AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಗುವಿಗೆ ‘ಮಹಾಲಕ್ಷ್ಮಿ’ ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ

ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ರೈಲಿನಲ್ಲಿಯೇ ಮಗು ಜನಿಸಿದ್ದು, ಜೊತೆಗೆ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮಗು ಜನಿಸಿದ್ದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರು ಮಗುವನ್ನು ಮಹಾಲಕ್ಷ್ಮಿಗೆ ಹೋಲಿಕೆ ಮಾಡಿದ್ದಾರೆ. ಅದಕ್ಕಾಗಿಯೇ ಮಗಳಿಗೆ ಮಹಾಲಕ್ಷ್ಮಿ ಎಂದು ಹೆಸರಿಡಲು ನಿರ್ಧರಿಸಿದ್ದೇನೆ ಎಂದು ಪತಿ ದಯಾಬ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Viral News: ಮಗುವಿಗೆ 'ಮಹಾಲಕ್ಷ್ಮಿ' ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ
ಮಗುವಿಗೆ 'ಮಹಾಲಕ್ಷ್ಮಿ' ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ
ಅಕ್ಷತಾ ವರ್ಕಾಡಿ
|

Updated on:Jun 11, 2024 | 5:48 PM

Share

ಮಹಾರಾಷ್ಟ್ರ: ಮುಸ್ಲಿಂ ದಂಪತಿಯೊಂದು ತಮ್ಮ ಮಗುವಿಗೆ ಮಹಾಲಕ್ಷ್ಮಿ ಎಂದು ನಾಮಕರಣ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಜೂನ್ 6ರಂದು ಕೊಲ್ಹಾಪುರ-ಮುಂಬೈ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ಪತಿ ದಯಾಬ್ ಜೊತೆಗೆ ಪ್ರಯಾಣಿಸುತ್ತಿದ್ದ ಗರ್ಭಿಣಿ ಫಾತಿಮಾ (31) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೆಲ ಕ್ಷಣದಲ್ಲೇ ಫಾತಿಮಾ ರೈಲಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲು ಹೆಸರು ಒಂದೆಡೆಯಾದರೆ ಇನ್ನೊಂದೆಡೆ ತಿರುಪತಿಯಿಂದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗುತ್ತಿದ್ದ ದಾರಿಯಲ್ಲೇ ಮಗು ಜನಿಸಿದ್ದರಿಂದ ದಂಪತಿ ಮಗುವಿಗೆ ಮಹಾಲಕ್ಷ್ಮಿ ಎಂದೇ ಹೆಸರಿಟ್ಟಿದ್ದಾರೆ.

ಹೆರಿಗೆ ನೋವಿನಿಂದ ನರಳುತ್ತಿದ್ದ ಫಾತಿಮಾ ಅವರಿಗೆ ರೈಲಿನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರು ಸಹಾಯ ಮಾಡಿದ್ದಾರೆ. ತಕ್ಷಣ ಸಹ ಪ್ರಯಾಣಿಕರು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಮುಂದಿನ ನಿಲ್ಧಾಣ ಅಂದರೆ ಕರ್ಜತ್ ರೈಲು ನಿಲ್ದಾಣ ತಲುಪಿದಾಗ, ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಿ ತಾಯಿ ಮತ್ತು ಮಗುವನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಮತ್ತು ತಾಯಿ ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಕೆರೆಯಲ್ಲಿ ಹಾಯಾಗಿ ಮಲಗಿದ ವ್ಯಕ್ತಿ, ಸಾವನ್ನಪ್ಪಿದ್ದಾನೆ ಎಂದು ಪೊಲೀಸರನ್ನು ಕರೆಸಿದ ಸ್ಥಳೀಯರು

ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ರೈಲಿನಲ್ಲಿಯೇ ಮಗು ಜನಿಸಿದ್ದು, ಜೊತೆಗೆ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮಗು ಜನಿಸಿದ್ದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರು ಮಗುವನ್ನು ಮಹಾಲಕ್ಷ್ಮಿಗೆ ಹೋಲಿಕೆ ಮಾಡಿದ್ದಾರೆ. ಅದಕ್ಕಾಗಿಯೇ ಮಗಳಿಗೆ ಮಹಾಲಕ್ಷ್ಮಿ ಎಂದು ಹೆಸರಿಡಲು ನಿರ್ಧರಿಸಿದ್ದೇನೆ ಎಂದು ಪತಿ ದಯಾಬ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:47 pm, Tue, 11 June 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ