AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ

Kannada Short Stories : ನೀವು ಕನ್ನಡದಲ್ಲಿ ಕಥೆ ಬರೆಯುತ್ತೀರೆ ಅಥವಾ ಬರೆದ ಕಥೆಯನ್ನು ಓದುವಲ್ಲಿ ನಿಮಗೆ ಆಸಕ್ತಿ ಇದೆಯೇ? ಹಾಗಿದ್ದರೆ ಕನ್ನಡದ ಮೊದಲ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ನೀವು ಖಂಡಿತ ಭಾಗವಹಿಸಬಹುದು.

Viral: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ
ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​
ಶ್ರೀದೇವಿ ಕಳಸದ
|

Updated on:Jul 18, 2023 | 3:02 PM

Share

Challenge : ಅಯ್ಯೋ ಅದೊಂದು ದೊಡ್ಡ ಕಥೆ ಬಿಡು. ಅವನ ಕಥೆ ಕೇಳಿದರೆ ಅಷ್ಟೇ. ಅಂದಹಾಗೆ ಆ ಕಥೆ ಮುಂದೇನಾಯ್ತು? ಬರೆದರೆ ಅದೊಂದು ಕಥೆನೇ. ಆ ಕಥೆ ಓದಬೇಕು ಅಂದರೆ ಆಗ್ತಾನೇ ಇಲ್ಲ. ಬರೀಲೇಬೇಕಂತಿಲ್ಲ ಬರೆದ ಕಥೆಯನ್ನು ಓದಿದರೂ ಆಯ್ತು! ಹೌದಾ? ಹೌದು, ಇದೀಗ ಮೈಲ್ಯಾಂಗ್​ (Mylang) ಕನ್ನಡದ ಹೊಸ ತಲೆಮಾರಿನ ಓದುಗರನ್ನು ಸೆಳೆಯುವುದಕ್ಕಾಗಿ ಮತ್ತು ಕಥಾಪ್ರಿಯರಿಗಾಗಿ ಆಡಿಯೋಸ್ಟೋರಿ ಚಾಲೇಂಜ್​ ಏರ್ಪಡಿಸಿದೆ. ಕನ್ನಡದಲ್ಲಿ ನಡೆಯುತ್ತಿರುವ ಈ ಮೊದಲ ಪ್ರಯತ್ನದಲ್ಲಿ ನೀವೂ ಪಾಲ್ಗೊಳ್ಳಬಹುದು ಮತ್ತು  ರೂ. 10,000 ಬಹುಮಾನವನ್ನೂ ಪಡೆಯಬಹುದು! ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಮೈಲ್ಯಾಂಗ್ ಆಡಿಯೋ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು. ಕಥೆ ಬರೆಯಲು ಆಸಕ್ತಿ ಇದ್ದವರು ಈ ಅಪ್ಲಿಕೇಷನ್​ನಲ್ಲಿ ತಮ್ಮ ಕಥೆಗಳನ್ನು ಪ್ರಕಟಿಸಬಹುದು. ಇತರರ ಕಥೆಗಳಿಗೆ ಧ್ವನಿಯಾಗಲು ಇಚ್ಛಿಸುವವರು, ಅಂದರೆ ಕಥೆ ಓದಲು ಆಸಕ್ತಿ ಇರುವವರು ಈ ಅಪ್ಲೀಕೇಷನ್​ನಲ್ಲಿರುವ ಕಥೆಗಳನ್ನು ಆಯ್ಕೆ ಮಾಡಿಕೊಂಡು ಓದಿ ಅಲ್ಲಿಯೇ ಆಡಿಯೋ ಅಪ್​ಲೋಡ್ ಮಾಡಬೇಕು. ಆಯ್ದ ಕಥೆಗೆ ರೂ. 10,000 ನಗದು ಬಹುಮಾನ ನೀಡಲಾಗುತ್ತದೆ.

ಇದನ್ನೂ ಓದಿ : Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು

ಮೈಲ್ಯಾಂಗ್​ನ ವಸಂತ ಶೆಟ್ಟಿ, ‘ಹೊಸ ತಲೆಮಾರಿನವರಿಗೆ ಕನ್ನಡದ ರುಚಿಯನ್ನು ಕಥೆಗಳ ಮೂಲಕ ಉಣಿಸಬೇಕು. ಈ ಮೂಲಕ ಕನ್ನಡ ಸಾಹಿತ್ಯದಲ್ಲಿ ಈ ಪೀಳಿಗೆಯವರಲ್ಲಿ ಆಸಕ್ತಿ ಮೂಡಿಸಬೇಕು ಎನ್ನುವುದು ನಮ್ಮ ಆಶಯ. ಈ ಸ್ಪರ್ಧೆಗೆ ವಯಸ್ಸಿನ ಮಿತಿ ಇಲ್ಲ. ಕನ್ನಡದಲ್ಲಿ ಕಥೆ ಬರೆಯಬಲ್ಲ ಮತ್ತು ಕಥೆಗಳನ್ನು ಓದಬಲ್ಲ ಯಾರೂ ಇದರಲ್ಲಿ ಭಾಗವಹಿಸಬಹುದು. ಈ ಕುರಿತು ವಿವರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ದಿನವೇ 50 ಕಥೆಗಾರರು ತಮ್ಮ ಕಥೆಗಳನ್ನು ಮೈಲ್ಯಾಂಗ್​ನಲ್ಲಿ ಪ್ರಕಟಿಸಿದ್ದರು ಮತ್ತು 50 ಜನರು ಇತರರ ಕಥೆಗಳನ್ನು ಓದಿದ್ದರು. ಕರ್ನಾಟಕ ಅಷ್ಟೇ ಅಲ್ಲ, ಹೊರನಾಡ/ದೇಶಗಳಲ್ಲಿರುವ ಕನ್ನಡಿಗರೂ ಈ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ’ ಎನ್ನುತ್ತಾರೆ.

ನೀವೂ ಭಾಗವಹಿಸಿ, ಆಸಕ್ತರಿಗೂ ತಿಳಿಸಿ. ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:27 pm, Tue, 18 July 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ