AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಜಾಬ್ ಧರಿಸದೆ ಟಿಕ್‌ ಟಾಕ್‌ನಲ್ಲಿ ಲೈವ್‌ ಬಂದ ಮುಸ್ಲಿಂ ಯುವತಿ, ಹಿಗ್ಗಾಮುಗ್ಗಾ ಥಳಿಸಿದ ಪೋಷಕರು

ಸೋಷಿಯಲ್‌ ಮೀಡಿಯಾದ ಇನ್ಫುಯೆನ್ಸರ್‌ ಒಬ್ಬಳು ತನ್ನ ಫಾಲೋವರ್ಸ್‌  ಜೊತೆಗೆ ಚಿಟ್‌ಚಾಟ್‌ ಮಾಡಲೆಂದು ಟಿಕ್‌ ಟಾಕ್‌ನಲ್ಲಿ ಲೈವ್‌ ಬಂದಿದ್ದಾಳೆ. ತಲೆಗೆ ಹಿಜಾಬ್‌ ಮತ್ತು ಎದೆಗೆ ಶಾಲು ಧರಿಸದೆ ತುಂಡುಡುಗೆಯನ್ನು ತೊಟ್ಟು ವಿಡಿಯೋ ಮಾಡುತ್ತಿದ್ದ ಈ ಯುವತಿಯ ಅವತಾರವನ್ನು ಕಂಡು ಕೋಪಗೊಂಡ ಪೋಷಕರು ಲೈವ್‌ ಅಲ್ಲಿಯೇ ಆಕೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ. 

Viral Video: ಹಿಜಾಬ್ ಧರಿಸದೆ ಟಿಕ್‌ ಟಾಕ್‌ನಲ್ಲಿ ಲೈವ್‌ ಬಂದ ಮುಸ್ಲಿಂ ಯುವತಿ, ಹಿಗ್ಗಾಮುಗ್ಗಾ ಥಳಿಸಿದ ಪೋಷಕರು
ಮಾಲಾಶ್ರೀ ಅಂಚನ್​
| Edited By: |

Updated on: May 17, 2024 | 12:09 PM

Share

ಇಸ್ಲಾಂ ಧರ್ಮದಲ್ಲಿ ಮಹಿಳೆಯರು ಹಿಜಾಬ್‌ ಧರಿಸುವುದು ಕಡ್ಡಾಯ.  ಒಂದು ವೇಳೆ ಧಾರ್ಮಿಕ ಕಟ್ಟುಪಾಡುಗಳನ್ನು ಉಲ್ಲಂಘಿಸಿ ಅವರೇನಾದರೂ  ಹಿಜಾಬ್‌ ಧರಿಸದೆ ಹೋದರೆ  ಸಮಾಜದ ಕೆಂಗಣ್ಣಿಗೆ ಕೂಡಾ ಗುರಿಯಾಗುವುದುಂಟು. ಅದೇ ರೀತಿ ಇಲ್ಲೊಂದು ಘಟನೆ ನಡೆದಿದ್ದು,  ಮುಸ್ಲಿಂ ಇನ್ಫುಯೆನ್ಸರ್‌ ವಿಡಿಯೋ ಮಾಡುವಾಗ ಹಿಜಾಬ್‌ ಧರಿಸಿಲ್ಲವೆಂದು ಕೋಪಗೊಂಡ ಪೋಷಕರು ಆಕೆಗೆ ಮನ ಬಂದಂತೆ ಥಳಿಸಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೋಷಕರ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಈ ವಿಡಿಯೋವನ್ನು @OliLondonTv ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಟಿಕ್‌ ಟಾಕ್‌ ಲೈವ್‌ ಸ್ಟ್ರೀಮ್‌ ಅಲ್ಲಿ ತಲೆಗೆ ಹಿಬಾಜ್‌ ಧರಿಸದ ಕಾರಣ, ತನ್ನ ಹೆತ್ತವರಿಂದ ಥಳಿಸಲ್ಪಟ್ಟ ಮುಸ್ಲಿಂ ಇನ್ಫುಯೆನ್ಸರ್”‌ ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಟಿಕ್‌ ಟಾಕ್‌ ಲೈವ್‌ ಅಲ್ಲಿ ಇನ್ಫುಯೆನ್ಸರ್‌ ತನ್ನ ಫಾಲೋವರ್ಸ್‌ ಜೊತೆಗೆ ಚಿಟ್‌ ಚಾಟ್‌ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ವಿಡಿಯೋ ಮಾಡುವಾಗ ಆಕೆ ತುಂಡುಡುಗೆಯನ್ನು ಧರಿಸಿದ್ದಳು. ಮುಸ್ಲಿಂ ಯುವತಿಯಾಗಿ  ತುಂಡುಡುಗೆ ಧರಿಸಿದ್ದು ಮಾತ್ರವಲ್ಲದೆ ಎದೆಗೆ ಶಾಲು, ತಲೆಗೆ ಹಿಜಾಬ್‌ ಧರಿಸಿದರೆ ಇರುವುದನ್ನು ಕಂಡ ಆಕೆಯ ಪೋಷಕರು ಕೋಪಗೊಂಡು ಲೈವ್‌ ಅಲ್ಲಿಯೇ ಆಕೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಇದನ್ನೂ ಓದಿ: ತ್ರಿವಳಿ ತಲಾಖ್​​ನಿಂದ ನೊಂದು ಹಿಂದೂ ಯುವಕನೊಂದಿಗೆ ಮದುವೆಯಾದ ಮುಸ್ಲಿಂ ಮಹಿಳೆ

ಮೇ 08 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4.2 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಯುವತಿಯ ಪೋಷಕರ ಈ ಅತಿರೇಕದ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್