Viral Post: ನನ್ನ ಅತ್ತೆ ಸಾಯಬೇಕು ಸ್ವಾಮಿ, ಅತ್ತೆಯ ಸಾವಿಗೆ ದೇವರ ಬಳಿ ಸೊಸೆಯ ಡೀಲ್

ಪ್ರತಿಯೊಬ್ಬರು ದೇವಸ್ಥಾನಕ್ಕೆ ಹೋದಾಗ ಒಳ್ಳೆಯ ಉದ್ಯೋಗ ಸಿಗಲಿ, ಆಯುರಾರೋಗ್ಯ ಲಭಿಸಲಿ, ಮಕ್ಕಳು ಮೊಮ್ಮಕ್ಕಳು ಚೆನ್ನಾಗಿರಲಿ ಎಂದು ದೇವರ ಬಳಿ ಮನಃಪೂರ್ವಕವಾಗಿ ಬೇಡಿ ದೇವಾಲಯದ ಹುಂಡಿಗೆ ಒಂದಷ್ಟು ಹಣವನ್ನು ಕಾಣಿಕೆ ಹಾಕುತ್ತಾರೆ. ಆದರೆ ಇಲ್ಲೊಬ್ಬಳು ಸೊಸೆ  50 ರೂಪಾಯಿ ನೋಟಿನಲ್ಲಿ ನನ್ನ ಅತ್ತೆ ಸಾಯಬೇಕು ಸ್ವಾಮಿ ಎಂಬ ಬರಹವನ್ನು  ಬರೆದು, ಆ ನೋಟನ್ನು ದೇವರ ಹುಂಡಿಗೆ ಕಾಣಿಕೆ ಹಾಕಿದ್ದಾಳೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

Viral Post: ನನ್ನ ಅತ್ತೆ ಸಾಯಬೇಕು ಸ್ವಾಮಿ, ಅತ್ತೆಯ ಸಾವಿಗೆ ದೇವರ ಬಳಿ ಸೊಸೆಯ ಡೀಲ್
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 07, 2024 | 4:36 PM

ಅತ್ತೆ ಸೊಸೆಯ ಮಧ್ಯೆ ಮನಸ್ತಾಪಗಳು,  ಜಗಳಗಳು ಇದ್ದಿದ್ದೆ ಅಲ್ವಾ. ಮನೆ ಕೆಲಸಗಳ ವಿಚಾರವಾಗಿ ಅತ್ತೆ ಸೊಸೆಯ ಮಧ್ಯೆ ಸಣ್ಣಪುಟ್ಟ ಜಗಳಗಳು ಏರ್ಪಡುತ್ತವೆ. ಹೀಗೆ ಮನಸ್ತಾಪಗಳು ಏರ್ಪಟ್ಟಾಗ ಕೆಲವೊಂದು ಸೊಸೆಯಂದಿರು  ಅತ್ತೆಗೆ ಎದುರುತ್ತರ ಕೊಡುತ್ತಾರೆ. ಇನ್ನೂ ಕೆಲವು ಸೊಸೆಯರು ಹಿರಿಯರಿಗೆ ಎದುರು ಮಾತನಾಡುವುದು ಸರಿಯಲ್ಲ ಎಂದು ಅತ್ತೆಗೆ ಏನು ಹೇಳದೆ ಸುಮ್ಮನಿರುತ್ತಾರೆ. ಆದರೆ ಇಲ್ಲೊಂದು ಅತ್ತೆಯ ಕಾಟವನ್ನು ತಡೆಯಲಾರದ ಸೊಸೆಯೊಬ್ಬಳು ಅತ್ತೆಯ ಸಾವಿಗಾಗಿ ದೇವರ ಬಳಿಯೇ ಡೀಲ್ ಕೊಟ್ಟಿದ್ದಾಳೆ. ಈ ಕುರಿತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೇವಾಲಯದ ಹುಂಡಿ ಎಣಿಕೆಯ ಸಂದರ್ಭದಲ್ಲಿ ನೋಟಿನ ಜೊತೆಗೆ ವಿಚಿತ್ರ ಬೇಡಿಕೆಗಳನ್ನು ಬರೆದಿಟ್ಟಿರುವ ಚೀಟಿಗಳು ಲಭಿಸಿರುವ ಸುದ್ದಿಗಳನ್ನು ಈ ಮೊದಲು ನೀವು ಕೇಳಿರುತ್ತೀರಿ ಅಲ್ವಾ. ಅದೇ ರೀತಿಯ ಘಟನೆಯೊಂದು ಇದೀಗ ನಡೆದಿದ್ದು, ಯಾರೋ 50 ರೂಪಾಯಿ ನೋಟಿನ ಮೇಲೆ ನನ್ನ ಅತ್ತೆ ಬೇಗ ಸಾಯಲಿ ಸ್ವಾಮಿ ಎಂದು ಬರೆದು ಆ ನೋಟನ್ನು ದೇವರ ಹುಂಡಿಗೆ ಹಾಕಿದ್ದಾರೆ. ಈ ನೋಟು ಹುಂಡಿ ಎಣಿಕೆಯ ಸಮಯದಲ್ಲಿ ಸಿಕ್ಕಿದ್ದು, ಈ ಕುರಿತ ಸುದ್ದಿ ಇದೀಗ ಸಖತ್ ವೈರಲ್ ಆಗಿದೆ.

ವೈರಲ್​​​ ಪೋಸ್ಟ್​​ ಇಲ್ಲಿದೆ ನೋಡಿ:

ಈ ಘಟನೆ ಗಾಣಗಾಪುರ ಕ್ಷೇತ್ರದ ದತ್ತಾತ್ರೇಯ ದೇವಾಲಯದಲ್ಲಿ ನಡೆದಿದೆ. ಹೌದು ಇತ್ತೀಚಿಗೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರದ ದತ್ತಾತ್ರೇಯ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನೆಡೆಯಿತು.  ಈ ಸಂದರ್ಭದಲ್ಲಿ ಯಾರೋ 50 ರೂಪಾಯಿ ನೋಟಿನ ಮೇಲೆ ನನ್ನ ಅತ್ತೆ ಸಾಯಬೇಕು ಸ್ವಾಮಿ ಎಂದು ಬರೆದು ದೇವರಿಗೆ ಕಾಣಿಕೆಯಾಕಿರುವಂತಹ ನೋಟು ಸಿಕ್ಕಿದೆ. ನೋಟಿನ ಮೇಲಿನ ಈ ಬರಹವನ್ನು ಕಂಡು ಎಲ್ಲರೂ ದಿಗ್ಭ್ರಾಂತರಾಗಿದ್ದಾರೆ.

ಇದನ್ನೂ ಓದಿ: ಭಿಕ್ಷಾಟನೆಯಿಂದಲೇ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸುವ ನಟ

ಈ ನೋಟಿನ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನೋಟಿನ ಮೇಲೆ ನನ್ನ ಅತ್ತೆ ಬೇಗ ಸಾಯಬೇಕು ಸ್ವಾಮಿ  ಎಂದು ಬರೆದಿರುವ ಬರಹವನ್ನು ಕಾಣಬಹುದು. ಈ ವೈರಲ್ ಫೋಟೋವನ್ನು @p_s.madiwal ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಕಲಬುರಗಿ ಜಿಲ್ಲೆಯ ಅಫಜಲಪುರದ ತಾಲೂಕಿನ ಗಾಣಗಾಪುರದ ದತ್ತಾತ್ರೇಯ ದೇವರ ಹುಂಡಿಯಲ್ಲಿ ಕಾಣಿಕೆ ಹಾಕಿರುವ 50 ರೂಪಾಯಿ ಮುಖ ಬೆಲೆಯ ನೋಟು ಪತ್ತೆಯಾಗಿದೆ. ಅದರಲ್ಲಿ ಬರೆದಿರುವ ಬರಹವನ್ನು ಗಮನಿಸಿ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ಈ ನೋಟಿನ ಫೋಟೋವನ್ನು ಕಂಡು ಅಬ್ಬಬ್ಬಾ ಇದ್ಯಾವತಹರದ ಬೇಡಿಕೆ ದೇವರೆ ಎಂದು ನೋಡುಗರು ಆಶ್ಚರ್ಯಚಕಿತರಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ