಟೆಗಳಲ್ಲಿ ಆಪರೇಷನ್‌ ಮುಗಿಯುತ್ತದೆ ಎಂದು ಭಾವಿಸಿದ್ದರು. ಆದರೆ ರೂಬಿಯ ಆಪರೇಷನ್‌ ಎಷ್ಟು ಕಷ್ಟಕರವಾಯಿತೆಂದರೆ ಗಂಟಲಲ್ಲಿ ಸಿಲುಕಿದ್ದ ಚಿಕನ್‌ ಮೂಳೆಯನ್ನು ಹೊರ ತೆಗೆಯಲು ಎಂಟು ಗಂಟೆಗಳು ಬೇಕಾಯಿತು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Sun, 9 March 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?