AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಗುವಿಗೆ ‘ಮಹಾಲಕ್ಷ್ಮಿ’ ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ

ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ರೈಲಿನಲ್ಲಿಯೇ ಮಗು ಜನಿಸಿದ್ದು, ಜೊತೆಗೆ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮಗು ಜನಿಸಿದ್ದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರು ಮಗುವನ್ನು ಮಹಾಲಕ್ಷ್ಮಿಗೆ ಹೋಲಿಕೆ ಮಾಡಿದ್ದಾರೆ. ಅದಕ್ಕಾಗಿಯೇ ಮಗಳಿಗೆ ಮಹಾಲಕ್ಷ್ಮಿ ಎಂದು ಹೆಸರಿಡಲು ನಿರ್ಧರಿಸಿದ್ದೇನೆ ಎಂದು ಪತಿ ದಯಾಬ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Viral News: ಮಗುವಿಗೆ 'ಮಹಾಲಕ್ಷ್ಮಿ' ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ
ಮಗುವಿಗೆ 'ಮಹಾಲಕ್ಷ್ಮಿ' ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ
ಅಕ್ಷತಾ ವರ್ಕಾಡಿ
|

Updated on:Jun 11, 2024 | 5:48 PM

Share

ಮಹಾರಾಷ್ಟ್ರ: ಮುಸ್ಲಿಂ ದಂಪತಿಯೊಂದು ತಮ್ಮ ಮಗುವಿಗೆ ಮಹಾಲಕ್ಷ್ಮಿ ಎಂದು ನಾಮಕರಣ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಜೂನ್ 6ರಂದು ಕೊಲ್ಹಾಪುರ-ಮುಂಬೈ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ಪತಿ ದಯಾಬ್ ಜೊತೆಗೆ ಪ್ರಯಾಣಿಸುತ್ತಿದ್ದ ಗರ್ಭಿಣಿ ಫಾತಿಮಾ (31) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೆಲ ಕ್ಷಣದಲ್ಲೇ ಫಾತಿಮಾ ರೈಲಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲು ಹೆಸರು ಒಂದೆಡೆಯಾದರೆ ಇನ್ನೊಂದೆಡೆ ತಿರುಪತಿಯಿಂದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗುತ್ತಿದ್ದ ದಾರಿಯಲ್ಲೇ ಮಗು ಜನಿಸಿದ್ದರಿಂದ ದಂಪತಿ ಮಗುವಿಗೆ ಮಹಾಲಕ್ಷ್ಮಿ ಎಂದೇ ಹೆಸರಿಟ್ಟಿದ್ದಾರೆ.

ಹೆರಿಗೆ ನೋವಿನಿಂದ ನರಳುತ್ತಿದ್ದ ಫಾತಿಮಾ ಅವರಿಗೆ ರೈಲಿನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರು ಸಹಾಯ ಮಾಡಿದ್ದಾರೆ. ತಕ್ಷಣ ಸಹ ಪ್ರಯಾಣಿಕರು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಮುಂದಿನ ನಿಲ್ಧಾಣ ಅಂದರೆ ಕರ್ಜತ್ ರೈಲು ನಿಲ್ದಾಣ ತಲುಪಿದಾಗ, ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಿ ತಾಯಿ ಮತ್ತು ಮಗುವನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಮತ್ತು ತಾಯಿ ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಕೆರೆಯಲ್ಲಿ ಹಾಯಾಗಿ ಮಲಗಿದ ವ್ಯಕ್ತಿ, ಸಾವನ್ನಪ್ಪಿದ್ದಾನೆ ಎಂದು ಪೊಲೀಸರನ್ನು ಕರೆಸಿದ ಸ್ಥಳೀಯರು

ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ರೈಲಿನಲ್ಲಿಯೇ ಮಗು ಜನಿಸಿದ್ದು, ಜೊತೆಗೆ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮಗು ಜನಿಸಿದ್ದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರು ಮಗುವನ್ನು ಮಹಾಲಕ್ಷ್ಮಿಗೆ ಹೋಲಿಕೆ ಮಾಡಿದ್ದಾರೆ. ಅದಕ್ಕಾಗಿಯೇ ಮಗಳಿಗೆ ಮಹಾಲಕ್ಷ್ಮಿ ಎಂದು ಹೆಸರಿಡಲು ನಿರ್ಧರಿಸಿದ್ದೇನೆ ಎಂದು ಪತಿ ದಯಾಬ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:47 pm, Tue, 11 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ