AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಭಾರತ ಶೀರ್ಷಿಕೆ ಗೀತೆಯನ್ನು ರಾಗಬದ್ಧವಾಗಿ ಹಾಡಿದ ಮುಸ್ಲಿಂ ವ್ಯಕ್ತಿ; ಧ್ವನಿ ಮತ್ತು ಸ್ಪಷ್ಟ ಉಚ್ಛಾರಣೆಗೆ ನೆಟ್ಟಿಗರಿಂದ ಶ್ಲಾಘನೆ

Viral Video: ಇದೀಗ ವೈರಲ್ ಆದ ವಿಡಿಯೋದಲ್ಲಿ ಮುಸ್ಲಿಂ ವ್ಯಕ್ತಿಯೋರ್ವರು ಮಹಾಭಾರತದ ಶೀರ್ಷಿಕೆ ಗೀತೆಯನ್ನು ಸುಮಧುರವಾಗಿ ಹಾಡಿದ್ದಾರೆ. ಅವರ ಧ್ವನಿ ಕೇಳಿದ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

ಮಹಾಭಾರತ ಶೀರ್ಷಿಕೆ ಗೀತೆಯನ್ನು ರಾಗಬದ್ಧವಾಗಿ ಹಾಡಿದ ಮುಸ್ಲಿಂ ವ್ಯಕ್ತಿ; ಧ್ವನಿ ಮತ್ತು ಸ್ಪಷ್ಟ ಉಚ್ಛಾರಣೆಗೆ ನೆಟ್ಟಿಗರಿಂದ ಶ್ಲಾಘನೆ
ಮಹಾಭಾರತ ಶಿರ್ಷಿಕೆ ಗೀತೆಯನ್ನು ರಾಗ ಬದ್ಧವಾಗಿ ಹಾಡಿದ ಮುಸ್ಲಿಂ ವ್ಯಕ್ತಿ; ಧ್ವನಿ ಮತ್ತು ಸ್ಪಷ್ಟ ಉಚ್ಛಾರಣೆಗೆ ನೆಟ್ಟಿಗರಿಂದ ಶ್ಲಾಘನೆ
TV9 Web
| Edited By: |

Updated on:Sep 22, 2021 | 1:19 PM

Share

ಮನೆಯವರೊಂದಿಗೆ ಕುಳಿತು ರಾಮಾಯಣ, ಮಹಾಭಾರತವನ್ನು ದೂರದರ್ಶನದಲ್ಲಿ ವೀಕ್ಷಿಸುತ್ತೇವೆ. ಪೌರಾಣಿಕ ಕಥೆ ತಿಳಿಯುವುದರ ಜತೆಗೆ ಕಥೆಯ ಕೂತೂಹಲಕರ ಸಂಗತಿಗಳನ್ನು ತಿಳಿಯಲು ಹೆಚ್ಚು ಆಸಕ್ತಿಯಿರುತ್ತದೆ. ಅದರಲ್ಲಿಯೂ ಮಹಾಭಾರತದ ಟೈಟಲ್​ ಟ್ರ್ಯಾಕ್ ಹೆಚ್ಚು​ ಜನಪ್ರಿಯತೆ ಗಳಿಸಿಕೊಂಡಿದೆ. ಇದೀಗ ವೈರಲ್ ಆದ ವಿಡಿಯೋದಲ್ಲಿ ಮುಸ್ಲಿಂ ವ್ಯಕ್ತಿಯೋರ್ವರು ಮಹಾಭಾರತದ ಶೀರ್ಷಿಕೆ ಗೀತೆಯನ್ನು ಸುಮಧುರವಾಗಿ ಹಾಡಿದ್ದಾರೆ. ಅವರ ಧ್ವನಿ ಕೇಳಿದ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

ಮುಸ್ಲಿಂ ವ್ಯಕ್ತಿಯೋರ್ವರು ಮಹಾಭಾರತ ಟೈಟಲ್ ಟ್ರ್ಯಾಕ್ ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಹಾಭಾರತ ಕಥೆಯ ಪೌರಾಣಿಕ ದೃಶ್ಯದ ಪ್ರಾರಂಭವನ್ನು ಹಾಡಿನ ಮೂಲಕ ತಿಳಿಸಿದ್ದಾರೆ. ಹಾಡನ್ನು ಹಾಡುತ್ತಲೇ, ಶಂಖನಾದವನ್ನೂ ಸಹ ಅವರು ಸ್ವತಃ ಧ್ವನಿಯಿಂದಲೇ ಪ್ರಸ್ತುತಪಡಿಸಿದ್ದಾರೆ.

ಈ ವಿಡಿಯೋವನ್ನು ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತರಾದ ಡಾ. ಎಸ್ ವೈ ಖುರೇಷಿ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಮೈಕ್ರೋಬ್ಲಾಗಿಂಗ್ ಪ್ಲಾಟ್​ ಫಾರ್ಮ್​ನಲ್ಲಿ ವಿಡಿಯೋ 1 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. 6,900 ಕ್ಕೂ ಹೆಚ್ಚು ಲೈಕ್ಸ್​ಗಳು ಲಭಿಸಿವೆ. ವ್ಯಕ್ತಿಯ ರಾಗ ಬದ್ಧ ಹಾಡನ್ನು ನೆಟ್ಟಿಗರು ಹೆಚ್ಚು ಇಷ್ಟಪಟ್ಟಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ಸ್ ವಿಭಾಗದಲ್ಲಿ ಹಂಚಿಕೊಳ್ಳುವ ಮೂಲಕ ಅನಿಸಿಕೆಗಳನ್ನು ತಿಳಿಸಿದ್ದಾರೆ.

ತುಂಬಾ ಚೆನ್ನಾಗಿದೆ, ಅವರ ಧ್ವನಿ ಮಧುರವಾಗಿದೆ ಎಂದು ಓರ್ವರು ಹೇಳಿದ್ದಾರೆ. ಅವರ ಉಚ್ಛಾರಣೆ ಸ್ಪಷ್ಟವಾಗಿದೆ ಎಂದು ಮತ್ತೋರ್ವರು ತಿಳಿಸಿದ್ದಾರೆ. ನನಗೆ ಈ ವಿಡಿಯೋ ತುಂಬಾ ಇಷ್ಟವಾಯಿತು, ಇದು ನನ್ನ ಬಾಲ್ಯದ ದಿನಗಳನ್ನು ನೆನಪಿಸುತ್ತದೆ, ಚಿಕ್ಕಂದಿನಲ್ಲಿ ಸಂಗೀತ ಹಾಡುತ್ತಿದ್ದ ನೆನಪು ಮರುಕಳಿಸುತ್ತಿದೆ ಎಂದು ಇನ್ನೋರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ತನ್ನ ಇಷ್ಟದ ಹಾಡು ಕೇಳಿದಾಗ ಈ ಪುಟ್ಟ ಮಗುವಿನ ರಿಯಾಕ್ಷನ್‌ ನೋಡಿ

Viral Video: ಅಜ್ಜಿಯ ಅಭಿನಯಕ್ಕೆ ನೆಟ್ಟಿಗರೆಲ್ಲಾ ಫಿದಾ! ವಿಡಿಯೋ ವೈರಲ್

(Muslim man sings Mahabharat title song video viral in social media)

Published On - 1:18 pm, Wed, 22 September 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ