AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್ ಬೋರ್ಡ್ ನಲ್ಲಿ ನೇತಾಡಿಕೊಂಡೇ ಪ್ರಯಾಣಿಸುತ್ತಿರುವ ಮಹಿಳಾ ಪ್ರಯಾಣಿಕರು

ಭಾರತೀಯ ರೈಲ್ವೆಗೆ ಸಂಬಂಧಿಸಿದ ಕೆಲವೊಂದು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಕೆಲವು ಪ್ರಯಾಣಿಕರು ತಮ್ಮ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಾ ಪ್ರಯಾಣಿಸುತ್ತಾರೆ. ಇದೀಗ ಮಹಿಳೆಯರು ತಮ್ಮ ಪ್ರಾಣವನ್ನು ಕೈಯಲ್ಲೇ ಹಿಡಿದುಕೊಂಡು ಪ್ರಯಾಣಿಸುತ್ತಿರುವ ಅಪಾಯಕಾರಿ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರು ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಫುಟ್ ಬೋರ್ಡ್ ನಲ್ಲಿ ನೇತಾಡಿಕೊಂಡೇ ಪ್ರಯಾಣಿಸುತ್ತಿರುವ ಮಹಿಳಾ ಪ್ರಯಾಣಿಕರು
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on: May 13, 2025 | 4:15 PM

Share

ಮುಂಬೈ, ಮೇ 13: ಭಾರತೀಯ ರೈಲ್ವೆ (india railway) ಪ್ರಯಾಣವು ವೆಚ್ಚದಲ್ಲಿ ಅಷ್ಟೇನು ದುಬಾರಿಯಲ್ಲದ ಇದನ್ನು ಓಡಾಟಕ್ಕಾಗಿ ಬಳಸಿಕೊಂಡಿದ್ದಾರೆ. ಹೌದು, ದೆಹಲಿ ಹಾಗೂ ಮುಂಬೈನಂತಹ ದೊಡ್ಡ ದೊಡ್ಡ ನಗರಗಳಲ್ಲಿ ತಮ್ಮ ದಿನನಿತ್ಯದ ಓಡಾಟಕ್ಕಾಗಿ ರೈಲನ್ನೇ ಅವಲಂಬಿಸಿಕೊಂಡವರು ಹೆಚ್ಚೇ ಎನ್ನಬಹುದು. ಆದರೆ ರೈಲಿನಲ್ಲಿ ಪ್ರಯಾಣಿಸುವವರು ಹೆಚ್ಚಿರುವ ಕಾರಣ ನೂಕುನುಗ್ಗಲು, ತಳ್ಳಾಟಗಳು ನಡೆಯುತ್ತಿರುತ್ತದೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಹಿಳೆಯ ಅಪಾಯಕಾರಿ ರೈಲ್ವೆ ಪ್ರಯಾಣ ಕಂಡು ಶಾಕ್ ಆಗಿದ್ದಾರೆ. ಮುಂಬೈ (mumbai) ನ ಕಲ್ಯಾಣದಿಂದ ಹೊರಟಿದ್ದ ಮಹಿಳಾ ವಿಶೇಷ ಲೋಕಲ್ ರೈಲಿ (ladies special local train) ನಲ್ಲಿ ಈ ರೀತಿ ಅಪಾಯಕಾರಿ ದೃಶ್ಯವು ಕಂಡು ಬಂದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಪ್ರಾಣದ ಜೊತೆಗೆ ಚೆಲ್ಲಾಟ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

@mumbairailusers ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದೊಂದಿಗೆ ‘ಕಲ್ಯಾಣ್ ನಿಂದ ಇಂದಿನ ಮಹಿಳಾ ವಿಶೇಷ ಲೋಕಲ್ ರೈಲು 40 ನಿಮಿಷಗಳ ಕಾಲ ವಿಳಂಬವಾಯಿತು. ಇದರಿಂದಾಗಿ ಮಹಿಳೆಯರು ಫುಟ್ ಬೋರ್ಡ್ ನಲ್ಲಿ ನೇತಾಡಬೇಕಾಯಿತು – ಇದು ಅಸುರಕ್ಷಿತ ಹಾಗೂ ಅಪಾಯಕಾರಿ ಪ್ರಯಾಣ. ಇದು ಅಪಾಯಕಾರಿಯಾಗಿದ್ದರೂ ಈ ವಿಳಂಬವು ಮುಂದುವರೆದಿದೆ. ಅಶ್ವಿನಿ ವೈಷ್ಣವ್ ದಯವಿಟ್ಟು ರೈಲು ವಿಳಂಬವಾಗುವುದರ ಬಗ್ಗೆ ಪರಿಶೀಲಿಸಿ’ ಎಂದು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ
Image
ಸೋಫಿಯಾ ಅನ್ಸಾರಿ ಅಂತಾಗಬೇಡಿ, ಸೋಫಿಯಾ ಖುರೇಷಿ ಅವರಂತಾಗಿ ಎಂದ ವ್ಯಕ್ತಿ
Image
ಕಲಿಸುವುದು ಒಂದು, ಪ್ರದರ್ಶಿಸುವುದು ಇನ್ನೊಂದು: ಇದು ನಮ್ಮ ಶಿಕ್ಷಣದ ಸ್ಥಿತಿ
Image
ಈಜಿಪುರ ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳಲು ಟ್ರಂಪ್ ಮಧ್ಯಸ್ಥಿಕೆ ವಹಿಸಬೇಕು
Image
ಪ್ರಬಂಧದಲ್ಲಿ ತನ್ನ ತಾಯಿಯ ವಿಶ್ವ ರೂಪದ ಬಗ್ಗೆ ಉಲ್ಲೇಖಿಸಿದ ಮುದ್ದಿನ ಮಗ

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋದಲ್ಲಿ ರೈಲು ವಿಳಂಬವಾಗಿ ಬಂದ ಕಾರಣ ರೈಲು ಹತ್ತಲು ನೂಕುನುಗ್ಗಲು ಏರ್ಪಟ್ಟಿರುವುದನ್ನು ಕಾಣಬಹುದು. ಕೆಲ ಮಹಿಳೆಯರು ಬಾಗಿಲಿನ ಫುಟ್ ಬೋರ್ಡ್ ನಲ್ಲಿ ನಿಂತು ನೇತಾಡುತ್ತಿದ್ದಾರೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸದಿರುವುದಕ್ಕೆ ರೈಲ್ವೆ ಇಲಾಖೆಯ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಚಾಟ್ ಜಿಪಿಟಿನಿಂದಲೇ ಗಂಡ ಕುಡಿದ ಕಾಫಿ ಕಪ್ ವಿಶ್ಲೇಷಣೆ ಮಾಡಿದ ಮಹಿಳೆ, ಮುರಿದೇ ಬಿತ್ತು ದಾಂಪತ್ಯ ಜೀವನ

ಈ ವಿಡಿಯೋವೊಂದು ಒಂದು ಲಕ್ಷ ಎಪತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡು ಕೊಂಡಿದ್ದು ಬಳಕೆದಾರರು ಕಾಮೆಂಟ್ ಗಳು ಮಾಡುವ ಈ ರೀತಿ ಪ್ರಯಾಣ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಬಳಕೆದಾರರೊಬ್ಬರು, ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಇದು ಮುಂಬೈ ಪ್ರಯಾಣಿಕರ ನಿತ್ಯದ ಪಾಡು, ದಿನನಿತ್ಯ ರೈಲಿನಲ್ಲಿ ಈ ರೀತಿ ಹೋರಾಡುತ್ತಾರೆ. ಆದರೆ ಮಹಾರಾಷ್ಟ್ರ ಸರ್ಕಾರವು ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ’ ಎಂದಿದ್ದಾರೆ. ಇನ್ನೊಬ್ಬರು, ಇದು ಕೇವಲ ವಿಳಂಬವಲ್ಲ, ಇದು ದೈನಂದಿನ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು